Ashika Ranganath: ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್...ಯಾವ ಚಿತ್ರ?
ಬೆಂಗಳೂರು, ಮೇ. 26: ನಟಿ ಆಶಿಕಾ ರಂಗನಾಥ್ ಕನ್ನಡದ ಜೊತೆಗೆ ಬೇರೆ ಭಾಷೆಗಳತ್ತ ಮುಖ ಮಾಡಿರುವುದು ಗೊತ್ತೆ ಇದೆ. ಕಳೆದ ವರ್ಷ ತೆಲುಗು ನಟ ಅಕ್ಕಿನೇನಿ ನಾಗಾರ್ಜುನ್ ಜೊತೆಗೆ ಆಶಿಕಾ ರಂಗನಾಥ್ 'ನಾ ಸಾಮಿ ರಂಗ' ಸಿನಿಮಾದಲ್ಲಿ ನಟಿಸಿದ್ದರು. ಅವರ ಅಭಿನಯ ಮತ್ತು ಲುಕ್ಗೆ ಸಕತ್ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಮತ್ತೊಬ್ಬ ಸೂಪರ್ ಸ್ಟಾರ್ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ.
ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಜೂನಿಯರ್ ಎನ್ ಟಿಆರ್ ಸಹೋದರ ಕಲ್ಯಾಣ್ ರಾಮ್ ಅಭಿನಯದ ಅಮಿಗೋಸ್ ಸಿನಿಮಾ ಮೂಲಕ ತೆಲುಗಿಗೆ ಎಂಟ್ರಿ ಕೊಟ್ಟಿದ್ದರು. ಬಳಿಕ 'ನಾ ಸಾಮಿ ರಂಗ' ಚಿತ್ರ ಅವರ ಕೈ ಸೇರಿತ್ತು. ಈಗ ಮೆಗಾ ಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ

ಮೆಗಾಸ್ಟಾರ್ ಜೊತೆಗೆ ಆಶಿಕಾ ರಂಗನಾಥ್ ಸಿನಿಮಾ
ತೆಲುಗು ಮೆಗಾಸ್ಟಾರ್ ಚಿರಂಜಿವಿ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ 'ವಿಶ್ವಂಭರ' ಚಿತ್ರದಲ್ಲಿ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಅವರ ಪಾತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿದೆ.ಚಿತ್ರಕ್ಕೆ ಬಿಂಬಿಸಾರ ನಿರ್ದೇಶಕ ವಸಿಷ್ಟ ಆಕ್ಷನ್ ಕಟ್ ಹೇಳಲಿದ್ದಾರೆ.
ವರದಿಗಳ ಪ್ರಕಾರ, ಆಶಿಕಾ ರಂಗನಾಥ್, ನಟ ಚಿರಂಜೀವಿ ಎದುರು ಜೋಡಿಯಾಗಿಲ್ಲ ಆದರೆ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ. ಚಿತ್ರಕ್ಕೆ ಆಶಿಕಾ ಎರಡನೇ ನಾಯಕಿ ಎಂದು ಘೋಷಿಸಲಾಗಿದೆ. ಈ ಹಿಂದೆ, ಸ್ಟಾಲಿನ್ ಚಿತ್ರದಲ್ಲಿ ಜೊತೆಯಾಗಿದ್ದ ನಟಿ ತ್ರಿಶಾ ಮತ್ತೆ 18 ವರ್ಷಗಳ ನಂತರ ಚಿರಂಜೀವಿಗೆ ಜೋಡಿಯಾಗಿ ನಟಿಸಲಿದ್ದಾರೆ.
ವಿಶ್ವಂಭರ ಸಿನಿಮಾಗೆ ಆಸ್ಕರ್ ಪ್ರಶಸ್ತಿ ವಿಜೇತರಾದ ಎಂಎಂ ಕೀರವಾಣಿ ಸಂಗೀತ ನೀಡಲಿದ್ದಾರೆ. ಚಂದ್ರಬೋಸ್ ಸಾಹಿತ್ಯ ಚಿತ್ರಕ್ಕಿದೆ. ಸಾಯಿ ಮಾಧವ್ ಬುರ್ರಾ ಬರವಣಿಗೆ ಇರುವ ಚಿತ್ರಕ್ಕೆ ಚೋಟಾ ಕೆ ನಾಯ್ಡು ಅವರ ಛಾಯಾಗ್ರಹಣ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಅವರ ಸಂಕಲನವಿದೆ. ಎ.ಎಸ್.ಪ್ರಕಾಶ್ ಪ್ರೊಡಕ್ಷನ್ ಡಿಸೈನರ್.

ಯು ವಿ ಕ್ರಿಯೇಷನ್ ಬ್ಯಾನರ್ ನಡಿ ವಿಕ್ರಮ್, ವಂಶಿ ಹಾಗೂ ಪ್ರಮೋದ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚೋಟಾ ಕೆ ನಾಯ್ಡು ಛಾಯಾಗ್ರಹಣ, ರಾಮ ಲಕ್ಷ್ಮಣ ಸಾಹಸ ನಿರ್ದೇಶನ ವಿಶ್ವಂಭರ ಚಿತ್ರಕ್ಕಿದೆ. 2025ರ ಸಂಕ್ರಾಂತಿ ಹಬ್ಬಕ್ಕೆ ವಿಶ್ವಂಭರ ಸಿನಿಮಾ ಬಿಡುಗಡೆಯಾಗಲಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications