'ಖಂಡಿತವಾಗಿ ಎಲ್ಲರೂ ಎಚ್ಚೆತ್ತುಕೊಳ್ಳುತ್ತಾರೆ': ಸ್ಯಾಂಡಲ್ವುಡ್ #MeToo ಬಗ್ಗೆ ತನಿಷಾ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 05: ಬೇರೆ ಭಾಷೆಯ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳಿಗೆ ಬ್ರೇಕ್ ಹಾಕಬೇಕು. ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಲ್ಲಿಕೆ ಆದ ನಂತರ ಕನ್ನಡ ಚಿತ್ರರಂಗದಲ್ಲೂ ಇಂತಹ ಪ್ರಕರಣ ತನಿಖೆ ಆಗಬೇಕು ಎನ್ನುವ ಅಭಿಪ್ರಾಯ ಜೋರಾಗಿ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ನಟರು, ನಟಿಯರು, ನಿರ್ದೇಶಕರು, ನಿರ್ಮಾಪಕರು ಹಾಗೂ ವಿವಿಧ ವಿಭಾಗಗಳ ತಂತ್ರಜ್ಞರು ಸೇರಿದಂತೆ ಅನೇಕರನ್ನೊಳಗೊಂಡ ಫೈರ್ ಸಂಸ್ಥೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿ ರಚಿಸುವಂತೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಫೈರ್ ಸಂಸ್ಥೆ ಮನವಿ ಮಾಡಿದೆ.

ಈ ಬಗ್ಗೆ ನಟಿ ತನಿಷಾ ಕುಪ್ಪಂಡ ಮಾತನಾಡಿದ್ದು, ಒಂದು ಒಳ್ಳೆಯ ಬೆಳವಣಿಗೆ ಆಗುತ್ತಿದೆ ಎಂದರೆ ಅದಕ್ಕೆ ಬೆಂಬಲ ಕೊಡಬೇಕು ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ಕುಟುಂಬದ ಹೆಣ್ಣು ಮಕ್ಕಳನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳುತ್ತೇವೋ ಹಾಗೇ ಬೇರೆಯವರ ಮನೆ ಹೆಣ್ಣು ಮಕ್ಕಳನ್ನು ಅಷ್ಟೇ ಗೌರವದಿಂದ ನಡೆಸಿಕೊಂಡರೆ ಇಂತಹ ಒಂದು ವಿಷಯನೇ ಕಾಣಿಸಿಕೊಳ್ಳುವುದಿಲ್ಲ. ಏನಾದರೂ ಒಂದು ಸಮಿತಿಯಾಗಿ ಏನಾದರೂ ಒಂದು ರೂಲ್ಸ್ ಅಂತಾ ಬಂದರೆ ಜೊತೆ ಶಿಕ್ಷೆ ಆಗುವಂತಿದ್ದರೆ ಖಂಡಿತವಾಗಿ ಎಲ್ಲರೂ ಎಚ್ಚೆತ್ತುಕೊಳ್ಳುತ್ತಾರೆ. ಏನೇ ಒಳ್ಳೆದಾಗುವುದಿದ್ದರೂ ನಾವು ಅದಕ್ಕೆ ಬೆಂಬಲ ಕೊಡಬೇಕು' ಎಂದು ಹೇಳಿದ್ದಾರೆ.
ಮಾತು ಮುಂದುವರಿಸಿದ ತನಿಷಾ, 'ಸಮಯಕ್ಕೆ ತಕ್ಕ ಹಾಗೇ ನಾವು ಅದನ್ನು ಒಪ್ಪಿಕೊಳ್ಳಲು ಶುರು ಮಾಡುತ್ತೇವೆ. ಒಂದೇ ಬೈಯುತ್ತೇವೆ, ಕೂಗಾಡುತ್ತೇವೆ ಇಲ್ಲ ಬ್ಲಾಕ್ ಮಾಡುತ್ತೇವೆ. ಆ ಸಮಯಕ್ಕೆ ಏನು ರಿಯ್ಯಾಕ್ಟ್ ಮಾಡಬೇಕು ಅಂತಾ ಅನಿಸುತ್ತದೋ ಅದನ್ನು ಮಾಡುತ್ತೇನೆ. ಎಲ್ಲಾ ವಿಚಾರಗಳು ನಮ್ಮ ಮೇಲೆ ಡಿಪೆಂಡ್ ಆಗಿರುತ್ತದೆ. ನಮ್ಮದೇ ಆದ ಒಂದು ಲಿಮಿಟ್ ಇದ್ದಾಗ ಯಾರೂ ಏನೂ ಮಾಡಲು ಆಗಲ್ಲ.
ನಾನು ಹೆಣ್ಣು ಮಕ್ಕಳಿಗೆ ಏನು ಹೇಳುವುದೆಂದರೆ ನಾವು ಒಂದು ಗಡಿ ಇಟ್ಟುಕೊಳ್ಳಬೇಕು. ನಾವು ಯಾವಾಗ ಅವಕಾಶ ಕೊಡುತ್ತೇವೆ ಆಗ ಯಾರು ಬೇಕಾದರೂ ಬರುತ್ತಾರೆ. ಎಷ್ಟು ಬೇಕಾದರೂ ಮಾತನಾಡುತ್ತಾರೆ. ಏನು ಬೇಕಾದರೂ ರಿಯ್ಯಾಕ್ಟ್ ಮಾಡುತ್ತಾರೆ. ನಮ್ಮ ಮಿತಿಯಲ್ಲಿ ನಾವಿದ್ದಾಗ ಸ್ವಲ್ಪ ನಮಗೆ ಸೇಫ್ ಅಂತಾ ಅನಿಸುತ್ತದೆ' ಎಂದು ಹೇಳಿದರು.

'ಇದನ್ನು ಹೊರತುಪಡಿಸಿ ಏನಾದರೂ ಆಯಿತು ಅಂದರೆ ನಾವು ತಕ್ಷಣ ಅದಕ್ಕೆ ಪ್ರತಿಕ್ರಿಯಿಸಬೇಕು. ಈ ವಿಚಾರವನ್ನು ನಿಮ್ಮ ತಂದೆ-ತಾಯಿ ಅಕ್ಕ-ತಂಗಿಯರು ಯಾರ ಬಳಿ ಆದರೂ ಹೇಳಿಕೊಳ್ಳಿ' ಎಂದು ತನಿಷಾ ಹೆಣ್ಣು ಮಕ್ಕಳಿಗೆ ಸಲಹೆ ನೀಡಿದ್ದಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ











Click it and Unblock the Notifications