ನಟ ಪುನೀತ್ ರಾಜ್ಕುಮಾರ್ ಹುಡುಗರು ಚಿತ್ರದಲ್ಲಿ 'ಪಂಕಜ' ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ
Shefali Jariwala passed away: ಕನ್ನಡ ಸ್ಟಾರ್ ನಟ ಡಾ.ಪುನೀತ್ ರಾಜ್ಕುಮಾರ್ ಜೊತೆ ಹುಡುಗರು ಸಿನಿಮಾದಲ್ಲಿ ಸಾಂಗ್ವೊಂದಕ್ಕೆ ನೈತ್ಯ ಮಾಡಿದ್ದ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಾಗಾದ್ರೆ ಅವರು ಯಾರು ಹಾಗೂ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡಾ.ಪುನೀತ್ ರಾಜ್ಕುಮಾರ್ ಅವರ ನಟನೆಯ ಹುಡುಗರು ಸಿನಿಮಾದಲ್ಲಿ 'ಬೋರ್ಡು ಇರದ ಬಸ್ಸನು ಹತ್ತಿ ಬಂದ ಚೌಕರಿ, ತೊಂದ್ರೆ ಇಲ್ಲ ಪಂಕಜ' ಎನ್ನುವ ಹಾಡಿನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ (42) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿ ಕಿರುತೆರೆ ನಟಿ ಶೆಫಾಲಿ ಜರಿವಾಲಾ (42) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಟಿಯ ಆಪ್ತ ಸಂಬಂಧಿಕರ ಪ್ರಕಾರ, ಶುಕ್ರವಾರ ತಡರಾತ್ರಿ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶೆಫಾಲಿ ಅವರಿಗೆ ಹೃದಯಾಘಾತ ಆದ ಬಳಿಕ ಅವರ ಪತಿ ಪರಾಗ್ ತ್ಯಾಗಿ ಅವರು ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ವೈದ್ಯರು ಅವರು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ವರದಿ ಆಗಿದೆ.
ಇನ್ನು ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. 2000ರ ದಶಕದಲ್ಲಿ ತಮ್ಮ ರೀಮಿಕ್ಸ್ ವಿಡಿಯೋ 'ಕಾಂತ ಲಗಾ' ಮೂಲಕ ಶೆಫಾಲಿ ಜರಿವಾಲಾ ತುಂಬಾ ಪ್ರಸಿದ್ಧಿ ಪಡೆದವರಾಗಿದ್ದರು ಶೇಪಾಲಿ.
ಬಳಿಕ ಸ್ಟಾರ್ ನಟ ಸಲ್ಮಾನ್ ಖಾನ್ ಸೇರಿ ಹಲವು ನಟರ ಜೊತೆ ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ. ಅಲ್ಲದೆ, ಹಿಂದಿ ಬಿಗ್ ಬಾಸ್ 13ರಲ್ಲಿ ಸ್ಪರ್ಧಿ ಆಗಿದ್ಧರು. ಬಿಗ್ ಬಾಸ್ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲೂ ಶೆಫಾಲಿ ಜರಿವಾಲಾ ಪಾಲ್ಗೊಂಡಿದ್ದಾರೆ.
ನಿನ್ನೆ ರಾತ್ರಿ ಹೃದಯಾಘಾತದಿಂದ ಕುಸಿದು ಬಿದ್ದ ಹಿನ್ನೆಲೆ ಅವರನ್ನು ತಕ್ಷಣ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಪರೀಕ್ಷೆಯ ಬಳಿಕ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಇನ್ನು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಶೆಫಾಲಿ ಅವರ ಪತಿ ಮತ್ತು ನಟ ಪರಾಗ್ ತ್ಯಾಗಿ ಸೇರಿದಂತೆ ಮೂವರು ನಟಿನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ತಲುಪುವ ಮೊದಲೇ ಶೆಫಾಲಿ ಮೃತಪಟ್ಟಿದ್ದಾರೆ ಎಂದು ಮೂಲಳಿಂದ ತಿಳಿದುಬಂದಿದೆ. ನಟಿ ಶೆಫಾಲಿ ಜರಿವಾಲ್ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಕೆಲ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿದ್ದರು ಎಂದು ವರದಿಯಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications