Amitabh Bachchan: ಅಮಿತಾಬ್ ಬಚ್ಚನ್ ದಿಢೀರನೇ ಆಸ್ಪತ್ರೆಗೆ ದಾಖಲು!
ಬಾಲಿವುಡ್ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದ ಹಿನ್ನೆಲೆ ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ. 81 ವರ್ಷದ ಹಿರಿಯ ನಟರಾದ ಅಮಿತಾಬ್ ಬಚ್ಚನ್ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಮುಂಜಾನೆ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತಾಬ್ ಬಚ್ಚನ್ ಅವರಿಗೆ ವಯೋಸಹಜವಾಗಿ ಇತ್ತೀಚಿನ ಕೆಲ ಸಮಯದಿಂದ ಪದೇ ಪದೇ ಅನಾರೋಗ್ಯ ಉಂಟಾಗುತ್ತಿದ್ದು, ಅಮಿತಾಬ್ ಬಚ್ಚನ್ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನೂ ಹಿರಿಯ ನಟರಾದ ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗುವ ಒಂದು ಗಂಟೆ ಮೊದಲು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ' T4950- ಎಂದೆಂದಿಗೂ ಕೃತಜ್ಞತೆಯಲ್ಲಿ' ಎಂದು ಬರೆದುಕೊಂಡಿದ್ದರು.
ಸದ್ಯ ಹಿರಿಯ ನಟನ ಆರೋಗ್ಯದ ಬಗ್ಗೆ ಅಭಿಮಾನಿಗಳು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದಾಕ್ಷಣ ಅಮಿತಾಭ್ ಬಚ್ಚನ್ ಅವರಿಗೆ ಹೃದಯಕ್ಕೆ ಸಂಬಂಧಿಸಿದ ತೊಂದರೆ ಎದುರಾಗಿರಬಹುದಾ ಎಂಬ ಅನುಮಾನ ಮೂಡುತ್ತದೆ. ಆದರೆ ಕಾಲಿನ ರಕ್ತನಾಳದ ಸಮಸ್ಯೆ ಇರುವುದರಿಂದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಬರಬೇಕಿದೆ. ಸ್ಪತ್ರೆ ಅಥವಾ ಕುಟುಂಬದವರು ಹೆಲ್ತ್ ಅಪ್ಡೇಟ್ ನೀಡಲಿ ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.
-
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications