ಆರ್ಸಿಬಿ ಸೋಲಿಗೆ ಅಶ್ವಿನಿ ಪುನೀತ್ರಾಜಕುಮಾರ್ ಕಾರಣ ಎಂದ ದರ್ಶನ್ ಫ್ಯಾನ್ಸ್- ಅಪ್ಪು ಅಭಿಮಾನಿಗಳು ಗರಂ
ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ರಾಜಕುಮಾರ್ ಅವರಿಗೆ ಅವಮಾನ ಮಾಡಲಾಗಿದೆ. ಅಶ್ವಿನಿ ಪುನೀತ್ರಾಜಕುಮಾರ್ ಅವರಿಗೆ ಅವಮಾನ ಮಾಡಿದ್ದಕ್ಕೆ ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ದರ್ಶನ್ ಕೆಲ ಅಭಿಮಾನಿಗಳು ಆರ್ಸಿಬಿ ಸೋಲಿಗೆ ಅಶ್ವಿನಿ ಪುನೀತ್ರಾಜಕುಮಾರ್ ಕಾರಣ ಎಂದು ಪೋಸ್ಟ್ ಮೂಲಕ ದೂರಿದ್ದಾರೆ.
ಗಜಪಡೆ ಎಂಬ ಪೇಜ್ ಸೃಷ್ಟಿಸಿ ಅದರಲ್ಲಿ, ಅಶ್ವಿನಿ ಪುನೀತ್ರಾಜಕುಮಾರ್ ಅವರು ಆರ್ಸಿಬಿ ಸೋಲಿಗೆ ಕಾರಣ ಎಂದು ಹೇಳಲಾಗಿದೆ. 'ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಅದನ್ನು ಬಿಟ್ಟು ಗಂಡ ಇಲ್ಲದವರನ್ನು ಕರೆದಿದ್ದಾರೆ. ಇದು ಆರ್ಸಿಬಿ ಸೋಲಿಗೆ ಕಾರಣ' ಎಂದು ಪೇಜ್ನಲ್ಲಿ ಬರೆದಿದ್ದಾರೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪವರ್ ಸ್ಟಾರ್ ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ. ಕಮೀಷನರ್ ಭೇಟಿ ಮಾಡಿ ದೂರು ನೀಡಲು ಮುಂದಾಗಿದ್ದಾರೆ.

ನಟ ಪುನೀತ್ರಾಜಕುಮಾರ್ ಅವರು ಇಲ್ಲದೇ ಇದ್ದಾಗ ಇಂತಹ ಅವಮಾನಗಳು ಹೆಚ್ಚಾಗಿವೆ. ಇದಕ್ಕೆ ಸಂಪೂರ್ಣವಾಗಿ ಕಡಿವಾಣ ಬೀಳಬೇಕು ಎಂದು ಅಪ್ಪು ಫ್ಯಾನ್ಸ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಆರ್ಸಿಬಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋನಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕಾಣಿಸಿಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್, ತಮ್ಮ ಲ್ಯಾಪ್ಟ್ಯಾಪ್ನ ಪಾಸ್ವರ್ಡ್ ಬದಲಾಯಿತುತ್ತಿರುತ್ತಾರೆ. ವಿಡಿಯೋನಲ್ಲಿ ಮೊದಲಿಗೆ ಅಣ್ಣಾವ್ರ ಚಿತ್ರ ತೋರಿಸಲಾಗುತ್ತದೆ. ಬಳಿಕ ಪುನೀತ್ರ ಸಣ್ಣ ಪುತ್ಥಳಿ ತೋರಿಸಲಾಗುತ್ತದೆ. ಬಳಿಕ ಅಶ್ವಿನಿ ಅವರು ಲ್ಯಾಪ್ಟಾಪ್ನಲ್ಲಿ 'ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್' ಎಂದು ಇಂಗ್ಲೀಷ್ನಲ್ಲಿ ಪಾಸ್ವರ್ಡ್ ಅಪ್ಡೇಟ್ ಮಾಡುತ್ತಾರೆ. ಆದರೆ ಆ ಪಾಸ್ವರ್ಡ್ ಅನ್ನು ಲ್ಯಾಪ್ಟಾಪ್ ಅಕ್ಸೆಪ್ಟ್ ಮಾಡದೆ, 'ಹಳೆಯ ಪಾಸ್ವರ್ಡ್ ಅನ್ನು ಮತ್ತೊಮ್ಮೆ ಬಳಸುವಂತಿಲ್ಲ' ಎನ್ನುತ್ತದೆ. ಆಗ ಅಶ್ವಿನಿ ಅವರು 'ಬ್ಯಾಂಗಲೂರ್' ಅನ್ನು ಅಳಿಸಿ ಹೊಸ ಪಾಸ್ವರ್ಡ್ ಸೆಟ್ ಮಾಡುತ್ತಾರೆ. ಬಳಿಕ ಕ್ಯಾಮೆರಾ ಕಡೆ ತಿರುಗಿ 'ಅರ್ಥವಾಯ್ತಾ?' ಎಂದು ಕೇಳುತ್ತಾರೆ.

ಇಷ್ಟು ದಿನ ಆರ್ಸಿಬಿ ಹೆಸರು 'ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್' ಎಂದಿತ್ತು. ಆದರೆ ಅದನ್ನು ಈ ಬಾರಿ ಬದಲಾಯಿಸಲಾಗುತ್ತಿದ್ದು, ಇನ್ನು ಮುಂದೆ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (Royal Challengers Bengaluru) ಎಂದು ಮಾಡಲಾಗುತ್ತಿದೆ. ಮಾರ್ಚ್ 15ರಂದು ಅದ್ಧೂರಿಯಾಗಿ ಆರಂಭಗೊಂಡ ಆರ್ಸಿಬಿ ಅನ್ಬಾಕ್ಸಿಂಗ್ ಇವೆಂಟ್ನ ಪ್ರಚಾರ ಜಾಹೀರಾತು ಇದಾಗಿದೆ. ಇದಕ್ಕೆ ಕಿಡಿಗೇಡಿಗಳು ಕಿಡಿ ಹೊತ್ತಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications