Anchor Anushree: ಮದುವೆಯಾದ ಬಳಿಕ ಮೊದಲ ಬಾರಿಗೆ ಜೀ ಕನ್ನಡ ವೇದಿಕೆಗೆ ಬಂದ ಅನುಶ್ರೀ: ಭಾವುಕರಾಗಿದ್ಯಾಕೆ?
ಕರಾವಳಿ ಚಲುವೆ, ಕೊಡಗು ಸೊಸೆ , ನಟಿ ಹಾಗೂ ನಿರೂಪಕಿ ಅನುಶ್ರೀ ಅವರು ತಮ್ಮ ಬಹುವರ್ಷದ ಗೆಳೆಯ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನುಶ್ರಿ ಮದುವೆಯಾದ ಬೆನ್ನಲ್ಲೇ ಇದೀಗ ಮತ್ತೇ ತಮ್ಮ ಕೆಲಸದಲ್ಲಿ ಬ್ಯುಸಿ ಯಾಗಿದ್ದು, ಮತ್ತೆ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಜೀ ಕನ್ನಡ ಮಹಾನಟಿ ವೇದಿಕೆಯಲ್ಲೂ ಕೂಡ ಅನುಶ್ರೀ ಮದುವೆ ಸಂಭ್ರಮಾಚರಣೆ ಜೋರಾಗಿದ್ದು, ಜೀ ಕನ್ನಡ ವಾಹಿನಿ ತವರು ಮನೆಯ ಪ್ರೀತಿ ನೀಡಿದೆ. ಮದುವೆಯಾದ ಬಳಿಕ ಮೊದಲ ಬಾರಿಗೆ ಜೀ ಕನ್ನಡ ವೇದಿಕೆಗೆ ಬಂದ ಅನುಶ್ರೀ ಭಾವುಕರಾಗಿದ್ದಾರೆ.
ಗೆಳೆಯ ರೋಷನ್ ಜೊತೆ ನಟಿ, ನಿರೂಪಣೆ ಅನುಶ್ರೀ ಆಗಸ್ಟ್ 28ರಂದು ಹೊಸ ಬಾಳಿಗೆ ಕಾಲಿಟ್ಟಿದ್ದರು. ಬಹಳ ಅದ್ಧೂರಿಯಾಗಿ ಇಬ್ಬರ ಮದುವೆ ನೆರವೇರಿತ್ತು. ಸಾಕಷ್ಟು ಸಿನಿಮಾ ತಾರೆಯರು ಕಲ್ಯಾಣೋತ್ಸವದಲ್ಲಿ ಭಾಗಿ ಆಗಿ ಶುಭ ಕೋರಿದ್ದರು. ಅನುಶ್ರೀ ಮತ್ತೆ ನಿರೂಪಣೆ ಕಾಯಕಕ್ಕೆ ಮರಳಿದ್ದಾರೆ. ಜೀ ಕನ್ನಡ ಮಹಾನಟಿ ವೇದಿಕೆಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಅನುಶ್ರೀ ಅವರು ವಿವಾಹ ಆದ ಬಳಿಕ ಮೊದಲ ಬಾರಿಗೆ ಅವರು ಜೀ ಕನ್ನಡ ವೇದಿಕೆ ಏರಿದ್ದಾರೆ. ಈ ವೇಳೆ ತಾರಾ ಅವರು ಭಾವುಕರಾದರು. ಇಷ್ಟು ದಿನ ಮಗಳಾಗಿದ್ದವರು, ಪತಿ ಮನೆಗೆ ಹೋದ ಭಾವನೆ ಅವರಿಗೆ ಕಾಡಿದೆ. ಈ ಕಾರಣದಿಂದ ಜೀ ಕನ್ನಡ ವೇದಿಕೆಯಲ್ಲಿ ನಿರೂಪಕಿ ಅನುಶ್ರೀ ಅವರ ಮಡಿಲನ್ನು ತುಂಬಿದ್ದಾರೆ.

ಅನುಶ್ರೀ ಅವರು ಜೀ ಕನ್ನಡ ವೇದಿಕೆಗೆ ಬಂದ ಅನುಶ್ರೀ ಅವರಿಗೆ ಬಿಗ್ ಸರ್ಪ್ರೈಸ್ ಕಾದಿತ್ತು. ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅನುಶ್ರೀ ಅವರಿಗೆ ಜೀ ಕನ್ನಡ ತವರು ಮನೆಯ ಪ್ರೀತಿ ನೀಡಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೊ ಈಗ ಬಿಡುಗಡೆಯಾಗಿದೆ. ಇತ್ತೀಚೆಗೆ ಜೀ ಕನ್ನಡ ಸಿಬ್ಬಂದಿಗೆ ಶೋಗಳ ಸ್ಪರ್ಧಿಗಳಿಗೆ, ತೀರ್ಪುಗಾರರಿಗೆ ಅನುಶ್ರೀ ಮದುವೆ ಊಟ ಕೂಡ ಹಾಕಿಸಿದ್ದರು. ಅನುಶ್ರೀ ಮಹಾನಟಿ ವೇದಿಕೆಗೆ ಎಂಟ್ರಿ ಆಗುತ್ತಿದ್ದರೆ ಎಲ್ಲರೂ ಮುದುವೆಯ ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ತಾರಾ, ತರುಣ್ ಸುಧೀರ್, ಪ್ರೇಮಾ, ಶರಣ್, ನಿಶ್ವಿಕಾ ನಾಯ್ಡು ಎಲ್ಲರೂ ಸಾಥ್ ಕೊಟ್ಟಿದ್ದಾರೆ. ತಾಳಿದವನು ಬಾಳಿಯಾನು ಎನ್ನುವಂತೆ ತಾಳ್ಮೆಯಿಂದ ಕಾದಿದ್ದಕ್ಕೆ ಬಹಳ ಅರ್ಥಪೂರ್ಣವಾದ ತಾಳಿ ಕೊರಳಿಗೆ ಬಿದ್ದಿದೆ ಎಂದು ಅನುಶ್ರೀ ಹೇಳಿದ್ದಾರೆ. ನಮ್ಮ ಮನೆಯ ಮಗಳಿಗೆ ತವರು ಮನೆ ಮಡಿಲು ತುಂಬಿಸಬೇಕು ಎಂದು ತಾರಾ ಮಡಿಲು ತುಂಬಿಸುವ ಶಾಸ್ತ್ರ ಮಾಡಿದ್ದಾರೆ. ನನಗೆ ಜೀವನ ಕೊಟ್ಟಿದ್ದು ಜೀ ಕನ್ನಡ, ಆ ಜೀವನಕ್ಕೆ ಅರ್ಥ ಕೊಟ್ಟಿದ್ದು ರೋಷನ್ ಎಂದು ಅನುಶ್ರೀ ಹೇಳಿರುವುದು ಪ್ರೋಮೊದಲ್ಲಿ ಹೈಲೆಟ್ ಆಗಿದೆ.
-
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
'ಅವತ್ತು ಬ್ರೇಕಪ್ ಆಗಿದ್ದೇ ಒಳ್ಳೆಯದಾಯಿತು': ರಶ್ಮಿಕಾ ತಾಯಿಯದ್ದೆ ಎನ್ನಲಾದ ಸ್ಫೋಟಕ ಆಡಿಯೋ ವೈರಲ್ -
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications