Sonu Sood: ಕನ್ನಡದಲ್ಲಿ ನಟಿಸಿರುವ ಖ್ಯಾತ ನಟನ ವಿರುದ್ಧ ಅರೆಸ್ಟ್ ವಾರಂಟ್
ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ. ಸದ್ಯ ಸೋನು ಸೂದ್ ಅವರು ಬಂಧನದ ಭೀತಿಯಲ್ಲಿದ್ದಾರೆ. 10 ಲಕ್ಷ ರೂಪಾಯಿ ವಂಚನೆ ಕೇಸ್ ಸಂಬಂಧ ನಟನ ವಿರುದ್ಧ ಲುಧಿಯಾನ ಕೋರ್ಟ್ ವಾರಂಟ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.
ಲೂಧಿಯಾನ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರಮಣ್ಪ್ರೀತ್ ಕೌರ್ ಅವರು ಸೋನು ಸೂದ್ ವಿರುದ್ಧ ವಾರಂಟ್ ಹೊರಡಿಸಿದ್ದಾರೆ. ಲುಧಿಯಾನಾ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ಎಂಬುವವರ ವಿರುದ್ಧ 10 ಲಕ್ಷ ರೂಪಾಯಿಗಳ ವಂಚನೆ ಆರೋಪ ಮಾಡಿದ್ದಾರೆ. ಕ್ರಿಪ್ಟೋ ಕರೆನ್ಸಿ ಹೆಸರಿಲ್ಲಿ ಭಾರಿ ವಂಚನೆ ನಡೆಯುತ್ತಿದ್ದರಿಂದ ಲುಧಿಯಾನಾ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿತ್ತು.

ಈ ಕೇಸ್ನಲ್ಲಿ ನಟ ಸೋನು ಸೂದ್ ಅವರ ಹೆಸರು ಕೂಡ ಕೇಳಿಬಂದಿದ್ದು, ಕೋರ್ಟ್ನಲ್ಲಿ ಸಾಕ್ಷಿ ಹೇಳಬೇಕಾಗಿತ್ತು. ಆದರೆ ಹಲವು ಬಾರಿ ಸಮನ್ಸ್ ಕೊಟ್ಟರೂ ನಟ ಸೋನು ಸೂದ್ ಕೋರ್ಟ್ ಎದುರು ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ ನಟನ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ.
ಈ ಸಂಬಂಧ ಕೋರ್ಟ್ ಆದೇಶ ಹೊರಡಿಸಿದೆ. ಸೋನು ಸೂದ್ನನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗಳಿಗೆ ಲೂಧಿಯಾನ ಕೋರ್ಟ್ ಸೂಚಿಸಿದೆ. ಇದರಿಂದ ನಟ ಸೋನು ಸೂದ್ ಅವರು ಸದ್ಯ ಬಂಧನದ ಭೀತಿಯಲ್ಲಿದ್ದಾರೆ.
ಆದೇಶದಲ್ಲಿ ಏನಿದೆ?: ಮನೆ ಸಂಖ್ಯೆ 605/606 ಕ್ಯಾಸಾಬ್ಲಾಂಕ್ ಅಪಾರ್ಟ್ಮೆಂಟ್ನ ನಿವಾಸಿ ಸೋನು ಸೂದ್ ಅವರು ಕೋರ್ಟ್ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಹಾಗಾಗಿ ಸೋನು ಸೂದ್ ಅವರನ್ನ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಈ ಮೂಲಕ ನಿಮಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ಕ್ಕೆ ನಿಗದಿಯಾಗಿದೆ.
ಸೋನು ಸೂದ್ ಅವರು ಬಾಲಿವುಡ್ನಲ್ಲಿ ಪ್ರಮುಖ ನಟರಾಗಿದ್ದು, ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ ಕಿಚ್ಚ ಸುದೀಪ್ ಅವರ ವಿಷ್ಣುವರ್ಧನ ಸಿನಿಮಾದಲ್ಲಿ ಸೋನು ಸೂದ್ ಅವರು ವಿಲನ್ ಪಾತ್ರದಲ್ಲಿ ಅಭಿನಯಿಸಿದ್ದರು. ಹಾಗಾಗಿ ಸೋನು ಸೂದ್ ಅವರು ಕನ್ನಡಿಗರಿಗೂ ಚಿರಪರಿಚಿತರು. ಟಾಲಿವುಡ್ನ ಹಲವು ಸಿನಿಮಾಗಳಲ್ಲಿ ಅವರು ಖಳನಾಯಕರಾಗಿಯೇ ಖ್ಯಾತಿ ಪಡೆದಿದ್ದು, ವಿಲನ್ ಪಾತ್ರಕ್ಕೆ ನಿರ್ದೇಶಕರ ಮೊದಲ ಆಯ್ಕೆಯಾಗಿದ್ದರು.
ನಟನೆಯ ಹೊರತಾಗಿಯೂ ಸೋನು ಸೂದ್ ಅವರು ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕಷ್ಟದಲ್ಲಿದ್ದವರಿಗೆ ನೆರವಾಗುವ ಮೂಲಕ ಸೋನು ಸೂದ್ ಅವರು ನಿಜಜೀವನದ ಹೀರೋ ಆಗಿಯೂ ಹಲವರ ಬದುಕಿಗೆ ಬೆಳಕಾಗಿದ್ದಾರೆ. ಬಡವರಿಗೆ ಆರ್ಥಿಕ ನೆರವು ನೀಡುವ ಮೂಲಕವೂ ರಿಯಲ್ ಹೀರೋ ಆಗಿದ್ದ ಸೋನು ಸೂದ್ ಅವರಿಗೆ ಇದೀಗ ವಂಚನೆ ಕೇಸ್ ಮುಳುವಾಗಿದೆ. ಈ ವಿಚಾರ ಕೇಳಿ ಸೋನು ಸೂದ್ ಅಭಿಮಾನಿಗಳಿಗೆ ಶಾಕ್ ಆಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications