Bigg Boss: ಬಿಗ್ಬಾಸ್ ಕಾರ್ಯಕ್ರಮಕ್ಕೆ ಬಿಗ್ ಶಾಕ್; ಬಿತ್ತು ₹2,00,00,000 ದಂಡ!
ಬಿಗ್ಬಾಸ್ ಕನ್ನಡ ಸೀಸನ್-12 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದು ವರ್ಷದಿಂದ ಕಾಯುತ್ತಿದ್ದ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಎಲ್ಲ ಚಿತ್ತ ಸ್ಪರ್ಧಿಗಳು ಯಾರು? ಎನ್ನುವುದರ ಮೇಲೆ ಇದೆ. ಬೇರೆ ಭಾಷೆಗಳಲ್ಲಿ ಈಗಾಗಲೇ ಬಿಗ್ಬಾಸ್ ಕಾರ್ಯಕ್ರಮ ಆರಂಭವಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಆದರೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಬಿಗ್ ಶಾಕ್ ಎದುರಾಗಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ದಂಡ ಹಾಕಲಾಗಿದೆ ಎಂದು ವರದಿಯಾಗಿದೆ. ದಂಡ ಹಾಕಲು ಕಾರಣವೇನು? ಎಂಬ ಮಾಹಿತಿ ಇಲ್ಲಿದೆ ನೋಡಿ.
ಬಿಗ್ಬಾಸ್ ಕಾರ್ಯಕ್ರಮ ನಡೆಸುವುದು ತಮಾಷೆಯ ಮಾತಲ್ಲ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ಕೋರ್ಟು ಕೇಸು ಅಂತೆಲ್ಲ ಸಂಕಷ್ಟಗಳು ಎದುರಾಗುತ್ತವೆ. ಈ ಹಿಂದೆ ಕನ್ನಡ ಬಿಗ್ಬಾಸ್ ಸ್ಪರ್ಧಿಗಳು ಕೂಡ ಕಾರ್ಯಕ್ರಮ ನಡೆಯುವಾಗಲೇ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಿದರ್ಶನಗಳೂ ಇವೆ. ಆದರೆ ಇದೀಗ ಬಿಗ್ಬಾಸ್ ಕಾರ್ಯಕ್ರಮಕ್ಕೆ ಕಾನೂನಿನ ಸಂಕಷ್ಟ ಎದುರಾಗಿದ್ದು, 2 ಕೋಟಿ ರೂಪಾಯಿ ಪರಿಹಾರ ಕೇಳಿ ಕೇಸ್ ಹಾಕಲಾಗಿದೆಯಂತೆ. ಎಷ್ಟೇ ಎಚ್ಚರ ವಹಿಸಿದರೂ ಬಿಗ್ಬಾಸ್ ಇಕ್ಕಟ್ಟಿನಲ್ಲಿ ಸಿಲುಕಿದೆ.

ಬಿಗ್ಬಾಸ್-19 ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ 2 ಕೋಟಿ ರೂಪಾಯಿ ಪರಿಹಾರ ಕೋರಿ ಮೊಕದ್ದಮೆ ಹೂಡಲಾಗಿದೆ. ಅನಧಿಕೃತವಾಗಿ ಸಂಗೀತ ಬಳಸಿದ ಆರೋಪದ ಮೇಲೆ ಈ ಕೇಸ್ ದಾಖಲಾಗಿದೆ. ಬಿಗ್ಬಾಸ್ ನಿರ್ಮಾಪಕರಿಗೆ ಹೆಚ್ಚುವರಿ ಪರವಾನಗಿ ಶುಲ್ಕದೊಂದಿಗೆ ಬರೋಬ್ಬರಿ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕಾನೂನು ನೋಟಿಸ್ ನೀಡಲಾಗಿದೆ. ಬಾಲಿವುಡ್ ನಟ ನಡೆಸಿಕೊಡುವ ಈ ಜನಪ್ರಿಯ ರಿಯಾಲಿಟಿ ಶೋನಲ್ಲಿ ಬಾಲಿವುಡ್ನ ಎರಡು ಫೇಮಸ್ ಹಾಡುಗಳನ್ನು ಅನಧಿಕೃತವಾಗಿ ಬಳಸಿದ್ದ ಆರೋಪದ ಮೇರೆಗೆ ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ (ಪಿಪಿಎಲ್) ನೋಟಿಸ್ ನೀಡಿದೆ.
ಯಾವುದು ಆ ಹಾಡುಗಳು?
ಪಿಪಿಎಲ್ ಎಂಬ ಸಂಸ್ಥೆಯು ಇತ್ತೀಚೆಗೆ ಬಿಗ್ಬಾಸ್-19 ನಿರ್ಮಾಪಕರಿಗೆ ಲೀಗಲ್ ನೋಟಿಸ್ ನೀಡಿದೆ. ಬಿಗ್ಬಾಸ್-19ರಲ್ಲಿ "ಅಗ್ನಿಪಥ್" ಚಿತ್ರದ 'ಚಿಕ್ನಿ ಚಮೇಲಿ' ಮತ್ತು 'ಗೋರಿ ತೆರೀ ಪ್ಯಾರ್ ಮೇನ್' ಚಿತ್ರದ 'ಧತ್ ತೆರೀ ಕೀ' ಎಂಬ ಎರಡು ಪ್ರಸಿದ್ಧ ಬಾಲಿವುಡ್ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಡುಗಳನ್ನು ಬಳಸುವ ಮುನ್ನ ಅಗತ್ಯವಾದ ಲೈಸೆನ್ಸ್ ಪಡೆಯಬೇಕಿತ್ತು. ಆದರೆ ಇದನ್ನ ಪಡೆದುಕೊಳ್ಳದೆ ಬಳಸಿರುವುದರಿಂದ ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಪಿಪಿಎಲ್ ಆರೋಪಿಸಿದೆ. ಅಲ್ಲದೆ ₹2 ಕೋಟಿ ಪರಿಹಾರ ಮತ್ತು ಲೈಸೆನ್ಸ್ ಫೀ ರೂಪದಲ್ಲಿ ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಬಿಗ್ಬಾಸ್ ಕಾರ್ಯಕ್ರಮದ 11ನೇ ಸಂಚಿಕೆಯಲ್ಲಿ ಅಗ್ನಿಪಥ್ ಸಿನಿಮಾದ "ಚಿಕ್ನಿ ಚಮೇಲಿ" ಮತ್ತು "ಧಾತ್ ತೇರಿ ಕಿ ಮೈ" ಹಾಡುಗಳನ್ನು ಬಳಸಿಕೊಂಡಿದ್ದಾರೆ ಎಂದು ಆರೋಪ ಹೊರಿಸಲಾಗಿದೆ. ಹಾಡುಗಳನ್ನು ಬಳಸಲು ಕಡ್ಡಾಯ ಪರವಾನಗಿಯನ್ನು ಪಡೆಯದೆ ಬಳಸಿದ್ದಾರೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ಈಗಾಗಲೇ ನೋಟಿಸ್ ತಲುಪಿದ್ದು, ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಎರಡು ಹಾಡಿನಿಂದಾಗಿ ಬಿಗ್ಬಾಸ್ಗೆ ಸಂಕಷ್ಟ ಎದುರಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications