ಬೆಂಗಳೂರಿನಲ್ಲಿ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ: ಯಾವಾಗ? ಎಲ್ಲಿ? ಹೆಚ್ಚಿನ ವಿವರ ಇಲ್ಲಿದೆ
ಬೆಂಗಳೂರು, ಏಪ್ರಿಲ್ 12: ಬೆಂಗಳೂರಿನ ಸಿನಿಮಾ ಹಾಗೂ ಸಂಗೀತ ಪ್ರಿಯರೇ ನಿಮಗೆ ಇಲ್ಲಿದೆ ಸಿಹಿ ಸುದ್ದಿ. ಸಿನಿಮಾ ಹಾಡುಗಳ ಜೊತೆ ಸಂಗೀತ ಲೋಕದಲ್ಲಿ ತೇಲಬೇಕು ಎಂದುಕೊಂಡವರಿಗಾಗಿ ಇಲ್ಲಿದೆ ಮುಖ್ಯವಾದ ಮಾಹಿತಿ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಇದೇ ಮೇ 31ರಂದು ನಡೆಯಲಿದೆ.
ದುಬೈ, ಆಸ್ಟ್ರೇಲಿಯಾ, ಅಮೆರಿಕ, ಪ್ಯಾರಿಸ್ ಹಾಗೂ ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ರವಿಚಂದರ್ ಮೊದಲ ಬಾರಿಗೆ ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ.

ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯಲಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಸೃಷ್ಟಿ ಮಾಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ಅನಿರುದ್ಧ್ ರವಿಚಂದರ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್ಗಳು ಕೇವಲ 60 ನಿಮಿಷದಲ್ಲೇ ಅಂದರೆ ಕೇವಲ ಒಂದೇ ಗಂಟೆಯಲ್ಲೇ ಮಾರಾಟವಾಗಿದೆ. ಈ ಬಗ್ಗೆ ಕೆವಿಎನ್ ಸಂಸ್ಥೆ ನಿರ್ಮಾತೃ ವೆಂಕಟ ಕೆ ನಾರಾಯಣ ಅಧೀಕೃತವಾಗಿ ಖಚಿತ ಪಡಿಸಿದ್ದಾರೆ.
ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನ ಜನ, ವೇಗವಾಗಿ ಟಿಕೆಟ್ಗಳನ್ನು ಖರೀದಿಸಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದ ಟಿಕೆಟ್ಗೆ ಇನ್ನೂ ಹೆಚ್ಚಿನ ಬೇಡಿಕೆ ಇದ್ದು, ಬೀಸ್ಟ್ ಮ್ಯೂಸಿಕ್ ಮೂಡ್ಗೆ ಸಿಲಿಕಾನ್ ಸಿಟಿ ಮಂದಿ ಯಾವ ರೀತಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿದೆ.
ಮನೋರಂಜನೆ ವಿಷಯವಾಗಿ ಮತ್ತೊಂದಿಷ್ಟು ಅಚ್ಚರಿಗಳನ್ನು ಕೆವಿಎನ್ ಸಂಸ್ಥೆಯ ಕಡೆಯಿಂದ ಬರುವ ನಿರೀಕ್ಷೆಗಳಿವೆ. ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ಕೆವಿಎನ್ ಪ್ರೊಡಕ್ಷನ್ಸ್ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ ಎಂದು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ತಿಳಿಸಿದ್ದು, ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬದಲ್ಲಿ ಇನ್ನೂ ಹೆಚ್ಚಿನ ಜನರು ಭಾಗವಹಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಅನಿರುದ್ಧ್ ರವಿಚಂದರ್ ಅವರ ಹಾಡಿನ ಅಭಿಮಾನಿಗಳು ಕಾತುರರಾಗಿದ್ದಾರೆ.
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications