Rashmika Mandanna: ರಶ್ಮಿಕಾ-ವಿಜಯ್ ಮದುವೆ ಬಳಿಕ ದೂರ ಆಗ್ತಾರೆ: ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ
ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರು ಗುಟ್ಟಾಗಿ ನಿಶ್ವಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆ ಕೂಡ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ. ರಶ್ಮಿಕಾ ತನ್ನ ಬಹುಕಾಲದ ಗೆಳೆಯ ವಿಜಯ್ ಅವರನ್ನು ಮದುವೆಯಾಗುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ನಡುವೆ ಖ್ಯಾತ ಜ್ಯೋತಿಷಿ ರಶ್ಮಿಕಾ-ವಿಜಯ್ ಮದುವೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಟಾಲಿವುಡ್, ತಮಿಳು, ಹಿಂದಿ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಟಾಲಿವುಡ್ನಲ್ಲಿ ಟಾಪ್ ನಟಿಯಾಗಿ ಮಿಂಚಿರುವ ಅವರು ವಿಜಯ್ ದೇವರಕೊಂಡ ಜೊತೆಗೆ ಎರಡು ಸಿನಿಮಾದಲ್ಲಿ ನಟಿಸಿದ್ದರು. ಆಗಿನಿಂದಲೂ ಇಬ್ಬರ ನಡುವೆ ಸ್ನೇಹ, ಪ್ರೀತಿ, ಡೇಟಿಂಗ್ವರೆಗೂ ಮುಂದುವರಿದಿತ್ತು. ವಿದೇಶಕ್ಕೆ ತೆರಳಿ ಮೋಜು ಮಸ್ತಿ ಕೂಡ ಮಾಡಿದ್ದರು.

ಇಬ್ಬರೂ ತಮ್ಮ ಸಿನಿಮಾಗಳಲ್ಲಿ ಬ್ಯುಸಿ ಇರುವಾಗಲೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿವರೆಗೆ ಇಬ್ಬರೂ ತಮ್ಮ ಎಂಗೇಜ್ಮೆಂಟ್ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಅವರ ಆಪ್ತರು ಎಂಗೇಜ್ಮೆಂಟ್ ನಡೆದಿರುವುದನ್ನು ಖಚಿತಪಡಿಸಿದ್ದಾರೆ. ಫೆಬ್ರವರಿಯಲ್ಲಿ ಮದುವೆ ನಿಶ್ಚಯವಾಗಿದೆ ಎಂದೂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸದ್ಯ ಎಲ್ಲೆಡೆ ಇದೇ ವಿಚಾರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿವೆ. ಎಲ್ಲರೂ ಮದುವೆ ನೋಡುವ ಕಾತುರದಲ್ಲಿ ಖ್ಯಾತ ಜ್ಯೋತಿಷಿ ಭಯಾನಕ ಭವಿಷ್ಯ ನುಡಿದಿದ್ದಾರೆ.
ಹೌದು, ಸೆಲೆಬ್ರಿಟಿ ಜ್ಯೋತಿಷಿ ಎಂದೇ ಕರೆಸಿಕೊಂಡಿರುವ ವೇಣುಸ್ವಾಮಿ ರಶ್ಮಿಕಾ ಮದುವೆ ಬಗ್ಗೆ ಶಾಕಿಂಗ್ ಭವಿಷ್ಯವೊಂದನ್ನು ನುಡಿದಿದ್ದಾರೆ. ವಿಜಯ್ ಅವರ ಜಾತಕದ ಬಗ್ಗೆ ಮಾತನಾಡಿರುವ ಅವರು, ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಮದುವೆಯ ನಂತರ ಹೆಚ್ಚು ದಿನಗಳವರೆಗೆ ಒಟ್ಟಿಗೆ ಇರುವುದಿಲ್ಲ ಎಂದು ಬಾಂಬ್ ಸಿಡಿಸಿದ್ದಾರೆ. ಇದಕ್ಕೂ ಮೊದಲು ಯೂಟ್ಯೂಬ್ ಚಾನೆಲ್ನಲ್ಲಿ ರಶ್ಮಿಕಾ ಅವರನ್ನು ವಿಜಯ್ ಅವರನ್ನು ಮದುವೆಯಾಗಬೇಡಿ ಎಂದು ವೇಣುಸ್ವಾಮಿ ಹೇಳಿದ್ದರು.
ಪರಿಹಾರ ಮಾಡಿದ್ರೆ ಸರಿ ಹೋಗುತ್ತೆ
ಅವರ ದಾಂಪತ್ಯದಲ್ಲಿ ಹಲವು ನ್ಯೂನತೆಗಳಿದ್ದು, ಇಬ್ಬರೂ ಮದುವೆಯಾದ ನಂತರ ವಿವಾದಗಳಿಗೆ ಕಾರಣವಾಗುತ್ತಾರೆ ಎಂದಿದ್ದರು. ಈಗ ಜಾತಕ ತಿದ್ದುಪಡಿ ಮಾಡಿಕೊಂಡರೆ ಅವರ ದಾಂಪತ್ಯ ಜೀವನ ಚೆನ್ನಾಗಿರುತ್ತದೆ, ಉಳಿದದ್ದು ಕರ್ಮದ ಫಲ ಎಂದು ಮಾತ್ರ ಹೇಳಬಲ್ಲೆ ಎಂದಿದ್ದಾರೆ. ನಾನು ಹೇಳಿದ ಪರಿಹಾರಗಳನ್ನು ಮಾಡಿದರೆ ಅವರ ದಾಂಪತ್ಯ ಜೀವನ ಸರಿಯಾಗಿರುತ್ತೆ, ನಂತರ ಯಾರ ಕರ್ಮ ಎಂದು ವೇಣು ಸ್ವಾಮಿ ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ನಿಶ್ಚಿತಾರ್ಥದೊಂದಿಗೆ, ವೇಣು ಸ್ವಾಮಿ ಅವರ ವಿಡಿಯೋ ಮತ್ತೆ ಟ್ರೆಂಡಿಂಗ್ ಆಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications