Amitabh Bachchan: ಮತ್ತೊಮ್ಮೆ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ- ಫೋಟೋ ಹಂಚಿಕೊಂಡ ಬಿಗ್ಬಿ
ಬಾಲಿವುಡ್ನ ಬಿಗ್ಬಿ ಅಮಿತಾಬ್ ಬಚ್ಚನ್ ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ರಾಮಲಾಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೀಗ ಅಮಿತಾಬ್ ಬಚ್ಚನ್ ಮತ್ತೊಮ್ಮೆ ಅಯೋಧ್ಯೆಗೆ ಭೇಟಿ ನೀಡಿ ರಾಮಮಂದಿರದಲ್ಲಿ ರಾಮನ ದರ್ಶನ ಪಡೆದಿದ್ದಾರೆ. ದರ್ಶನದ ಒಂದು ದಿನದ ನಂತರ ನಟ ತಮ್ಮ ಎಕ್ಸ್ (ಟ್ವಿಟ್ಟರ್) ಹ್ಯಾಂಡಲ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ಅನೇಕ ಬಾಲಿವುಡ್ ನಟ-ನಟಿಯರು ಭಾಗವಹಿಸಿದ್ದರು. ಅವರಲ್ಲಿ ಅಮಿತಾಬ್ ಬಚ್ಚನ್ ಕೂಡ ಒಬ್ಬರು. ಆ ಬಳಿಕ ಮತ್ತೆ ಅವರು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಬಿಳಿ ಕುರ್ತಾ, ಪೈಜಾಮ ಮತ್ತು ಕೇಸರಿ ಜಾಕೆಟ್ ಅನ್ನು ಧರಿಸಿದ್ದರು.

ರಾಮ ಮಂದಿರಕ್ಕೆ ಮತ್ತೆ ಭೇಟಿ ನೀಡಿದ ಅಮಿತಾಬ್ ಬಚ್ಚನ್
ಶನಿವಾರ Xನಲ್ಲಿ (ಹಿಂದಿನ ಟ್ವಿಟರ್) ಅಮಿತಾಬ್ ಬಚ್ಚನ್ ಅವರು ಹೊಸದಾಗಿ ನಿರ್ಮಿಸಲಾದ ರಾಮಮಂದಿರದ ಒಳಗಿನ ತಾವಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಅಮಿತಾಬ್ ಬಚ್ಚನ್ ಅವರು ಮುಗುಳ್ನಗುತ್ತಿರುವುದನ್ನು ಕಾಣಬಹುದು. ಜೊತೆಗೆ ಅವರು ಕೈಗಳನ್ನು ಮಡಚಿ ದೇವರ ಕಡೆಗೆ ನೋಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ. ಚಿತ್ರವನ್ನು ಹಂಚಿಕೊಳ್ಳುವಾಗ ಅವರು ಹಿಂದಿಯಲ್ಲಿ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಅಮಿತಾಭ್ ಅವರು ಅಯೋಧ್ಯೆ ಭೇಟಿ ಕುರಿತು ಟಿಪ್ಪಣಿ
ಅಮಿತಾಬ್ ಬಚ್ಚನ್ ಅವರು ತಮ್ಮ ಬ್ಲಾಗ್ನಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಹೀಗೆ ಬರೆದಿದ್ದಾರೆ, " ಅಯೋಧ್ಯೆಯಲ್ಲಿ ಮತ್ತೊಮ್ಮೆ ಭಗವಂತನ ದರ್ಶನ.. ಭವ್ಯ, ಪ್ರಶಾಂತವಾದ ಆ ದೈವತ್ವದ ಮೇಲೆ ನಮ್ಮ ಭಕ್ತಿ ಹೆಚ್ಚಾಯಿತು. ಪರಮಾತ್ಮನ ಪ್ರೀತಿ ಮತ್ತು ಆಶೀರ್ವಾದವು ನಮ್ಮೆಲ್ಲರೊಳಗೆ ಉಳಿಯಲಿ" ಎಂದು ಬರೆದಿದ್ದಾರೆ.
T 4916 - जय श्री राम 🚩
— Amitabh Bachchan (@SrBachchan) February 10, 2024
आस्था ने फिर बुलाया, और खींचे चले गये हम pic.twitter.com/FoqCdG5zIb
ಕಳೆದ ತಿಂಗಳು ಪ್ರಾಣ ಪ್ರತಿಷ್ಠೆಯಲ್ಲಿ ಅಮಿತಾಭ್ ಭಾಗಿ
ಅಮಿತಾಭ್ ಅವರು ಜನವರಿ 22 ರಂದು ರಾಮ ಮಂದಿರದ ಮಹಾಭಿಷೇಕ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ತಿಂಗಳು ದರ್ಶನದ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಮ್ಮ ಪ್ರಯಾಣದ ಒಂದು ನೋಟವನ್ನು ಹಂಚಿಕೊಂಡಿದ್ದರು. ಆಗಲೂ ಅವರು ತಮ್ಮ ಬ್ಲಾಗ್ ಪೋಸ್ಟ್ನಲ್ಲಿ, "ದೈವಿಕ ಚೈತನ್ಯದಿಂದ ತುಂಬಿದ ದಿನ.. ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಂದು ವೈಭವ, ಆಚರಣೆ ಮತ್ತು ನಂಬಿಕೆ ಮುಳುಗಿತ್ತು.
ಇದಕ್ಕಿಂತ ಹೆಚ್ಚಿಗೆ ಏನನ್ನೂ ಹೇಳಲು ಸಾಧ್ಯವಿಲ್ಲ ... ಏಕೆಂದರೆ ನಂಬಿಕೆಗೆ ಯಾವುದೇ ವಿವರಣೆಯಿಲ್ಲ'' ಎಂದು ಬರೆದಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವು ದಿನಗಳ ಮೊದಲು ಅಮಿತಾಬ್ ಅವರು ಅಯೋಧ್ಯೆಯಲ್ಲಿ 10,000 ಚದರ ಅಡಿ ಜಾಗವನ್ನು ಖರೀದಿಸಿದ್ದರು ಎಂಬುದು ಗಮನಾರ್ಹ.
ಅಮಿತಾಬ್ ಅವರ ಮುಂಬರುವ ಚಿತ್ರಗಳು
ಅಮಿತಾಭ್ ಬಚ್ಚನ್ ಶೀಘ್ರದಲ್ಲೇ ಕಲ್ಕಿ 2898 AD ಯಲ್ಲಿ ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್ ಅವರೊಂದಿಗೆ ವಿಜ್ಞಾನ-ಕಾಲ್ಪನಿಕ ಆಕ್ಷನ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಮೇ 9 ರಂದು ದೊಡ್ಡ ಪರದೆಯಲ್ಲಿ ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಿಭು ದಾಸ್ಗುಪ್ತಾ ನಿರ್ದೇಶನದ ಈ ಚಿತ್ರದಲ್ಲಿ ಡಯಾನಾ ಪೆಂಟಿ, ನಿಮ್ರತ್ ಕೌರ್ ಮತ್ತು ಅಭಿಷೇಕ್ ಬ್ಯಾನರ್ಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications