Saptami Gowda Audio Viral: ಯುವ ಮಾತು ಕೇಳಿ ಹಾಗೆ ಮಾಡಿದೆ: ಸಪ್ತಮಿ ಗೌಡ ಆಡಿಯೋ ವೈರಲ್
ಬೆಂಗಳೂರು, ಜೂನ್ 23: ಡಾ ರಾಜ್ಕುಮಾರ್ ಅವರ ಮೊಮ್ಮಗ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರ ಕಿರಿಯ ಮಗ ಯುವ ರಾಜ್ಕುಮಾರ್ (ಗುರು ರಾಜ್ಕುಮಾರ್) ವಿಚ್ಛೇದನ ಸುದ್ದಿ ಸಾಕಷ್ಟು ಸದ್ದು ಮಾಡಿದ್ದು, ಕಾಂತರಾ ನಟಿ ಸಪ್ತಮಿ ಗೌಡ ಅವರ ಹೆಸರು ಕೂಡ ಈ ಪ್ರಕರಣದಲ್ಲಿ ಕೇಳಿ ಬಂದಿದೆ.
ಯುವ ರಾಜ್ಕುಮಾರ್ ಅವರು ಕಳಿಸಿದ್ದ ವಿಚ್ಛೇದನ ನೋಟಿಸ್ಗೆ ಲಾಯರ್ ಮೂಲಕವೇ 12 ಪುಟಗಳ ಉತ್ತರ ನೀಡಿರುವ ಶ್ರೀದೇವಿ ಭೈರಪ್ಪ ಅವರು ನೇರವಾಗಿ ಸಪ್ತಮಿ ಗೌಡ ಅವರ ಹೆಸರನ್ನೇ ಉಲ್ಲೇಖ ಮಾಡಿದ್ರು. ಅಲ್ಲದೇ ಸಪ್ತಮಿ ಗೌಡ ಹಾಗೂ ಯುವ ರಾಜ್ಕುಮಾರ್ ಇಬ್ಬರೂ ಹೋಟೆಲ್ ರೂಮ್ನಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎಂದು ಆರೋಪಿಸಿದ್ದರು. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.

ವೈರಲ್ ಆಗುತ್ತಿರುವ ಆಡಿಯೋದಲ್ಲಿ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ ಆಡಿಯೋ ಆಗಿದೆ. ಈ ಆಡಿಯೋ ಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ. ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್ ಎಂದು ಹೇಳಿರುವುದು ಆಡಿಯೋದಲ್ಲಿದೆ. ಈ ಆಡಿಯೋವನ್ನು ಸಪ್ತಮಿ ಗೌಡ ಅವರು ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಗೌಡ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ ಎಂದು ಹೇಳಿರುವ ಮಾತು ಆಡಿಯೋದಲ್ಲಿದೆ.
ಇನ್ನೂ ನಾನು ನನ್ನ ಅಮ್ಮನ ಮೇಲೆ ಹಣೆ ಮಾಡಿ ಹೇಳುತ್ತೇನೆ. ನಾನು ಬಿಟ್ಟು ಬಾ ಅಂತ ಹೇಳಿಲ್ಲ. ನಾನು ಮೊದಲಿನಿಂದಲೂ ಹೇಳುತ್ತಲೇ ಇದ್ದೆ, ಇದೆಲ್ಲ ವರ್ಕೌಟ್ ಆಗಲ್ಲ. ಅಲ್ಲದೆ ನಾನು ಎಂದಿಗೂ ಸಹ ಫ್ಯಾಮಿಲಿ ಬಿಟ್ಟು ಬಾ, ಪತ್ನಿ ಜೊತೆ ಬ್ರೇಕ್ ಅಪ್ ಮಾಡಿಕೊ ಎಂದು ಹೇಳಿಲ್ಲ ಸರ್ ನನ್ನನ್ನು ನಂಬಿ ಎಂದು ಬೇಡಿಕೊಂಡಿದ್ದಾರೆ. ಬೇಕಾದರೆ ನನ್ನನ್ನು ಬೈಯ್ಯಿರಿ, ಗುರು (ಯುವ)ಗೆ ಅದು ಮೊದಲ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ನನಗೆ ಗೊತ್ತಿದೆ. ಯಾರಿಗೂ ತೊಂದರೆ ಆಗಬಾರದು ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ ಎಂದು ಸಪ್ತಮಿ ಗೌಡ ಅವರ ಧ್ವನಿಯದ್ದು ಎನ್ನಲಾದ ಆಡಿಯೋನಲ್ಲಿ ಹೇಳಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications