Get Updates
Get notified of breaking news, exclusive insights, and must-see stories!

ಮಡೆನೂರು ಮನುಗೆ ಓಪನ್‌ ಚಾಲೆಂಜ್‌ ಹಾಕಿದ ವರ್ತೂರು ಸಂತೋಷ್‌, ಏನಿದು ಕಿರಿಕ್‌?

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಸಾಲು ಸಾಲು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಟಿಗೆ ಕಿರುಕುಳ, ವಂಚನೆ ಹಾಗೂ ಅತ್ಯಾ*ಚಾರ ಕೇಸ್‌ನಲ್ಲಿ ಮನು ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಮತ್ತೊಂದೆಡೆ ಸ್ಯಾಂಡಲ್‌ವುಡ್‌ ನಟರ ಸಾವಿನ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿರುವ ಆಡಿಯೋ ವೈರಲ್‌ ಆರೋಪ ಎದುರಿಸಿ, ನಟ ಬಳಿ ಕ್ಷಮೆ ಕೇಳಲು ಒದ್ದಾಡುತ್ತಿದ್ದಾರೆ. ಇನ್ನು ಚಿತ್ರರಂಗದಿಂದ ಮನು ಅವರನ್ನ ಬಹುತೇಕ ಬ್ಯಾನ್‌ ಮಾಡಿರುವ ಸ್ಥಿತಿ ಇದೆ. ಇದೀಗ ಮಡೆನೂರು ಮನುಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್‌ಬಾಸ್‌ ಖ್ಯಾತಿಯ ವರ್ತೂರು ಸಂತೋಷ್‌ ಅವರು ಮನು ವಿರುದ್ಧ ತೊಡೆತಟ್ಟಿದ್ದಾರೆ. ಇಷ್ಟಕ್ಕೂ ಮನು ಹಾಗೂ ವರ್ತೂರು ಸಂತೋಷ್‌ ನಡುವಿನ ಕಿರಿಕ್‌ ಏನು ಗೊತ್ತಾ?

ಮಡೆನೂರು ಮನು ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿನ್ನರ್‌. ತಮ್ಮ ಹಾಸ್ಯದಿಂದ ಎಲ್ಲರನ್ನೂ ನಕ್ಕು ನಲಿಸಿದ್ದರು. ಇದೇ ಹುರುಪಿನಲ್ಲಿ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಮಿಂಚಬೇಕು ಎಂಬ ಕನಸು ಕಂಡಿದ್ದರು. ಆ ಕನಸು ಕೂಡ ಈಡೇರಿದೆ. ಆದರೆ ಇದೇ ಹೊತ್ತಲ್ಲಿ ಅವರ ಮೇಲೆ ಸಾಲು ಸಾಲು ಆರೋಪಗಳು ಕೇಳಿಬಂದಿದ್ದಲ್ಲದೆ, ತನ್ನ ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲು ಸೇರಿದ್ದರು. ಕಿರುತೆರೆ ನಟಿಯೊಬ್ಬರು ಮನು ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಬಳಿಕ ಜೈಲು ಸೇರಿದ ಮೇಲೆ ಮನು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಚಲನ ಸೃಷ್ಟಿಸಿತ್ತು. ಇದರಲ್ಲಿ ಶಿವಣ್ಣ ಹಾಗೂ ದರ್ಶನ್‌ ಸಾಯ್ತಾರೆ ಎಂದೆಲ್ಲ ಹೇಳಲಾಗಿತ್ತು. ಈ ಹಿನ್ನೆಲೆ ಮನು ಅವರನ್ನ ಬ್ಯಾನ್‌ ಮಾಡುವುದಾಗಿ ಫಿಲ್ಮ್‌ ಚೇಂಬರ್‌ ಹೇಳಿತ್ತು.

Bigg Boss Fame Varthur Santosh Throws Open Challenge To Madenuru Manu Here Is Why

ಸದ್ಯ ಕೇಸ್‌ನಿಂದ ಜಾಮೀನು ಸಿಕ್ಕಿ ರಿಲೀಫ್‌ ಆಗುವ ಹೊತ್ತಿಗೆ ಮಡೆನೂರು ಮನುಗೆ ದೊಡ್ಡ ಆಘಾತವೇ ಎದುರಾಗಿದೆ. ಆ ಆಡಿಯೋ ವೈರಲ್‌ ಆಗಿರುವುದಕ್ಕೆ ಸ್ಪಷ್ಟನೆ ನೀಡುತ್ತಾ ನಟರ ಬಳಿ ಕ್ಷಮೆ ಕೇಳಲು ಮನು ತನ್ನ ಕುಟುಂಬದೊಂದಿಗೆ ಅಲೆದಾಡುತ್ತಿದ್ದಾರೆ. ಇದೀಗ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಹಾಗೂ ಹಳ್ಳಿಕಾರ್‌ ಒಡೆಯ ಖ್ಯಾತಿಯ ವರ್ತೂರು ಸಂತೋಷ್‌ ಕೂಡ ಮನು ವಿರುದ್ಧ ಗುಡುಗಿದ್ದಾರೆ. ವರ್ತೂರು ಸಂತೋಷ್‌ ಅವರು ನೋವಿನಿಂದ ಹೇಳಿದ್ದ ಮಾತುಗಳನ್ನು ಮನು ಈ ಹಿಂದೆ ಮಿಮಿಕ್ರಿ ಮಾಡಿದ್ದರು. ಇದರಿಂದ ಸಂತೋಷ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಒಬ್ಬರ ನೋವನ್ನು ಆ ರೀತಿ ಅನುಕರಣೆ ಮಾಡುವುದು ಸರಿಯೇ ಎಂದು ಮನುಗೆ ಪ್ರಶ್ನೆ ಮಾಡಿದ್ದಾರೆ.

'ಕಲೆಗೆ ಬೆಲೆ ಕೊಟ್ಟವನು ಕಲಾವಿದ. ನಾನು ಎಷ್ಟೋ ಒಳ್ಳೆಯ ಮಾತುಗಳನ್ನ ಹೇಳಿದ್ದೀನಿ, ಅದನ್ನ ಮನು ಇಮಿಟೇಟ್‌ ಮಾಡಿಲ್ಲ. ಆದರೆ ಒಬ್ಬ ವ್ಯಕ್ತಿ ದುಃಖದಲ್ಲಿ ಹೇಳಿದ ಮಾತುಗಳು ನಿನಗೆ ಅಷ್ಟೊಂದು ಜೋಕ್‌ ಅನಿಸಿತಾ? ಎಂದು ಕೇಳಿದ್ದಾರೆ. ಯಾರೇ ಆಗಲಿ ನೈತಿಕತೆ ಅನ್ನೋದು ಇರಬೇಕು. ಇಂತಹ ಅವಿವೇಕಿ ಹೀಗೆ ಮಾಡುವಾಗ ದೂರವಾದ್ರೂ ಸರಿಯಬೇಕಿತ್ತು. ನನ್ನ ಮಿಮಿಕ್ರಿ ಮಾಡಿರುವ ವಿಡಿಯೋ ನೋಡಿ ಮನಸ್ಸಿಗೆ ಬೇಜಾರಾಯ್ತು, ಅದು ಒಬ್ಬರನ್ನ ಕೆಳಗೆ ಹಾಕುವಂತಿತ್ತು' ಎಂದು ವರ್ತೂರು ಹರಿಹಾಯ್ದಿದ್ದಾರೆ.

'ನಾನು ನನ್ನ ಮನಸ್ಸಿನಿಂದ ಹೇಳಿದ ದುಃಖದ ವಿಚಾರವನ್ನು ಜನ ಈ ರೀತಿ ಹಾಸ್ಯ ಮಾಡ್ತಾರಲ್ಲ ಅಂತ ಬೇಸರವಾಯ್ತು. ಆದರೆ ಇವತ್ತು ಮನು ಗತಿ ಏನಾಯ್ತು? ಈಗ ಇದೇ ಮಾಧ್ಯಮಗಳ ಮುಂದೆ ಆವತ್ತು ಮಾತನಾಡಿದಂತೆ ಬಂದು ಮಾತನಾಡು, ನಿನಗೆ ನಾನೇ ಹಾರ ಹಾಕ್ತೀನಿ ಎಂದು ಮಡೆನೂರು ಮನುಗೆ ವರ್ತೂರು ಸಂತೋಷ್‌ ಚಾಲೆಂಜ್‌ ಹಾಕಿದ್ದಾರೆ. ಹಾಗೆಯೇ ಈ ಮೀಡಿಯಾದವರೂ ನಿನಗೆ ಮೊದಲಿನಂತೆಯೇ ಮರ್ಯಾದೆ ಕೊಟ್ರೆ ಇವರಿಗೂ ಮರ್ಯಾದೆ ಇಲ್ಲ ಎಂದರ್ಥ. ಯಾವತ್ತೇ ಆಗಲಿ ಆಡೋ ಮಾತು ಹಾಗೂ ನಡವಳಿಕೆ ಒಂದೇ ಆಗಿರಬೇಕು' ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+