Amruthadhare Serial: ಕೊನೆಗೂ ಕೂಡಿ ಬಂತು ಅಮೃತ ಘಳಿಗೆ, ಗೌತಮ್ಗೆ ಸಿಕ್ಕೇ ಬಿಟ್ಳು ಭೂಮಿಕಾ: ಇದು ಕನಸೋ, ನಿಜಾನೋ?
ಅಮೃತಧಾರೆ ಧಾರಾವಾಹಿಯಲ್ಲಿ ಸದ್ಯ ಐದು ವರ್ಷಗಳ ಗೌತಮ್ ವನವಾಸ ಮುಂದುವರೆದಿದೆ. ಹೆಂಡತಿ, ಮಗುಗಾಗಿ ಆಸ್ತಿ-ಹಣ- ಅಂತಸ್ತುನ್ನ ಶಕುಂತಲಾ ಮಡಿಲಿಗೆ ಹಾಕಿ ಗೌತಮ್ ಸದ್ಯ ತನ್ನ ನೆಮ್ಮದಿ ಹುಡುಕಿಕೊಂಡು ಅಲೆಯುತ್ತಿದ್ದಾನೆ. ಕೋಟ್ಯಾಧಿಪತಿಯಾಗಿದ್ದ ಗೌತಮ್ ದಿವಾನ್ ಸದ್ಯ ಕ್ಯಾಬ್ ಡ್ರೈವರ್ ಆಗಿ ಕಳೆದ ಐದು ವರ್ಷಗಳಿಂದ ಮನದರಸಿ ಭೂಮಿಕಾ ಹಾಗೂ ಮಗುವನ್ನ ಹುಡುಕುತ್ತಿದ್ದಾನೆ. ಇತ್ತ ಕೇಡಿ ಶಕುಂತಲಾ ಹಾಗೂ ಜೈದೇವ್ ವಿರುದ್ಧ ಹೋರಾಡಲು ಸಾಧ್ಯವಾಗದೇ ಶಸ್ತ್ರ ತ್ಯಾಗ ಮಾಡಿರುವ ಭೂಮಿಕಾ ತನ್ನ ಮಗು ಹಾಗೂ ಮಲ್ಲಿ ಜೊತೆ ಕುಶಾಲ ನಗರದಲ್ಲಿ ಬಿಡಾರ ಹೂಡಿದ್ದಾಳೆ.
ಅಮೃತಧಾರೆ' ಧಾರಾವಾಹಿಯಲ್ಲಿ ಇತ್ತೀಚೆಗೆ ಹಲವು ಬೆಳವಣಿಗೆಗಳು ನಡೆದವು. ಈ ಬೆಳವಣಿಗೆಗಳಲ್ಲಿ ಗೌತಮ್ ಹಾಗೂ ಭೂಮಿಕಾ ಬೇರೆ ಆಗಿದ್ದು ಕೂಡ ಒಂದು. ಭೂಮಿಕಾಳಿಗೆ ಶಕುಂತಲ ಬೆದರಿಕೆ ಹಾಕಿದ್ದಾಳೆ. ಈ ಬೆದರಿಕೆಯಿಂದ ಬೇಸತ್ತು ಭೂಮಿಕಾ ಮಗನ ಕರೆದುಕೊಂಡು ಮನೆ ಬಿಟ್ಟು ಹೋಗುತ್ತಾಳೆ. ಶಿಕ್ಷಕಿಗಾಗಿ ಭೂಮಿಕಾ ತನ್ನ ಜೀವನವನ್ನ ಕಟ್ಟಿಕೊಂಡಿದ್ದಾಳೆ. ಸದ್ಯ ಐದು ವರ್ಷಗಳ ಕಾಲ ಮಡದಿಗಾಗಿ ಹುಡುಕಾಟ ನಡೆಸುತ್ತಿದ್ದ ಗೌತಮ್ ಅನಿರೀಕ್ಷಿತವಾಗಿ ಮಗನನ್ನ ಪದೇ ಪದೇ ಭೇಟಿ ಮಾಡುತ್ತಿದ್ದಾನೆ. ಆದರೆ, ಗೌತಮ್ ಗೆ ಇದುವರೆಗೂ ಅಪ್ಪು ನನ್ನ ಮಗ ಎಂದು ತಿಳಿದಿಲ್ಲ.

ಸದ್ಯ ಅಮೃತಧಾರೆ ಧಾರಾವಾಹಿಯು ರೋಚಕ ಘಟ್ಟವನ್ನು ತಲುಪಿದೆ. ಈ ಧಾರಾವಾಹಿಯಲ್ಲಿ ಐದು ವರ್ಷದಿಂದ ಭೂಮಿಕಾ ಹಾಗೂ ಗೌತಮ್ ಬೇರೆ ಆಗಿರೋದು ಗೊತ್ತೇ ಇದೆ. ಈಗ ಇವರು ಒಂದಾಗುವ ಸಮಯ ಹತ್ತಿರವಾಗಿದೆ. ಭೂಮಿಕಾಳನ್ನು ಹುಡುಕಿಕೊಂಡು ನಾನಾ ಊರಿಗೆ ತೆರಳುತ್ತಿರುವ ಗೌತಮ್ಗೆ ಕೊನೆಗೂ ಕುಶಾಲನಗರದಲ್ಲಿ ಭೂಮಿಕಾ ಸಿಕ್ಕಿದ್ದಾಳೆ. ಸದ್ಯ ಗೌತಮ್ ಹಾಗೂ ಭೂಮಿಕಾ ಭೇಟಿಯಾದ ಗಳಿಗೆಯ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ.
ಅಮೃತಧಾರೆ ಧಾರಾವಾಹಿಯಲ್ಲಿ ಶಾಲೆಯ ಮಕ್ಕಳ ಮೂಲಕ ಗೌತಮ್ ಭೂಮಿಕಾಗೆ ಗುಲಾಬಿ ಹೂವನ್ನು ಕಳುಹಿಸುತ್ತಾನೆ. ಒಂದಾಗಿ ಜೀವನ ಮಾಡೋಕೆ ಸಾವಿರ ಕಾರಣಗಳು ಇದ್ದವಲ್ಲ ಎಂದು ಭೂಮಿಕಾಗೆ ಗೌತಮ್ ಹೇಳುತ್ತಾನೆ. ಇದಕ್ಕೆ ಭೂಮಿಕಾ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾಳೆ ಎಂಬುದನ್ನು ಕಾದು ನೋಡಬೇಕಿದೆ. ಭೂಮಿಕಾ ಹಾಗೂ ಗೌತಮ್ ಹಾಯಾಗಿ ಜೀವನ ನಡೆಸಿಕೊಂಡಿದ್ದವರು ಈಗ ಬೇರೆ ಆಗಿದ್ದಾರೆ. ಮುಂದೆ ಇವರು ಮತ್ತೆ ಒಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನೂ ತೀವ್ರ ಕುತೂಹಲ ಮೂಡಿಸಿರುವುದು ಇದು ಕನಸೋ? ಅಥವಾ ನಿಜಾನೋ ಎಂಬುದನ್ನ ಮುಂದಿನ ಸಂಚಿಕೆಯಲ್ಲಿ ಕಾದುನೋಡಬೇಕಾಗಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications