Vijay Suriya: ಹೆಸರು ಬದಲಿಸಿಕೊಂಡ ಅಗ್ನಿಸಾಕ್ಷಿ ನಟ ವಿಜಯ್ ಸೂರ್ಯ; ಹೊಸ ಹೆಸರೇನು?
ನಟ ವಿಜಯ್ ಸೂರ್ಯ ಯಾರಿಗೆ ತಾನೆ ಪರಿಚಯ ಇಲ್ಲ ಹೇಳಿ. ಗುಳಿ ಕೆನ್ನೆ, ಕ್ಯೂಟ್ ಸ್ಮೈಲ್, ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ವಿಜಯ್ ಸೂರ್ಯ ಕೆಲವು ಹುಡುಗಿಯರಿಗೆ ಫಾರೆವರ್ ಕ್ರಶ್. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದ ನಟ ವಿಜಯ್ ಸೂರ್ಯ ಇಷ್ಟ ಕಾಮ್ಯ ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆಯಲ್ಲೂ ಮಿಂಚಿದ್ದರು.
ನಟನೆಯಿಂದ ಸ್ವಲ್ಪ ಸಮಯ ವಿರಾಮದಲ್ಲಿದ್ದ ವಿಜಯ್ ಸೂರ್ಯ ಮತ್ತೆ ನಮ್ಮ ಲಚ್ಚಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮನ್ನು ತೆರೆ ಮೇಲೆ ಮಿಸ್ ಮಾಡಿಕೊಳ್ಳುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದರು. ಇತ್ತಿಚಿಗೆ ನಮ್ಮ ಲಚ್ಚಿ ಧಾರಾವಾಹಿ ಕೂಡ ಅಂತ್ಯವಾಗಿದ್ದು, ಮತ್ತೆ ವಿಜಯ್ ಸೂರ್ಯ ಅವರ ಮುಂದಿನ ಧಾರಾವಾಹಿ ಅಥವಾ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಈ ನಡುವೆಯೇ ನಟ ವಿಜಯ್ ಸೂರ್ಯ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ. ಹೌದು ಈ ಬಾರಿಯ ಅಮ್ಮಂದಿರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿಕೊಂಡಿರುವ ವಿಜಯ್ ಸೂರ್ಯ ಅಂದೇ ತಮ್ಮ ಹೆಸರು ಬದಲಿಸಿಕೊಂಡಿರುವ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. 'ಇಂದಿನಿಂದ ನಾನು ನನ್ನ ಹೆಸರನ್ನು 'ವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು' ಎಂದು ಹೇಳುವ ಮೂಲಕ ತಮ್ಮ ಹೆಸರನ್ನು ಬದಲಿಸಿಕೊಂಡಿರುವ ಬಗ್ಗೆ ವಿಜಯ್ ಸೂರ್ಯ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ವಿಜಯ್ ಸೂರ್ಯ, 'ಅಮ್ಮ ಹಚ್ಚಿದೊಂದು ಹಣತೆ ಇನ್ನೂ ಬೆಳಗಿದೆ. ಮನಕೆ ಮಬ್ಬು ಕವಿಯದಂತೆ ಸದಾ ಕಾದಿದೆ. ಎಂ.ಆರ್ ಕಮಲಾ ಅವರು ಬರೆದ ಈ ಸಾಲನ್ನು ಮನದಲ್ಲಿ ನೆನೆಯುತ್ತಾ ಅಮ್ಮನಿಗೊಂದು ಭಾವುಕ ನಮನ ಸಲ್ಲಿಸುತ್ತೇನೆ. Happy Mother's Day Amma.
ಇಷ್ಟು ಹೇಳಿದರೆ ಸಾಕಾ ? ಅಮ್ಮ ಪ್ರತಿ ಕ್ಷಣದ ಮಿಡಿತ ಅಲ್ವಾ ? ಈ ಪ್ರಶ್ನೆ ನನ್ನನ್ನು ಸದಾ ಕಾಡಿದೆ ಇದಕ್ಕೆ ಉತ್ತರ ಹುಡುಕಲು ಹೊರಟಾಗ ಅನ್ನಿಸಿದ್ದು ನನ್ನ ಹೆಸರಿನಲ್ಲಿ ಅಮ್ಮನ ಹೆಸರು ಬೆರೆತರೆ ಹೇಗೆ ಎಂಬ ಭಾವ. ಅದನ್ನು ಅಳವಡಿಸಿಕೊಳ್ಳಲು ಅಮ್ಮಂದಿರ ದಿನಕ್ಕಿಂತ ವಿಶೇಷ ಸಂದರ್ಭ ಯಾವುದಿದೆ ಅಲ್ವಾ ? ಹೌದು ಇಂದಿನಿಂದ ನಾನು ನನ್ನ ಹೆಸರನ್ನು ವಿಜಯ್ ಲಲಿತಾ ಸೂರ್ಯ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು. ಜಗತ್ತಿನ ಎಲ್ಲ ಅಮ್ಮಂದಿರಿಗೂ ನನ್ನ ಶುಭಾಶಯಗಳು. ನಿಮ್ಮವನು ವಿಜಯ್ ಲಲಿತಾ ಸೂರ್ಯ' ಎಂದು ವಿಜಯ್ ಸೂರ್ಯ ಬರೆದುಕೊಂಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications