BBK 12 Finale: ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಕ್ಯಾಪ್ಟನ್ ಮ್ಯೂಟೆಂಟ್ ರಘು
Bigg Boss Kannada 12 Finale: ಬಿಗ್ಬಾಸ್ ಕನ್ನಡ 12 ಸೆಪ್ಟೆಂಬರ್ 28, 2025ರಂದು ಆರಂಭವಾಗಿದ್ದು, ಇದೀಗ ಇಂದು (ಜನವರಿ 18, 2026) ಫಿನಾಲೆ ಹಂತ ತಲುಪಿದೆ. ಈ ವೇಳೆ ಕ್ಯಾಪ್ಟನ್ ಮ್ಯೂಟೆಂಟ್ ರಘು ದೊಡ್ಮನೆಯಿಂದ ಹೊರಬಿದ್ದಿದ್ದಾರೆ.
ಬಿಗ್ ಬಾಸ್ ಮನೆಯಿಂದ ಔಟ್ ಆಗುವ ಸ್ಪರ್ಧಿ ಯಾರು ಎಂಬುದನ್ನು ಬಹಿರಂಗಪಡಿಸುವುದಕ್ಕೆ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 3 ವಿಜೇತೆ ನಟ ಶ್ರುತಿ ಅವರನ್ನು ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಜೊತೆಗೆ ರಘು ಕೂಡ ತಲಾ ಒಂದೊಂದು ಬಾಟಲಿಯಲ್ಲಿ ನೀರು ಹಾಕಲು ಹೇಳಿದರು. ಈ ವೇಳೆ ರಘು ಅವರ ಬಾಟಲಿಯಲ್ಲಿ ನೀರು ಕೆಂಪು ಬಣ್ಣಕ್ಕೆ ತಿರುಗಿದ ಹಿನ್ನೆಲೆ ಅವರನ್ನು ಮನೆಯಿಂದ ಹೊರಗಡೆ ಕರೆದೊಯ್ಯಲಾಯಿತು.

ಬಿಗ್ಬಾಸ್ ಕನ್ನಡ ಸೀಸನ್ 12 ಮನೆಯಿಂದ ಮ್ಯೂಟೆಂಟ್ ರಘು ಎಲಿಮಿನೇಟ್ ಆಗಿದ್ದಾರೆ. ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ ಹಾಗೂ ಕಾವ್ಯ ಟಾಪ್ 4 ಸ್ಪರ್ಧಿಗಳಾಗಿ ಉಳಿದುಕೊಂಡಿದ್ದಾರೆ. ಇದರಲ್ಲಿ ಬಳಿಕ ಯಾರೂ ಹೊರಗಡೆ ಹೋಗಲಿದ್ದಾರೆ ಎಂದು ಕಾದುನೋಡಬೇಕಿದೆ.
ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭ ಆಗಿದೆ. ಸೀಸನ್ 12 ಇಂದಿಗೆ 112 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಸದ್ಯ ಫಿನಾಲೆಗೆ ಗಿಲ್ಲಿ ನಟ, ಅಶ್ವಿನಿ ಗೌಡ, ಕಾವ್ಯಾ, ರಕ್ಷಿತಾ ಶೆಟ್ಟಿ ಟಾಪ್ ನಾಲ್ಕರಲ್ಲಿ ಉಳಿದುಕೊಂಡಿದ್ದಾರೆ. ಈ ನಾಲ್ವರಲ್ಲಿ ಒಬ್ಬರು ವಿನ್ನರ್ ಆಗಲಿದ್ದು, ಅವರಿಗೆ 37 ಕೋಟಿಗೂ ಅಧಿಕ ವೋಟ್ ಬಂದಿವೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಶನಿವಾರವೇ ಬಹಿರಂಗಪಡಿಸಿದ್ದರು.
ಫಿನಾಲೆ ತಲುಪಿದ 6 ಮಂದಿಯಲ್ಲಿ ಈಗಾಗಲೇ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್ ಅದ್ಭುತವಾಗಿ ಆಟ ಆಡುವ ಮೂಲಕ ಟಾಸ್ಕ್ ಮಾಸ್ಟರ್ ಅಂತಲೇ ಕರೆಸಿಕೊಂಡಿದ್ದರು. ಉತ್ತಮ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು. ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಹಾಗಯೇ ರಘು ಕೂಡ ಕ್ಯಾಪ್ಟನ್ ರಘು ಅಂತಲೇ ಕರೆದಿಕೊಂಡಿದ್ದರು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರೂ ಸಹ ತಮ್ಮ ಆಟ, ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು.ಇದೀಗ ಅವರು 5ನೇ ಸ್ಪರ್ಧಿಯಾಗಿ ಮನೆಯಿಂದ ಹೊರಗಡೆ ಬಂದಿದ್ದಾರೆ.
ವೈಲ್ಡ್ ಕಾರ್ಡ್ ಎಂಟ್ರಿ: ರಘು ಅವರು ಬಿಗ್ಬಾಸ್ ಪ್ರಾರಂಭವಾಗಿ 22 ದಿನಗಳ ಬಳಿಕ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಬಂದ ಮೊದಲ ದಿನವೇ ಮನೆಯಲ್ಲಿ ವೇಕಪ್ ಎಂದು ಹೇಳುತ್ತಾ ನಿದ್ರೆಗೆ ಜಾರಿದ್ದ ಉಳಿದ ಸ್ಪರ್ಧಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದರು.
ಆರಂಭದಲ್ಲೇ ಅಶ್ವಿನಿ ಜೊತೆಗೆ ಜೋರು ಜಗಳ ಕೂಡ ಮಾಡಿಕೊಂಡಿದ್ದರು. ಅವರ ಫಿಟ್ ಬಾಡಿ ಮತ್ತು ದೊಡ್ಡ ಧ್ವನಿಯಿಂದ ಮನೆಯವರ ಮೇಲೆ ಹಿಡಿತ ಸಾಧಿಸಿದ್ದರು. ಆದರೆ, ದಿನ ಕಳೆದಂತೆ ಅವರು ದೇಹ ದೃಢವಾಗಿದ್ದರೂ, ಬೆಣ್ಣೆಯಂತಹ ಮನಸನ್ನು ಹೊಂದಿದ್ದರು. ಈ ಕುರಿತು ಮನೆಯಲ್ಲಿನ ಇತರ ಸ್ಪರ್ಧಿಗಳೇ ಹೇಳಿದ್ದಾರೆ.
ಇನ್ನೂ ಗಿಲ್ಲಿ ನಟ, ರಕ್ಷಿತಾ ನಡುವೆ ಉತ್ತಮ ಬಾಂಧವ್ಯ ಬೆಳೆಯಿತು. ಅವರು ಉತ್ತಮ ಸ್ನೇಹಿತರು ಕೂಡ ಆದರು. ಆದರೆ ತಪ್ಪು ಅಂತಾ ಬಂದಾಗ ರಘು ಅವರು ಯಾವ ಸ್ನೇಹಿತ ಅಂತಾ ನೋಡುತ್ತಿರಲಿಲ್ಲ. ಮುಖದ ಮೇಲೆ ಹೊಡೆದಂತೆ ಎಚ್ಚರಿಸುತ್ತಿದ್ದರು. ಇನ್ನೂ ಗಿಲ್ಲಿ ಮೇಲೆ ದಿನ ಕಳೆದಂತೆ ಕೋಪವನ್ನು ಸಹ ಮಾಡಿಕೊಂಡರು. ಬಳಿಕ ಅವರೇ ಎಚ್ಚೆತ್ತುಕೊಂಡು ಗಿಲ್ಲಿ ಇರುವುದೇ ಹಾಗೆ, ಅವನು ತುಂಬಾ ಒಳ್ಳೆ ಮನಸಿನವನು ಅಂತೆಲ್ಲಾ ಹೇಳಿ ಕೊನೆಗೆ ಕೋಪ ತಣ್ಣಗಾಗಿಸಿಕೊಂಡಿದ್ದರು.
ರಘು ಆಟ ಮೆಚ್ಚಿದ ಪ್ರೇಕ್ಷಕರು: ಇನ್ನೂ ಮನೆಯಲ್ಲಿ ತಾನೊಬ್ಬ ಸೋಮಾರಿ, ಮನೆಯವರ ಜೊತೆ ಸಮಯ ಕಳೆಯುತ್ತಿರಲಿಲ್ಲ, ಮನೆಯವರ ಪ್ರೀತಿಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಬಿಗ್ಬಾಸ್ ಮನೆಗೆ ಬಂದ ಮೇಲೆ ನಾನು ಮಾಡುತ್ತಿದ್ದ ತಪ್ಪಿನ ಅರಿವಾಗಿದೆ ಎಂದು ರಘು ಹೇಳಿಕೊಂಡಿದ್ದರು. ಇದೀಗ ರಘು ಅವರು 5ನೇ ಸ್ಪರ್ಧಿಯಾಗಿ ಹೊರಗೆ ಹೋಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬಂದರೂ ಅವರು ಆಡಿದ ಆಟವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications