ಕನ್ನಡಿಗರ ಹೋರಾಟಕ್ಕೆ ಜಯ! ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಇಲ್ಲ
ಕಮಲ್ ಹಾಸನ್ ಅವರ ಪಾಡು ಮಾಡಿದ್ದುಣ್ಣೋ ಮಹಾರಾಯ ಎನ್ನುವಂತಾಗಿದೆ. ಕನ್ನಡದ ಬಗ್ಗೆ ಕೇವಲವಾಗಿ ಮಾತನಾಡಿದ್ದಲ್ಲದೆ, ಕ್ಷಮೆ ಕೇಳಲು ಒಪ್ಪದೆ. ನನ್ನ ಸಿನಿಮಾ ಮಾತ್ರ ಕರ್ನಾಟಕದಲ್ಲಿ ಯಾವುದೇ ಅಡ್ಡಿಯಿಲ್ಲದೆ ರಿಲೀಸ್ ಮಾಡಿಸಿಕೊಡಿ ಎಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ಗೆ ಬಿಗ್ ಶಾಕ್ ಎದುರಾಗಿದೆ. ಇಂದು ಕೋರ್ಟ್ನಲ್ಲಿ ಕಮಲ್ ಅರ್ಜಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಥಗ್ ಲೈಫ್ ಸಿನಿಮಾ ರಿಲೀಸ್ ಆಗಬೇಕೇ? ಬೇಡವೇ ಎಂಬ ವಿಚಾರಣೆಯನ್ನು ಸದ್ಯಕ್ಕೆ ಮುಂದೂಡಿದೆ. ಹೀಗಾಗಿ ಕರ್ನಾಟಕದಲ್ಲಿ ನಿಗದಿತ ದಿನಾಂಕದಂದು ಥಗ್ಲೈಫ್ ಬಿಡುಗಡೆಗೆ ಬ್ರೇಕ್ ಹಾಕಿದೆ.
ಇಂದು ಭಾಷಾ ವಿಚಾರವಾಗಿ ಕಮಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಕೋರ್ಟ್, ಭಾಷೆಯ ಬಗ್ಗೆ ಕಾಮೆಂಟ್ ಮಾಡಲು ನೀವೇನು ಭಾಷಾ ತಜ್ಞರೇ? ಎಂದು ಕೇಳಿತ್ತು. ಸದ್ಯ ಈ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದ್ದು, ಅಲ್ಲಿವರೆಗೆ ಥಗ್ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದಿಲ್ಲ. ಜೂನ್ ಐದರಂತೆ ಬಹುಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಆ ದಿನ ಸಿನಿಮಾ ರಿಲೀಸ್ ಆಗುವುದಿಲ್ಲ. ಕೋರ್ಟ್ ವಿಚಾರಣೆ ಮುಂದೂಡಿದ್ದರಿಂದ ಕಮಲ್ ಹಾಸನ್ ಹಾಗೂ ಚಿತ್ರತಂಡಕ್ಕೆ ಭಾರಿ ಮುಖಭಂಗವಾಗಿದೆ.

ಇಂದು ವಿಚಾರಣೆ ವೇಳೆ ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರವೇ ಅವರ ಅರ್ಜಿ ಪರಿಗಣಿಸುತ್ತೇವೆ ಎಂದು ಹೇಳಲಾಗಿತ್ತು. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಎನ್ನಲು ಕಮಲ್ ಹಾಸನ್ ಇತಿಹಾಸಕಾರರೇ? ಇಂದಿನ ಪರಿಸ್ಥಿತಿಗೆ ನೀವೇ ಕಾರಣ, ಇಂತಹ ಹೇಳಿಕೆ ನೀಡುವ ಮುನ್ನ ಯೋಚನೆ ಮಾಡಬೇಕು ಎಂದು ಕ್ಲಾಸ್ ತೆಗೆದುಕೊಂಡಿತ್ತು.
ಇನ್ನು ಕಮಲ್ ಹಾಸನ್ ಕೂಡ ಸಾಮಾನ್ಯ ವ್ಯಕ್ತಿಯೇನಲ್ಲ, ಸೆಲೆಬ್ರಿಟಿ ಆಗಿರುವ ಕಾರಣ ಈ ರೀತಿ ಹೇಳಿಕೆ ಕೊಟ್ಟ ಅವರು ಕ್ಷಮೆ ಕೇಳಬೇಕು. ಆಮೇಲೆ ಅರ್ಜಿ ಪರಿಗಣಿಸುತ್ತೇವೆ ಎಂದು ಹೇಳಲಾಗಿತ್ತು. ಬಳಿಕ ಮಧ್ಯಾಹ್ನ ವಿಚಾರಣೆ ಮುಂದುವರಿಸಿತು. ಬಳಿಕ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಕಮಲ್ ಪರ ವಕೀಲರು, ಥಗ್ ಲೈಫ್ ಸಿನಿಮಾದ ನಿರ್ಮಾಪಕರು ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಮಾಡದಿರಲು ನಿರ್ಧರಿಸಿದ್ದಾರೆ. ಕರ್ನಾಟಕ ಫಿಲ್ಮ್ ಚೇಂಬರ್ ಜೊತೆಗೆ ನಿರ್ಮಾಪಕರು ಚರ್ಚೆ ನಡೆಸಲು ಸಿದ್ಧರಿದ್ದಾರೆ ಎಂದು ಹೇಳಿದ್ದು, ಈ ಹಿನ್ನೆಲೆ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
ಅಲ್ಲದೆ ನ್ಯಾಯಪೀಠವು ಜೂನ್ 10ರ ಒಳಗಾಗಿ ಕಮಲ್ ಹಾಸನ್ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಜೊತೆಯಲ್ಲಿ ಮಾತುಕತೆ ನಡೆಸಿ ಈ ವಿವಾದ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಅಲ್ಲಿವರೆಗೂ ಕರ್ನಾಟಕದಲ್ಲಿ ಥಗ್ಲೈಫ್ ಸಿನಿಮಾ ರಿಲೀಸ್ ಮಾಡದಂತೆಯೂ ಹೇಳಿದೆ. ಕನ್ನಡಿಗರು ಕೂಡ ಕಮಲ್ ಕ್ಷಮೆ ಕೇಳುವವರೆಗೆ ಥಗ್ಲೈಫ್ ಸಿನಿಮಾ ರಿಲೀಸ್ ಆಗಲು ಬಿಡಲ್ಲ ಎಂದು ಎಚ್ಚರಿಕೆ ನೀಡಿದ್ದರು. ಈಗ ಚಿತ್ರತಂಡ ಕೂಡ ಫಿಲ್ಮ್ ಚೇಂಬರ್ ಜೊತೆ ಮಾತುಕತೆಗೆ ಮುಂದಾಗಿದೆ. ಆದರೆ ವಿವಾದದ ಬಿಸಿ ಜೋರಾಗಿರುವುದರಿಂದ ಜೂನ್ 5ರಂದು ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್ ಆಗಲ್ಲ.
-
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications