Bigg Boss Kannada: ಬಿಗ್ ಬಾಸ್ ತಂಡಕ್ಕೆ ಬಿಗ್ ಶಾಕ್: ತಕ್ಷಣವೇ ಶೋ ನಿಲ್ಲಿಸಲು ಸೂಚನೆ
ನೆಲಮಂಗಲ, ಜನವರಿ 10: ಬಿಗ್ ಬಾಸ್ ಕನ್ನಡ ಸೀಸನ್ ಫಿನಾಲೆಗೆ ಕೆಲ ದಿನಗಳು ಮಾತ್ರ ಬಾಕಿ ಇದೆ. ಬಿಗ್ ಬಾಸ್ ರೋಚಕ ಘಟ್ಟದಲ್ಲಿ ಸಾಗುತ್ತಿದ್ದು, ಆಟದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಪರ್ಧಿಗಳ ನಡುವಿನ ಪೈಪೋಟಿಯು ಜೋರಾಗಿದೆ. ಈ ಹೊತ್ತಲ್ಲೇ ಬಿಗ್ ಬಾಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಮಾಳಿಗೊಂಡನಹಳ್ಳಿ ಗ್ರಾಮದಲ್ಲಿ ಬಿಗ್ಬಾಸ್ ಕಾರ್ಯಕ್ರಮವನ್ನು ಕಾನೂನು ಬಾಹಿರವಾಗಿ ನಡೆಸಲಾಗುತ್ತಿದೆ. ಕಾರ್ಮಿಕ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೆ ನಡೆಸಲಾಗುತ್ತಿದೆ ಎಂದು ರಾಘವೇಂದ್ರ ಆಚಾರ್ ಎಂಬುವವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಬಿಗ್ಬಾಸ್ ನಡೆಯುತ್ತಿರುವ ಮಾಳಿಗೊಂಡನಹಳ್ಳಿ ಸರ್ವೆ ನಂ.128/1ರ ವಾಣಿಜ್ಯ, ವ್ಯಾಪಾರ ವಸತಿಯೇತರ ವ್ಯವಹಾರದ ಲೈಸೆನ್ಸ್ ರದ್ದು ಮಾಡಿದ್ದು, ಶೋ ಸ್ಥಗಿತಗೊಳಿಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಪಂ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಮಾಳಿಗೊಂಡನಹಳ್ಳಿ ಗ್ರಾಮದಲ್ಲಿ ಬಿಗ್ಬಾಸ್ ಕಾರ್ಯಕ್ರಮವನ್ನು ಕಾನೂನು ಬಾಹಿರವಾಗಿ ನಡೆಸಲಾಗುತ್ತಿದ್ದು, ಕಾರ್ಮಿಕ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೆ ನಡೆಸಲಾಗುತ್ತಿದೆ ಎಂದು ರಾಘವೇಂದ್ರ ಆಚಾರ್ ಎಂಬುವವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಭೂಪರಿವರ್ತನೆ ಆದೇಶ ರದ್ದು ಮಾಡಿದ್ದಾರೆ.
ರಾಮೋಹಳ್ಳಿ ಗ್ರಾಮ ಪಂಚಾಯಿತಿಯವರು ಬಿಗ್ಬಾಸ್ ಶೋ ನಡೆಸಲು ಅನುಮತಿ ನೀಡಿಲ್ಲ ಎಂಬುದಾಗಿ ತಿಳಿಸಿರುವ ಕಾರಣ ಕೂಡಲೇ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಕ್ಕೆ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದಾರೆ. ಅದರಂತೆ ರಾಮೋಹಳ್ಳಿ ಪಿಡಿಒ, ಜಮೀನಿನ ಮಾಲೀಕ ಪಡೆದಿದ್ದ ವಾಣಿಜ್ಯ, ವ್ಯಾಪಾರ ವಸತಿಯೇತರ ವ್ಯವಹಾರದ ಲೈಸೆನ್ಸ್ ಅನ್ನು ರದ್ದು ಮಾಡಿದ್ದು, ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಕಾರ್ಯಕ್ರಮವನ್ನ ನಿಲ್ಲಿಸುವಂತೆ ಆದೇಶಿಸಿದ್ದಾರೆ.
ಇನ್ನೂ ಇನ್ನೊಬ್ಬ ದೂರದಾರರಾದ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯಾಧ್ಯಕ್ಷ ರಾಘವೇಂದ್ರ ಆಚಾರ್ ಅವರು ಮಾತನಾಡಿ, 'ರಾಜ್ಯದ ದೊಡ್ಡ ರಿಯಾಲಿಟಿ ಶೋ ಅನ್ನು ಅನುಮತಿ ಇಲ್ಲದೆ ನಡೆಸುವುದು ತಪ್ಪು. ಎಲ್ಲರಿಗೂ ಒಂದೇ ಕಾನೂನು. ಈಗಾಗಲೇ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದು, ಬಿಗ್ಬಾಸ್ ನಡೆಯುತ್ತಿರುವ ಜಾಗದ ಲೈಸೆನ್ಸ್, ಭೂಪರಿವರ್ತನೆ ಆದೇಶವನ್ನು ಸಹ ರದ್ದು ಮಾಡಲಾಗಿದೆ. ಬಿಗ್ ಬಾಸ್ ಶೋ ನಿಲ್ಲಿಸಲು ಸೂಚನೆ ಇದೆ. ನಿಲ್ಲಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೋರ್ವ ದೂರುದಾರ ಭಾನುಪ್ರಕಾಶ್ ನೆಲಮಂಗಲ ಅವರು ಮಾತನಾಡಿ, ಕಾನೂನು ಪಾಲನೆ ಮಾಡದೆ ಬಿಗ್ಬಾಸ್ ಶೋ ನಡೆಸುತ್ತಿರುವುದು ಸರಿಯಲ್ಲ. ಅನುಮತಿ ಪಡೆಯದೆ ಶೋ ಆರಂಭಿಸಿದ್ದು, ಈಗ ಜಮೀನಿನ ಎಲ್ಲಾ ಲೈಸೆನ್ಸ್ಗಳನ್ನು ಸಹ ರದ್ದು ಮಾಡಲಾಗಿದೆ. ಅಧಿಕಾರಿಗಳು ತಕ್ಷಣ ಸ್ಥಗಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications