ಕಾಂತಾರ ಚಾಪ್ಟರ್ - 1ರ ಬಗ್ಗೆ ಶಾಕಿಂಗ್ ಅಪ್ಡೇಟ್ಸ್ ಕೊಟ್ಟ ನಟಿ ಸಪ್ತಮಿ ಗೌಡ! Kantara Chapter - 1
Kantara Chapter - 1: ಕಾಂತಾರ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲವನ್ನೇ ಸೃಷ್ಟಿ ಮಾಡಿತ್ತು. ದೇಶದಾದ್ಯಂತ ಕನ್ನಡ ಸಿನಿಮಾದತ್ತ ಜನ ತಿರುಗಿ ನೋಡುವಂತೆ ಮಾಡಿತ್ತು. ಈ ಸಿನಿಮಾದ ನಂತರ ಕಾಂತಾರ ಚಾಪ್ಟರ್ 1ಗಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ಸಿನಿಮಾದ ಮೂಲಕ ಖ್ಯಾತಿ ಗಳಿಸಿರುವ ನಟಿ ಸಪ್ತಮಿ ಗೌಡ ಅವರು ಇದೀಗ ತೆಲುಗು ಸಿನಿಮಾದಲ್ಲಿ ಭರ್ಜರಿ ಬ್ಯೂಸಿಯಾಗಿದ್ದಾರೆ. ಕಾಂತಾರ ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಜೋಡಿಯನ್ನು ಕನ್ನಡಿಗರು ಮೆಚ್ಚಿಕೊಂಡಿದ್ದರು. ಆದರೆ, ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಭರ್ಜರಿ ಸಿದ್ಧತೆ ನಡೆದಿರುವಾಗಲೇ ಸಪ್ತಮಿ ಗೌಡ ಅವರು ಶಾಕಿಂಗ್ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.
ಸಪ್ತಮಿ ಗೌಡ ಅವರು ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಪ್ರಾಜೆಕ್ಟ್ಗಳನ್ನು ಒಪ್ಪಿಕೊಂಡಿದ್ದಾರೆ. ಸಪ್ತಮಿ ಗೌಡ 2020ರಲ್ಲಿ ಬಿಡುಗಡೆಯಾದ ಡಾಲಿ ಧನಂಜಯ್ ಅಭಿನಯದ ಪಾಪ್ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಇದಾದ ಮೇಲೆ ಹಿಂದಿ ಸಿನಿಮಾದಲ್ಲಿಯೂ ನಟಿಸಿದ್ದರು. ಇದೀಗ ಅವರು ತೆಲುಗು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ.

ಕಾಂತಾರ ಸಿನಿಮಾದ ನಂತರ ಈ ಸಿನಿಮಾದಲ್ಲಿ ನಟಿಸಿರುವ ನಟ & ನಟಿಯರು ಹಾಗೂ ಕಲಾವಿದರ ಕೆರಿಯರ್ನಲ್ಲಿ ಹೊಸ ಬದಲಾವಣೆ ಬಂದಿದೆ. ಇದೀಗ ಸಪ್ತಮಿ ಅವರ ಮುಂದೆ ಭರ್ಜರಿ ಪ್ರಾಜೆಕ್ಟ್ಗಳಿವೆ. ಈ ರೀತಿ ಇರುವಾಗಲೇ ಕಾಂತಾರ ಚಾಪ್ಟೆರ್ 1ರ ಬಗ್ಗೆ ರಿಯಾಕ್ಟ್ ಮಾಡಿದ್ದು. ಅವರ ಮಾತು ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಅಭಿಮಾನಿಗಳಿಗೆ ನಿರಾಸೆಯನ್ನೂ ಮೂಡಿಸಿದೆ. ಕಾಂತಾರದಲ್ಲಿ ಬಂಗಾರ ಸಿರಿಯೇ ಹಾಡು ಭಾರೀ ಹವಾ ಸೃಷ್ಟಿ ಮಾಡಿತ್ತು. ಅದೇ ರೀತಿ ಕಾಂತಾರ ಚಾಪ್ಟರ್ 1ರಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. First Day First Show Kannada ದೊಂದಿಗೆ ಅವರು ಮಾತನಾಡಿದ್ದಾರೆ.
ಇದೀಗ ಈ ಸಿನಿಮಾದ ಬಗ್ಗೆ ಮಾತನಾಡಿರುವ ಅವರು, ಶಾಕಿಂಗ್ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮುಂಚೆ ಈಗ ಮಾಡುತ್ತಿರುವ ಪ್ರಾಜೆಕ್ಟ್ಗಳ ಬಗ್ಗೆ ಮಾತನಾಡಿದ್ದಾರೆ. ಜುಲೈ 4ಕ್ಕೆ ತೆಲುಗಿನ ತಮ್ಮುಡು ಸಿನಿಮಾ ರಿಲೀಸ್ ಆಗಲಿದೆ. ದಿ ರೈಸ್ ಆಫ್ ಅಶೋಕ ಕನ್ನಡ ಸಿನಿಮಾ ಸಹ ಕೆಲವು ತಿಂಗಳುಗಳಲ್ಲಿ ಬಿಡುಗಡೆ ಆಗಲಿದೆ. ಇನ್ನೂ ಎರಡರಿಂದ ಮೂರು ಪ್ರಾಜೆಕ್ಟ್ಗಳು ಇವೆ. ಆ ಪ್ರೊಡೆಕ್ಷನ್ ಹೌಸ್ ಘೋಷಿಸಿದ ಮೇಲೆ ನಾನು ಖಂಡಿತ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ ಕಾಂತಾರ ಚಾಪ್ಟರ್ 1ರಲ್ಲಿ ನಾನು ಇರಲ್ಲ ಅಂತ ಹೇಳಿದ್ದಾರೆ.
ಹೌದು ಕಾಂತಾರ ಚಾಪ್ಟರ್1ರಲ್ಲಿ ನಾನು ನಟಿಸಿಲ್ಲ. ನಾನು ಈ ಸಿನಿಮಾದಲ್ಲಿ ನನ್ನ ಪಾತ್ರವೇನು ಇಲ್ಲ ಅಂತ ಅವರು ಹೇಳಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
-
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
Pawan Kalyan: ಪವನ್ ಕಲ್ಯಾಣ್ ವಿರುದ್ಧ ಕಾಮಿಡಿ ವಿಡಿಯೋ: ಸ್ಟ್ಯಾಂಡ್ಅಪ್ ಕಾಮಿಡಿಯನ್ ಅನುದೀಪ್ ಕಟಿಕಲಾ ಬಂಧನ -
Bengaluru Migration: ಬೆಂಗಳೂರಿಗೆ ನಾರ್ಥಿಗಳ ವಲಸೆಗೆ ಇದೇ ಕಾರಣ, ವೈರಲ್ ಪೋಸ್ಟ್ - ಚರ್ಚೆ -
Amruthadhare Serial: ಜೈದೇವ್ ಅಟ್ಟಹಾಸಕ್ಕೆ ಬ್ರೇಕ್ ಬೇಕು: ಗೌತಮ್ ದಿವಾನ್ಗೆ ಆಕ್ಷನ್ ಕೊಡಿ ಎಂದ ವೀಕ್ಷಕರು -
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
Dr BR Ambedkar: ಚುನಾವಣೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಪಕ್ಷವಲ್ಲ: ಸಿದ್ದರಾಮಯ್ಯ -
Viral: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪಾದಚಾರಿಗಳೇ ಕಾರಣವೆಂದ ಸಂಸ್ಥಾಪಕ: ಕಿಡಿಕಾರಿದ ನೆಟ್ಟಿಗರು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications