Ranya Rao: ₹102 ಕೋಟಿ ದಂಡ ಕಟ್ಟಿ: ಜೈಲಿನಲ್ಲಿರೋ ನಟಿ ರನ್ಯಾ ರಾವ್ಗೆ ಬಿಗ್ ಶಾಕ್
ಅಕ್ರಮ ಚಿನ್ನ ಸಾಗಾಟ ಕೇಸ್ನಲ್ಲಿ ಜೈಲಿನಲ್ಲಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾ ಸಿಕ್ಕಿಬಿದ್ದಿದ್ದರು. ಸದ್ಯ ಜೈಲುವಾಸದಲ್ಲಿರುವ ಅವರಿಗೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹಾಗಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ಬರೋಬ್ಬರಿ 102.55 ಕೋಟಿ ದಂಡ ಪಾವತಿಸುವಂತೆ ರನ್ಯಾ ರಾವ್ಗೆ ನೋಟಿಸ್ ನೀಡಿದ್ದಾರೆ.
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದಲ್ಲಿ ರನ್ಯಾ ರಾವ್ ನಟಿಸಿದ್ದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ನಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ತನಿಖೆಯಲ್ಲಿ ರನ್ಯಾ ರಾವ್ ಅಕ್ರಮವಾಗಿ 127.3 ಕೆ.ಜಿ ಚಿನ್ನ ಸಾಗಾಟ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆ 102.55 ಕೋಟಿ ದಂಡ ಪಾವತಿಸುವಂತೆ ಡಿಆರ್ಐ ನೋಟಿಸ್ ನೀಡಿದೆ.

ಈ ಪ್ರಕರಣದಲ್ಲಿ ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್ಐ ಅಧಿಕಾರಿಗಳು ವಸೂಲಿ ಮಾಡಬೇಕಿದ್ದು, ಜೈಲಿಗೆ ತೆರಳಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ. ಇಂದು ಹೈಕೋರ್ಟ್ನಲ್ಲಿ ಕಾಫಿಪೋಸಾ ಅರ್ಜಿಯ ವಿಚಾರಣೆ ಕೂಡ ನಡೆದಿದ್ದು, ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ. ಹೀಗಾಗಿ ಡಿಆರ್ಐ ಅಧಿಕಾರಿಗಳು ತ್ವರಿತವಾಗಿ ತನಿಖೆ ನಡೆಸಿ ಆ ವಸ್ತುಗಳನ್ನು ರಿಕವರಿ ಮಾಡಿಕೊಳ್ಳಲಿದ್ದಾರೆ.
ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (ಕಾಫಿಫೋಸಾ) ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾ ರಾವ್ ಅವರಿಗೆ ಅವರ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ನೀಡಲಾಗುವುದಿಲ್ಲ ಎಂದು ತೀರ್ಪು ನೀಡಲಾಗಿದೆ.

ದುಬೈನಿಂದ ಅಕ್ರಮವಾಗಿ ಚಿನ್ನ ತಂದು ಸಿಕ್ಕಿಬಿದ್ದಿದ್ದ ನಟಿ ರನ್ಯಾ ದುಬೈಗೆ 15 ದಿನಕ್ಕೊಮ್ಮೆ ಹೋಗಿ ಬಂದಿರುವುದು ಡಿಆರ್ಐ ಅಧಿಕಾರಿಗಳ ತನಿಖೆಯಲ್ಲಿ ಬಯಲಾಗಿತ್ತು. 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದು ಬೆಳಕಿಗೆ ಬಂದಿತ್ತು. ದುಬೈನಿಂದ ಬೆಂಗಳೂರಿಗೆ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ಇಲ್ಲದೆ ರನ್ಯಾ ಹೊರಗೆ ಸಲೀಸಾಗಿ ಬರುತ್ತಿದ್ದರು. ಇದಕ್ಕೆ ಕಾನ್ಸಟೇಬಲ್ ಕೂಡ ಸಾಥ್ ನೀಡುತ್ತಿದ್ದರು. ಏರ್ಪೋರ್ಟ್ ಕಾನ್ಸಟೇಬಲ್ ಆದ ಬಸವರಾಜ್ ರನ್ಯಾ ರಾವ್ ಡಿಜಿಪಿ ಮಗಳು ಎಂದು ತಪಾಸಣೆ ಇಲ್ಲದೆ ಏರ್ಪೋರ್ಟ್ನಿಂದ ಕರೆತರುತ್ತಿದ್ದರು ಎಂದು ಹೇಳಲಾಗಿತ್ತು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications