Chetan Chandra: ನಟ ಚೇತನ್ ಮೇಲೆ ಹಲ್ಲೆ, ಮುಖ ಕಿತ್ತು ಹೋಗುವ ಹಾಗೆ ಹೊಡೆದ ಕಿಡಿಗೇಡಿಗಳು
ಬೆಂಗಳೂರು, ಮೇ 13: ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತಾಯಂದಿರ ದಿನದ ದಿನವೇ ಜನರ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಮುಖ ಕಿತ್ತು ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ.
ನಿನ್ನೆ (ಮೇ 12) ತಾಯಂದಿರ ದಿನದ ಹಿನ್ನೆಲೆಯಲ್ಲಿ ನಟ ಚೇತನ್ ಚಂದ್ರ ತಾಯಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಬಳಿಕ ದೇವಾಸ್ಥಾನಕ್ಕೆ ತೆರಳಿ ಮರಳುವ ವೇಳೆ ಕಗ್ಗಲಿಪುರ ಸಮೀಪಲ್ಲಿ ಗಾಡಿ ವಿಚಾರಕ್ಕೆ ಗಲಾಟೆ ತೆಗೆದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯ ವಿವರವನ್ನು ನಟ ಚೇತನ್ ಚಂದ್ರ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಹಂಚಿಕೊಂಡಿದ್ದಾರೆ.

ಕಗ್ಗಲಿಪುರದ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ ವೇಳೆ ತಾವಿರುವ ಪರಿಸ್ಥಿತಿಯಲ್ಲೇ ವಿಡಿಯೋ ಮಾಡಿರುವ ಚೇತನ್ ಚಂದ್ರ, ಈ ವಿಡಿಯೋವನ್ನು ನನ್ನ ಪತ್ನಿ, ಮಗು, ಹೆತ್ತವರು ನೋಡುತ್ತಿರುತ್ತಾರೆ. ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ವಿಡಿಯೋದಲ್ಲಿ ಚೇತನ್ ಚಂದ್ರ ಅವರ ಮುಖವೆಲ್ಲಾ ರಕ್ತವಾಗಿದ್ದು, ಧರಿಸಿದ್ದ ಬಟ್ಟೆ ಕೂಡ ರಕ್ತವಾಗಿದೆ.
'ಇಂದು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ, ಬೇಕಂತಲೇ ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಸದ್ಯ ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ನ್ಯಾಯ ಬೇಕು' ಎಂದು ನಟ ಚೇತನ್ ಚಂದ್ರ ಆಗ್ರಹಿಸಿದ್ದಾರೆ.
ಘಟನೆಯಲ್ಲಿ ನಟ ಚೇತನ್ ಚಂದ್ರ ಅವರ ಕಾರಿಗೂ ಹಾನಿಯಾಗಿದ್ದು, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಚೇತನ್ ಚಂದ್ರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅವರ ಸ್ಥಿತಿ ನೋಡಿ ಆತಂಕ ಪಡುವಂತಾಗಿದೆ. ವಿಡಿಯೋ ನೋಡಿದ ಹಲವರು 'ನಿಮ್ಮಂತ ಸೆಲೆಬ್ರಿಟಿಗಳಿಗೆ ಈ ರೀತಿ ಆದರೆ ನಮ್ಮಂತ ಜನಗಳಿಗೆ ಇನ್ನು ಯಾವ ತರ. ಏನು ಎಂದು ಪ್ರಶ್ನೆ ಮಾಡಿದರೆ ಈ ತರ ಹಲ್ಲೆ ಮಾಡುತ್ತಾರೆ. ಖಂಡಿತ ಬಿಡಬೇಡಿ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅವರಿಗೆ ಆಗಬೇಕು' ಎಂದು ಒತ್ತಾಯಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications