Amitabh Bachchan: ಮತ್ತೊಮ್ಮೆ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ- ಫೋಟೋ ಹಂಚಿಕೊಂಡ ಬಿಗ್ಬಿ
ಬಾಲಿವುಡ್ನ ಬಿಗ್ಬಿ ಅಮಿತಾಬ್ ಬಚ್ಚನ್ ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ರಾಮಲಾಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೀಗ ಅಮಿತಾಬ್ ಬಚ್ಚನ್ ಮತ್ತೊಮ್ಮೆ ಅಯೋಧ್ಯೆಗೆ ಭೇಟಿ ನೀಡಿ ರಾಮಮಂದಿರದಲ್ಲಿ ರಾಮನ ದರ್ಶನ ಪಡೆದಿದ್ದಾರೆ. ದರ್ಶನದ ಒಂದು ದಿನದ ನಂತರ ನಟ ತಮ್ಮ ಎಕ್ಸ್ (ಟ್ವಿಟ್ಟರ್) ಹ್ಯಾಂಡಲ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ಅನೇಕ ಬಾಲಿವುಡ್ ನಟ-ನಟಿಯರು ಭಾಗವಹಿಸಿದ್ದರು. ಅವರಲ್ಲಿ ಅಮಿತಾಬ್ ಬಚ್ಚನ್ ಕೂಡ ಒಬ್ಬರು. ಆ ಬಳಿಕ ಮತ್ತೆ ಅವರು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಬಿಳಿ ಕುರ್ತಾ, ಪೈಜಾಮ ಮತ್ತು ಕೇಸರಿ ಜಾಕೆಟ್ ಅನ್ನು ಧರಿಸಿದ್ದರು.

ರಾಮ ಮಂದಿರಕ್ಕೆ ಮತ್ತೆ ಭೇಟಿ ನೀಡಿದ ಅಮಿತಾಬ್ ಬಚ್ಚನ್
ಶನಿವಾರ Xನಲ್ಲಿ (ಹಿಂದಿನ ಟ್ವಿಟರ್) ಅಮಿತಾಬ್ ಬಚ್ಚನ್ ಅವರು ಹೊಸದಾಗಿ ನಿರ್ಮಿಸಲಾದ ರಾಮಮಂದಿರದ ಒಳಗಿನ ತಾವಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಅಮಿತಾಬ್ ಬಚ್ಚನ್ ಅವರು ಮುಗುಳ್ನಗುತ್ತಿರುವುದನ್ನು ಕಾಣಬಹುದು. ಜೊತೆಗೆ ಅವರು ಕೈಗಳನ್ನು ಮಡಚಿ ದೇವರ ಕಡೆಗೆ ನೋಡುತ್ತಿರುವುದು ಫೋಟೋದಲ್ಲಿ ಸೆರೆಯಾಗಿದೆ. ಚಿತ್ರವನ್ನು ಹಂಚಿಕೊಳ್ಳುವಾಗ ಅವರು ಹಿಂದಿಯಲ್ಲಿ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಅಮಿತಾಭ್ ಅವರು ಅಯೋಧ್ಯೆ ಭೇಟಿ ಕುರಿತು ಟಿಪ್ಪಣಿ
ಅಮಿತಾಬ್ ಬಚ್ಚನ್ ಅವರು ತಮ್ಮ ಬ್ಲಾಗ್ನಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಹೀಗೆ ಬರೆದಿದ್ದಾರೆ, " ಅಯೋಧ್ಯೆಯಲ್ಲಿ ಮತ್ತೊಮ್ಮೆ ಭಗವಂತನ ದರ್ಶನ.. ಭವ್ಯ, ಪ್ರಶಾಂತವಾದ ಆ ದೈವತ್ವದ ಮೇಲೆ ನಮ್ಮ ಭಕ್ತಿ ಹೆಚ್ಚಾಯಿತು. ಪರಮಾತ್ಮನ ಪ್ರೀತಿ ಮತ್ತು ಆಶೀರ್ವಾದವು ನಮ್ಮೆಲ್ಲರೊಳಗೆ ಉಳಿಯಲಿ" ಎಂದು ಬರೆದಿದ್ದಾರೆ.
T 4916 - जय श्री राम 🚩
— Amitabh Bachchan (@SrBachchan) February 10, 2024
आस्था ने फिर बुलाया, और खींचे चले गये हम pic.twitter.com/FoqCdG5zIb
ಕಳೆದ ತಿಂಗಳು ಪ್ರಾಣ ಪ್ರತಿಷ್ಠೆಯಲ್ಲಿ ಅಮಿತಾಭ್ ಭಾಗಿ
ಅಮಿತಾಭ್ ಅವರು ಜನವರಿ 22 ರಂದು ರಾಮ ಮಂದಿರದ ಮಹಾಭಿಷೇಕ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ತಿಂಗಳು ದರ್ಶನದ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಮ್ಮ ಪ್ರಯಾಣದ ಒಂದು ನೋಟವನ್ನು ಹಂಚಿಕೊಂಡಿದ್ದರು. ಆಗಲೂ ಅವರು ತಮ್ಮ ಬ್ಲಾಗ್ ಪೋಸ್ಟ್ನಲ್ಲಿ, "ದೈವಿಕ ಚೈತನ್ಯದಿಂದ ತುಂಬಿದ ದಿನ.. ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಂದು ವೈಭವ, ಆಚರಣೆ ಮತ್ತು ನಂಬಿಕೆ ಮುಳುಗಿತ್ತು.
ಇದಕ್ಕಿಂತ ಹೆಚ್ಚಿಗೆ ಏನನ್ನೂ ಹೇಳಲು ಸಾಧ್ಯವಿಲ್ಲ ... ಏಕೆಂದರೆ ನಂಬಿಕೆಗೆ ಯಾವುದೇ ವಿವರಣೆಯಿಲ್ಲ'' ಎಂದು ಬರೆದಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವು ದಿನಗಳ ಮೊದಲು ಅಮಿತಾಬ್ ಅವರು ಅಯೋಧ್ಯೆಯಲ್ಲಿ 10,000 ಚದರ ಅಡಿ ಜಾಗವನ್ನು ಖರೀದಿಸಿದ್ದರು ಎಂಬುದು ಗಮನಾರ್ಹ.
ಅಮಿತಾಬ್ ಅವರ ಮುಂಬರುವ ಚಿತ್ರಗಳು
ಅಮಿತಾಭ್ ಬಚ್ಚನ್ ಶೀಘ್ರದಲ್ಲೇ ಕಲ್ಕಿ 2898 AD ಯಲ್ಲಿ ದೀಪಿಕಾ ಪಡುಕೋಣೆ ಮತ್ತು ಪ್ರಭಾಸ್ ಅವರೊಂದಿಗೆ ವಿಜ್ಞಾನ-ಕಾಲ್ಪನಿಕ ಆಕ್ಷನ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಮೇ 9 ರಂದು ದೊಡ್ಡ ಪರದೆಯಲ್ಲಿ ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಿಭು ದಾಸ್ಗುಪ್ತಾ ನಿರ್ದೇಶನದ ಈ ಚಿತ್ರದಲ್ಲಿ ಡಯಾನಾ ಪೆಂಟಿ, ನಿಮ್ರತ್ ಕೌರ್ ಮತ್ತು ಅಭಿಷೇಕ್ ಬ್ಯಾನರ್ಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications