Amulya: 7 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲಿರುವ ಚೆಲುವಿನ ಚಿತ್ತಾರದ ಚೆಲುವೆ ಅಮೂಲ್ಯ
ಸ್ಯಾಂಡಲ್ವುಡ್ನ ಚೆಲುವೆ ನಟಿ ಅಮೂಲ್ಯ ಮತ್ತೆ ಬಣ್ಣ ಹಚ್ಚಲು ಸಿದ್ಧವಾಗಿದ್ದಾರೆ. ಕೊನೆಯದಾಗಿ ಗಣೇಶ್ ಅಭಿನಯದ ಮುಗುಳು ನಗೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಏಳು ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆ ಮೇಲೆ ಮಿಂಚಲಿದ್ದಾರೆ.
ಚೆಲುವಿನ ಚಿತ್ತಾರ ಮತ್ತು ಗಜಕೇಸರಿ ಖ್ಯಾತಿಯ ಅಮೂಲ್ಯ ಮದುವೆಯಾದ ನಂತರ ಮತ್ತು ಅವಳ ಅವಳಿ ಗಂಡು ಮಕ್ಕಳ ಆರೈಕೆಯ ನಂತರ ನಟನೆಯಿಂದ ದೂರ ಉಳಿದಿದ್ದರು.ಏಳು ವರ್ಷಗಳ ನಂತರ ಮತ್ತೆ ಕ್ಯಾಮರಾ ಎದುರಿಸಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಅಮೂಲ್ಯ ಪ್ರಜ್ವಲ್ ದೇವರಾಜ್ ಅಭಿನಯದ ಕರಾವಳಿ ಸಿನಿಮಾದಲ್ಲಿ ನಟಿಸಲಿದ್ದಾರೆ.

ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರಕ್ಕೆ ಗುರುದತ್ತ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಕರಾವಳಿ ಸಿನಿಮಾದ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.
ಪ್ರಜ್ವಲ್ ಜೊತೆ ಮೊದಲ ಬಾರಿ ನಟನೆ
ಪ್ರತಿಭಾವಂತ ಕಲಾವಿದರ ಹುಡುಕಾಟದಲ್ಲಿದ್ದ ನಿರ್ಮಾಪಕರು, ಚರ್ಚೆಯ ನಂತರ ಅಮೂಲ್ಯ ಪಾತ್ರಕ್ಕೆ ಸೂಕ್ತ ಎಂದು ನಿರ್ಧರಿಸಿದ್ದು. ಅವರನ್ನು ಕರೆತರಲು ಮಾತುಕತೆ ನಡೆಸಿದ್ದಾರೆ. ಚಿತ್ರದ ಕತೆ ಕೇಳಿ ಒಪ್ಪಿರುವ ಅಮೂಲ್ಯ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಚಿತ್ರತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಬಾಲ ಕಲಾವಿದೆಯಾಗಿ ಆರಂಭಗೊಂಡು 13ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ಅಮೂಲ್ಯ, ಪ್ರಜ್ವಲ್ ದೇವರಾಜ್ ಅವರೊಂದಿಗೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳಲಿದ್ದಾರೆ.
ನಿರೀಕ್ಷೆ ಮೂಡಿಸಿರುವ ಕರಾವಳಿ
ಪ್ರಜ್ವಲ್ ದೇವರಾಜ್ ಅವರ ವೃತ್ತಿಜೀವನದಲ್ಲೇ ವಿಶಿಷ್ಟ ಸಿನಿಮಾ ಆಗಲಿದೆ ಎಂದು ಹೇಳಲಾಗಿರುವ 'ಕರಾವಳಿ' ಈಗಾಗಲೇ ಫಸ್ಟ್ ಲುಕ್ನಿಂದ ನಿರೀಕ್ಷೆ ಹುಟ್ಟುಹಾಕಿದೆ. ಕಂಬಳದ ಸುತ್ತ ಕೇಂದ್ರೀಕೃತವಾದ ಕಥಾವಸ್ತುವನ್ನು ಒಳಗೊಂಡಿದೆ ಎಂದು ಹೇಳಲಾಗಿದ್ದು, ಪ್ರಜ್ವಲ್ ಅವರ ವಿಶಿಷ್ಟ ನೋಟವು ಮನುಷ್ಯರು ಮತ್ತು ಪ್ರಾಣಿಗಳ ನಡುವಿನ ಸಂಘರ್ಷಗಳ ಸುಳಿವು ನೀಡಿದೆ.
ಅಮೂಲ್ಯ ಅವರು ಪಾತ್ರವನ್ನು ಇಷ್ಟಪಟ್ಟಿರುವ ಕಾರಣ ನಟಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಉಳಿದ ತಾರಾಗಣಕ್ಕಾಗಿ ನಟರ ಹುಡುಕಾಟ ನಡೆಸಲಾಗುತ್ತಿದ್ದು, ಕೆಲವು ದಿನಗಳಲ್ಲಿ ಅಂತಿಮಗೊಳಿಸಲಿದ್ದಾರೆ. ಫೆಬ್ರವರಿ ಮಧ್ಯದಲ್ಲಿ ಚಿತ್ರೀಕರಣವನ್ನು ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.
ಅಂಬಿ ನಿಂಗ್ ವಯಸ್ಸಾಯ್ತೋ ನಂತರ ನಿರ್ದೇಶಕ ಗುರುದತ್ತ ಗಾಣಿಗ ಅವರ ಎರಡನೇ ಚಿತ್ರ 'ಕರಾವಳಿ'. ವಿಕೆ ಫಿಲ್ಮ್ಸ್ ಸಹಯೋಗದೊಂದಿಗೆ ಗುರುದತ್ತ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಾಗುತ್ತಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಹಣ, ಗುಣಾ ಕಲೆಯ ಮೇಲ್ವಿಚಾರಣೆ ಮತ್ತು ಸಚಿನ್ ಬಸ್ರೂರ್ ಸಂಗೀತ ಸಂಯೋಜಿಸಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications