Rashmika Mandanna: ರಶ್ಮಿಕಾ-ವಿಜಯ್ ಮದುವೆ ಬಳಿಕ ದೂರ ಆಗ್ತಾರೆ: ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ
ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರು ಗುಟ್ಟಾಗಿ ನಿಶ್ವಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆ ಕೂಡ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ. ರಶ್ಮಿಕಾ ತನ್ನ ಬಹುಕಾಲದ ಗೆಳೆಯ ವಿಜಯ್ ಅವರನ್ನು ಮದುವೆಯಾಗುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ನಡುವೆ ಖ್ಯಾತ ಜ್ಯೋತಿಷಿ ರಶ್ಮಿಕಾ-ವಿಜಯ್ ಮದುವೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಟಾಲಿವುಡ್, ತಮಿಳು, ಹಿಂದಿ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಟಾಲಿವುಡ್ನಲ್ಲಿ ಟಾಪ್ ನಟಿಯಾಗಿ ಮಿಂಚಿರುವ ಅವರು ವಿಜಯ್ ದೇವರಕೊಂಡ ಜೊತೆಗೆ ಎರಡು ಸಿನಿಮಾದಲ್ಲಿ ನಟಿಸಿದ್ದರು. ಆಗಿನಿಂದಲೂ ಇಬ್ಬರ ನಡುವೆ ಸ್ನೇಹ, ಪ್ರೀತಿ, ಡೇಟಿಂಗ್ವರೆಗೂ ಮುಂದುವರಿದಿತ್ತು. ವಿದೇಶಕ್ಕೆ ತೆರಳಿ ಮೋಜು ಮಸ್ತಿ ಕೂಡ ಮಾಡಿದ್ದರು.

ಇಬ್ಬರೂ ತಮ್ಮ ಸಿನಿಮಾಗಳಲ್ಲಿ ಬ್ಯುಸಿ ಇರುವಾಗಲೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿವರೆಗೆ ಇಬ್ಬರೂ ತಮ್ಮ ಎಂಗೇಜ್ಮೆಂಟ್ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಅವರ ಆಪ್ತರು ಎಂಗೇಜ್ಮೆಂಟ್ ನಡೆದಿರುವುದನ್ನು ಖಚಿತಪಡಿಸಿದ್ದಾರೆ. ಫೆಬ್ರವರಿಯಲ್ಲಿ ಮದುವೆ ನಿಶ್ಚಯವಾಗಿದೆ ಎಂದೂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸದ್ಯ ಎಲ್ಲೆಡೆ ಇದೇ ವಿಚಾರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿವೆ. ಎಲ್ಲರೂ ಮದುವೆ ನೋಡುವ ಕಾತುರದಲ್ಲಿ ಖ್ಯಾತ ಜ್ಯೋತಿಷಿ ಭಯಾನಕ ಭವಿಷ್ಯ ನುಡಿದಿದ್ದಾರೆ.
ಹೌದು, ಸೆಲೆಬ್ರಿಟಿ ಜ್ಯೋತಿಷಿ ಎಂದೇ ಕರೆಸಿಕೊಂಡಿರುವ ವೇಣುಸ್ವಾಮಿ ರಶ್ಮಿಕಾ ಮದುವೆ ಬಗ್ಗೆ ಶಾಕಿಂಗ್ ಭವಿಷ್ಯವೊಂದನ್ನು ನುಡಿದಿದ್ದಾರೆ. ವಿಜಯ್ ಅವರ ಜಾತಕದ ಬಗ್ಗೆ ಮಾತನಾಡಿರುವ ಅವರು, ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಮದುವೆಯ ನಂತರ ಹೆಚ್ಚು ದಿನಗಳವರೆಗೆ ಒಟ್ಟಿಗೆ ಇರುವುದಿಲ್ಲ ಎಂದು ಬಾಂಬ್ ಸಿಡಿಸಿದ್ದಾರೆ. ಇದಕ್ಕೂ ಮೊದಲು ಯೂಟ್ಯೂಬ್ ಚಾನೆಲ್ನಲ್ಲಿ ರಶ್ಮಿಕಾ ಅವರನ್ನು ವಿಜಯ್ ಅವರನ್ನು ಮದುವೆಯಾಗಬೇಡಿ ಎಂದು ವೇಣುಸ್ವಾಮಿ ಹೇಳಿದ್ದರು.
ಪರಿಹಾರ ಮಾಡಿದ್ರೆ ಸರಿ ಹೋಗುತ್ತೆ
ಅವರ ದಾಂಪತ್ಯದಲ್ಲಿ ಹಲವು ನ್ಯೂನತೆಗಳಿದ್ದು, ಇಬ್ಬರೂ ಮದುವೆಯಾದ ನಂತರ ವಿವಾದಗಳಿಗೆ ಕಾರಣವಾಗುತ್ತಾರೆ ಎಂದಿದ್ದರು. ಈಗ ಜಾತಕ ತಿದ್ದುಪಡಿ ಮಾಡಿಕೊಂಡರೆ ಅವರ ದಾಂಪತ್ಯ ಜೀವನ ಚೆನ್ನಾಗಿರುತ್ತದೆ, ಉಳಿದದ್ದು ಕರ್ಮದ ಫಲ ಎಂದು ಮಾತ್ರ ಹೇಳಬಲ್ಲೆ ಎಂದಿದ್ದಾರೆ. ನಾನು ಹೇಳಿದ ಪರಿಹಾರಗಳನ್ನು ಮಾಡಿದರೆ ಅವರ ದಾಂಪತ್ಯ ಜೀವನ ಸರಿಯಾಗಿರುತ್ತೆ, ನಂತರ ಯಾರ ಕರ್ಮ ಎಂದು ವೇಣು ಸ್ವಾಮಿ ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ನಿಶ್ಚಿತಾರ್ಥದೊಂದಿಗೆ, ವೇಣು ಸ್ವಾಮಿ ಅವರ ವಿಡಿಯೋ ಮತ್ತೆ ಟ್ರೆಂಡಿಂಗ್ ಆಗಿದೆ.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications