ಮಡೆನೂರು ಮನು ಮೇಲಿನ ಬ್ಯಾನ್ ತೆರವು ಬಗ್ಗೆ ಬಿಗ್ ಅಪ್ಡೇಟ್, ಕ್ಷಮಿಸಿದ್ರಾ ಶಿವಣ್ಣ?
ಸ್ಯಾಂಡಲ್ವುಡ್ ನಟರಾದ ಶಿವರಾಜ್ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಆಡಿಯೋ ವೈರಲ್ ಉದಯೋನ್ಮುಖ ನಟ ಮಡೆನೂರು ಮನು ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಜೈಲಿನಿಂದ ಹೊರಬಂದಿದ್ದ ಮಡೆನೂರು ಮನು ನಟ ಶಿವಣ್ಣನ ಬಳಿ ಕ್ಷಮೆ ಕೇಳಲು ಅವರ ಮನೆ ಮುಂದೆ ದಿನವಿಡೀ ಕಾದು ನಿಂತಿದ್ದರು. ಆದರೂ ಶಿವಣ್ಣ ಮನು ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮನು ಅವರ ಮೇಲಿನ ಬ್ಯಾನ್ ವಿಚಾರವಾಗಿ ಮಹತ್ವದ ಅಪ್ಡೇಟ್ ಸಿಕ್ಕಿದೆ.
ಶಿವಣ್ಣ ಹಾಗೂ ದರ್ಶನ್ ಇನ್ನೇನು ಕೆಲವೇ ವರ್ಷಗಳಲ್ಲಿ ಸಾಯ್ತಾರೆ ಎಂದು ಆ ವೈರಲ್ ಆಡಿಯೋದಲ್ಲಿತ್ತು. ಹೀಗಾಗಿ ನಟರ ಅಭಿಮಾನಿಗಳು ಮನು ವಿರುದ್ಧ ರೊಚ್ಚಿಗೆದ್ದು ಸಿನಿಮಾಗಳಿಂದ ಬ್ಯಾನ್ ಮಾಡುವಂತೆ ಆಗ್ರಹಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಫಿಲ್ಮ್ ಚೇಂಬರ್ ಮಡೆನೂರು ಮನು ಅವರನ್ನು ಸಿನಿಮಾ ಚಟುವಟಿಕೆಗಳಿಂದ ಬ್ಯಾನ್ ಮಾಡುವುದಾಗಿ ಹೇಳಿತ್ತು. ಆದರೆ ಜೈಲಿನಿಂದ ಹೊರಬಂದ ನಂತರ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದ ಮನು, ಆ ಆಡಿಯೋ ನನ್ನದಲ್ಲ, ಇದು ಷಡ್ಯಂತ್ರ. ನಾನು ನಟರ ಬಳಿ ತೆರಳಿ ಕ್ಷಮೆ ಕೇಳುತ್ತೇನೆ ಎಂದಿದ್ದರು.

ಅದರಂತೆ ಮೊದಲಿಗೆ ಧ್ರುವ ಸರ್ಜಾ ಬಳಿ ಮನು ಕ್ಷಮೆ ಕೇಳಿದ್ದರು. ಬಳಿಕ ಶಿವರಾಜ್ಕುಮಾರ್ ಅವರ ಮನೆ ಬಳಿ ತೆರಳಿ ಕಾದರೂ ಗೇಟ್ ತೆರೆದಿರಲಿಲ್ಲ. ಹಾಗಾಗಿ ಅವರ ಕೋಪ ತಣ್ಣಗಾಗಿಲ್ಲ ಎನ್ನಲಾಗಿತ್ತು. ಇನ್ನು ದರ್ಶನ್ ಅವರಿಗೆ ಕ್ಷಮೆ ಕೇಳಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಮೂವರೂ ನಟರಿಗೆ ಕ್ಷಮೆ ಕೋರಿ ಮನು ಪತ್ರ ಬರೆದಿದ್ದಾರೆ. ಅಲ್ಲದೆ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರನ್ನೂ ಮನು ಭೇಟಿಯಾಗಿದ್ದು, ಮನು ಮೇಲಿನ ಬ್ಯಾನ್ ತೆರವು ಮಾಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಮನು ಮನವಿಗೆ ಗ್ರೀನ್ಸಿಗ್ನಲ್
ಮಡೆನೂರು ಮನು ಕ್ಷಮೆ ಕೇಳಿ ಪತ್ರ ಬರೆದ ಹಿನ್ನೆಲೆ ಅವರಿಗೆ ಒಂದು ಅವಕಾಶ ನೀಡುತ್ತೇವೆ ಎಂದು ಉಮೇಶ್ ಬಣಕಾರ್ ಕೂಡ ಹೇಳಿದ್ದಾರೆ. ಮಡೆನೂರು ಮನು ವಿವಾದ ಕೋರ್ಟ್ವರೆಗೆ ಹೋಗಿತ್ತು. ಈಗ ಅವರಿಗೆ ಪಾಪಪ್ರಜ್ಞೆ ಹಾಗೂ ಪ್ರಾಯಶ್ವಿತ್ತ ಕಾಡುತ್ತಿದೆ. ಅಲ್ಲದೆ ಕ್ಷಮೆ ಕೋರಿ ಪತ್ರವೂ ಬರೆದಿದ್ದಾರೆ. ಬಹಿರಂಗವಾಗಿಯೂ ಕ್ಷಮೆ ಕೇಳಿದ್ದು, ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಅದನ್ನ ನಾವು ಪುರಸ್ಕರಿಸುತ್ತೇವೆ ಎಂದು ನಿರ್ಮಾಪಕರ ಸಂಘ ಹೇಳಿದೆ. ಇದರಿಂದ ಮನುಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹಿರಿಯರು ಚಿತ್ರರಂಗವನ್ನು ಕಟ್ಟಿ ಬೆಳೆಸಲು ಸಾಕಷ್ಟು ಕೊಡುಗೆ ನೀಡಿದ್ದು, ಇನ್ನು ಮುಂದೆ ಇಂತಹ ವಿವಾದ ಆಗದಂತೆ ನೋಡಿಕೊಳ್ಳಿ. ನೀವಿನ್ನೂ ಉದಯೋನ್ಮುಖ ನಟ. ನಿಮಗೆ ಇನ್ನೂ ಭವಿಷ್ಯ ಇದೆ. ಮತ್ತೆ ಏನಾದರೂ ತಪ್ಪುಗಳಾದರೆ ಯಾರೂ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದೂ ಮಡೆನೂರು ಮನು ಎಚ್ಚರಿಕೆ ನೀಡಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications