Amulya: 7 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲಿರುವ ಚೆಲುವಿನ ಚಿತ್ತಾರದ ಚೆಲುವೆ ಅಮೂಲ್ಯ
ಸ್ಯಾಂಡಲ್ವುಡ್ನ ಚೆಲುವೆ ನಟಿ ಅಮೂಲ್ಯ ಮತ್ತೆ ಬಣ್ಣ ಹಚ್ಚಲು ಸಿದ್ಧವಾಗಿದ್ದಾರೆ. ಕೊನೆಯದಾಗಿ ಗಣೇಶ್ ಅಭಿನಯದ ಮುಗುಳು ನಗೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಏಳು ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆ ಮೇಲೆ ಮಿಂಚಲಿದ್ದಾರೆ.
ಚೆಲುವಿನ ಚಿತ್ತಾರ ಮತ್ತು ಗಜಕೇಸರಿ ಖ್ಯಾತಿಯ ಅಮೂಲ್ಯ ಮದುವೆಯಾದ ನಂತರ ಮತ್ತು ಅವಳ ಅವಳಿ ಗಂಡು ಮಕ್ಕಳ ಆರೈಕೆಯ ನಂತರ ನಟನೆಯಿಂದ ದೂರ ಉಳಿದಿದ್ದರು.ಏಳು ವರ್ಷಗಳ ನಂತರ ಮತ್ತೆ ಕ್ಯಾಮರಾ ಎದುರಿಸಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಅಮೂಲ್ಯ ಪ್ರಜ್ವಲ್ ದೇವರಾಜ್ ಅಭಿನಯದ ಕರಾವಳಿ ಸಿನಿಮಾದಲ್ಲಿ ನಟಿಸಲಿದ್ದಾರೆ.

ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರಕ್ಕೆ ಗುರುದತ್ತ ಗಾಣಿಗ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಕರಾವಳಿ ಸಿನಿಮಾದ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.
ಪ್ರಜ್ವಲ್ ಜೊತೆ ಮೊದಲ ಬಾರಿ ನಟನೆ
ಪ್ರತಿಭಾವಂತ ಕಲಾವಿದರ ಹುಡುಕಾಟದಲ್ಲಿದ್ದ ನಿರ್ಮಾಪಕರು, ಚರ್ಚೆಯ ನಂತರ ಅಮೂಲ್ಯ ಪಾತ್ರಕ್ಕೆ ಸೂಕ್ತ ಎಂದು ನಿರ್ಧರಿಸಿದ್ದು. ಅವರನ್ನು ಕರೆತರಲು ಮಾತುಕತೆ ನಡೆಸಿದ್ದಾರೆ. ಚಿತ್ರದ ಕತೆ ಕೇಳಿ ಒಪ್ಪಿರುವ ಅಮೂಲ್ಯ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಚಿತ್ರತಂಡ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಬಾಲ ಕಲಾವಿದೆಯಾಗಿ ಆರಂಭಗೊಂಡು 13ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ಅಮೂಲ್ಯ, ಪ್ರಜ್ವಲ್ ದೇವರಾಜ್ ಅವರೊಂದಿಗೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳಲಿದ್ದಾರೆ.
ನಿರೀಕ್ಷೆ ಮೂಡಿಸಿರುವ ಕರಾವಳಿ
ಪ್ರಜ್ವಲ್ ದೇವರಾಜ್ ಅವರ ವೃತ್ತಿಜೀವನದಲ್ಲೇ ವಿಶಿಷ್ಟ ಸಿನಿಮಾ ಆಗಲಿದೆ ಎಂದು ಹೇಳಲಾಗಿರುವ 'ಕರಾವಳಿ' ಈಗಾಗಲೇ ಫಸ್ಟ್ ಲುಕ್ನಿಂದ ನಿರೀಕ್ಷೆ ಹುಟ್ಟುಹಾಕಿದೆ. ಕಂಬಳದ ಸುತ್ತ ಕೇಂದ್ರೀಕೃತವಾದ ಕಥಾವಸ್ತುವನ್ನು ಒಳಗೊಂಡಿದೆ ಎಂದು ಹೇಳಲಾಗಿದ್ದು, ಪ್ರಜ್ವಲ್ ಅವರ ವಿಶಿಷ್ಟ ನೋಟವು ಮನುಷ್ಯರು ಮತ್ತು ಪ್ರಾಣಿಗಳ ನಡುವಿನ ಸಂಘರ್ಷಗಳ ಸುಳಿವು ನೀಡಿದೆ.
ಅಮೂಲ್ಯ ಅವರು ಪಾತ್ರವನ್ನು ಇಷ್ಟಪಟ್ಟಿರುವ ಕಾರಣ ನಟಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಉಳಿದ ತಾರಾಗಣಕ್ಕಾಗಿ ನಟರ ಹುಡುಕಾಟ ನಡೆಸಲಾಗುತ್ತಿದ್ದು, ಕೆಲವು ದಿನಗಳಲ್ಲಿ ಅಂತಿಮಗೊಳಿಸಲಿದ್ದಾರೆ. ಫೆಬ್ರವರಿ ಮಧ್ಯದಲ್ಲಿ ಚಿತ್ರೀಕರಣವನ್ನು ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.
ಅಂಬಿ ನಿಂಗ್ ವಯಸ್ಸಾಯ್ತೋ ನಂತರ ನಿರ್ದೇಶಕ ಗುರುದತ್ತ ಗಾಣಿಗ ಅವರ ಎರಡನೇ ಚಿತ್ರ 'ಕರಾವಳಿ'. ವಿಕೆ ಫಿಲ್ಮ್ಸ್ ಸಹಯೋಗದೊಂದಿಗೆ ಗುರುದತ್ತ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಾಗುತ್ತಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಹಣ, ಗುಣಾ ಕಲೆಯ ಮೇಲ್ವಿಚಾರಣೆ ಮತ್ತು ಸಚಿನ್ ಬಸ್ರೂರ್ ಸಂಗೀತ ಸಂಯೋಜಿಸಲಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications