ಇನ್ಸ್ಟಾಗ್ರಾಮ್ ಲೈವ್ಗೆ ಹೋದ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಮೀರ್ ಆಚಾರ್ಯ
ಬೆಂಗಳೂರು, ಸೆಪ್ಟೆಂಬರ್ 29: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ಸಮೀರ್ ಆಚಾರ್ಯ ದಂಪತಿ ಕನ್ನಡ ಕಿರುತೆರೆಯಲ್ಲಷ್ಟೇ ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್. ಟ್ರಾವೆಲ್, ಸಂಗೀತ ಹಾಗೂ ಮಗಳಿಗೆ ಸಂಬಂಧಿಸಿದ ವಿಡಿಯೋ ಮೂಲಕವೇ ಜನಪ್ರಿಯತೆ ಪಡೆದ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಬಹಳ ಅನ್ಯೋನ್ಯವಾಗಿರುವಂತೆ ನೋಡುಗರೆದುರು ಕಾಣಿಸಿಕೊಳ್ಳುತ್ತಿದ್ದರು.
ಆದರೆ ಇದೀಗ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ಸಮೀರ್ ಆಚಾರ್ಯ ದಂಪತಿ ಜೀವನದಲ್ಲಿ ಅಪಸ್ವರ ಎದ್ದಿದೆ. ಪತ್ನಿ ಶ್ರಾವಣಿ ಸಮೀರ್ ಆಚಾರ್ಯ ಮೇಲೆ ಸಮೀರ್ ಆಚಾರ್ಯ ತಂದೆ-ತಾಯಿಯ ಜೊತೆಗೂಡಿ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇಂದು (ಸೆಪ್ಟೆಂಬರ್ 29) ಭಾನುವಾರ ಶ್ರಾವಣಿ ಸಮೀರ್ ಆಚಾರ್ಯ ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದರಂತೆ. ಈ ವೇಳೆ ಮಗಳು ಜೋರಾಗಿ ಅಳುತ್ತಿದ್ದಳು ಇಂದರಿಂದ ಶ್ರಾವಣಿ ಸಮೀರ್ ಆಚಾರ್ಯ ಮಗಳಿಗೆ ಗದರಿದ್ದಾರೆ. ಇದನ್ನು ಕಂಡ ಸಮೀರ್ ಆಚಾರ್ಯ ತಂದೆ ತನ್ನ ಸೊಸೆ ಶ್ರಾವಣಿಗೆ ಬೈದಿದ್ದಾರೆ ಎನ್ನಲಾಗಿದೆ.
ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಮನೆಯಲ್ಲಿ ಜಗಳ ಪ್ರಾರಂಭವಾಗಿದೆ. ನೋಡ ನೋಡುತ್ತಿದ್ದಂತೆ ಈ ಜಗಳ ತಾರಕಕ್ಕೇರಿದೆ. ಈ ವೇಳೆ ಸಮೀರ್ ಆಚಾರ್ಯ ಸೇರಿದಂತೆ ಅತ್ತೆ, ಮಾವ ಸೇರಿಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದೇ ವೇಳೆ ಶ್ರಾವಣಿ ತಮ್ಮ ಮೊಬೈಲ್ ತೆಗೆದು ಇನ್ಸ್ಟಾಗ್ರಾಂನಲ್ಲಿ ಲೈವ್ ಹೋಗಿದ್ದಾರೆ ಎನ್ನಲಾಗಿದೆ.
ಇದರಿಂದ ಮತ್ತಷ್ಟು ಸಿಟ್ಟಿಗೆದ್ದ ಸಮೀರ್ ಆಚಾರ್ಯ ಶ್ರಾವಣಿಯಿಂದ ಮೊಬೈಲ್ ಕಿತ್ತುಕೊಂಡು ಒಡೆದು ಹಾಕಿದ್ದಾರೆ. ಈ ಗಲಾಟೆಯಲ್ಲಿ ಶ್ರಾವಣಿ ಅವರಿಗೆ ಕೈ, ಮುಖಕ್ಕೆ ಗಾಯಗಳಾಗಿವೆ. ಸದ್ಯ ಶ್ರಾವಣಿ ಸಮೀರ್ ಆಚಾರ್ಯ ತಮ್ಮ ಮೇಲಿನ ಹಲ್ಲೆ ಖಂಡಿಸಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಇನ್ನು ಈ ಗಲಾಟೆಯಲ್ಲಿ ಸಮೀರ್ ಆಚಾರ್ಯ ತಂದೆಯ ತಲೆಗೆ ಗಾಯಗಳಾಗಿವೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications