Pratham: ಬದುಕು ಸುಂದರವಾದದ್ದು; ಅಂಧಾಭಿಮಾನಿಗಳೇ... ಎಂದು ಪೊಲೀಸರಿಗೆ ಪ್ರಥಮ್ ದೂರು
ಬೆಂಗಳೂರು, ಜೂನ್. 19: ನಟ ದರ್ಶನ್ ತೂಗುದೀಪ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ. ಆದರೆ, ಅವರ ಅಭಿಮಾನಿಗಳು ಮಾತ್ರ ತನ್ನ ಬಾಸ್ ಪರವಾಗಿ ನಿಂತಿದ್ದು, ಅವರ ವಿರುದ್ಧ ಮಾತನಾಡುವವರ ಕಿಡಿ ಕಾರುತ್ತಿದ್ದಾರೆ. ಜೊತೆಗೆ ಪ್ರಕರಣದ ಬಗ್ಗೆ ನೆಗೆಟಿವ್ ಆಗಿ ಮಾತನಾಡುವವರಿಗೆ ಬೆದರಿಕೆಯನ್ನು ಹಾಕುತ್ತಿದ್ದಾರೆ.
ನಟ ದರ್ಶನ್ ಬಂಧನದ ಬಳಿಕ ನಟನ ಅಭಿಮಾನಿಗಳಿಗೆ ಬುದ್ಧಿವಾರ ಹೇಳಿದ್ದ ಬಿಗ್ ಬಾಸ್ ಕನ್ನಡ 4 ನೇ ಸೀಸನ್ನ ವಿನ್ನರ್ ಮತ್ತು ನಟ ಪ್ರಥಮ್ ಅವರಿಗೆ ಕೆಲ ಕಿಡಿಗೇಡಿಗಳು ಬೆದರಿಕೆ ಕರೆ ಮಾಡಿದ್ದಾರೆ. ಹೀಗಾಗಿ ನಟ ಪ್ರಥಮ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿ ಬಾಸ್ ಫ್ಯಾನ್ಸ್ ವಿರುದ್ಧ ಪ್ರಥಮ್ ದೂರು
ನಟ ಪ್ರಥಮ್ ಇತ್ತೀಚೆಗೆ ವಿಡಿಯೋ ಒಂದರಲ್ಲಿ ದರ್ಶನ್ ಅಭಿಮಾನಿಗಳಿಗೆ ತಿಳಿ ಹೇಳಿದ್ದರು. ಇದಾದ ನಂತರ ದರ್ಶನ್ ಅಭಿಮಾನಿಗಳಿಂದ ಸುಮಾರು 500ಕ್ಕೂ ಅಧಿಕ ಬೆದರಿಕೆ ಹಾಕುವ ಫೋನ್ ಕರೆಗಳು ಬಂದಿದ್ದು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಟ ಪೊಲೀಸರ ಮೊರೆ ಹೋಗಿದ್ದು, ರಕ್ಷಣೆ ಕೋರಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. "ಜೀವನ ದೊಡ್ಡದು; ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ; ನೀವು ಅತೀಯಾಗಿ ನಮ್ಮ ಕರ್ನಾಟಕದ ಅಳಿಯ ತಂಡದ ಆಫೀಸ್ ನಂಬರ್ಗೆ ಬೆದರಿಕೆ ಹಾಕುತಿದ್ದೀರಾ" ಎಂದು ಬರೆದುಕೊಂಡಿದ್ದಾರೆ.
ಜೀವನ ದೊಡ್ಡದು;ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ;
— Olle Hudga Pratham (@OPratham) June 19, 2024
ನಾನು ಶಾಂತಿಯಿಂದಲೇ ಇದ್ದೆ;ನೀವು ಅತೀಯಾಗಿ ನಮ್ಮ #ಕರ್ನಾಟಕದಅಳಿಯ ತಂಡದoffice noಗೆ ಬೆದರಿಕೆ ಹಾಕುತಿದ್ದೀರಾ;
ಇನ್ಮೇಲೆ ನನಗೆ ಬರೋ ಕಾಲ್ msg,social media warningಎಲ್ಲವೂ ಪೋಲೀಸರು ನೋಡಿಕೊಳ್ತಾರೆ;
ಬದುಕು ಸುಂದರವಾದದ್ದು; #ಅಂಧಾಭಿಮಾನಿಗಳೇ,
ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ pic.twitter.com/A5KQRy8Cof
"ಇನ್ಮೇಲೆ ನನಗೆ ಬರೋ ಕಾಲ್ ಮೆಸೇಜ್, ಸೋಶಿಯಲ್ ಮಿಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು; ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ" ಎಂದು ಮತ್ತೆ ದರ್ಶನ್ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.
ಈ ಹಿಂದೆ ದರ್ಶನ್ ಪ್ರಕರಣಕ್ಕೆ ಟ್ವೀಟ್ ಮಾಡಿದ್ದ ನಟ ಪ್ರಥಮ್, "ನಾನು ಯಾರ ವಿರೋಧಿಯೂ ಅಲ್ಲ.. ನೊಂದಿರೋ ಸಹನಾ ಪರ. ದರ್ಶನ್ ತೂಗುದೀಪ್ ಸರ್ ಕೇಸ್ ತೀರ್ಪು ಬರೋಕೂ ಮುಂಚೆ ನಾನೇನು ಮಾತಾಡಲ್ಲ!. ನನಗಿರೋ ಬೇಸರ ಒಂದೇ ನಮ್ಮ ಆಫೀಸ್ ಹತ್ತಿರದ ಪೊಲೀಸ್ ಸ್ಟೇಷನ್ ಮುಂದೆ ನಿಂತು ಪಬ್ಲಿಕ್ ಓಡಾಟಕ್ಕೆ ತೊಂದರೆ ಕೊಡ್ತಿರೋ ಅಯೋಗ್ಯರಿಗೆ ಅಷ್ಟೇ ಮಂಗಳಾರತಿ ಮಾಡಿದ್ದು. ನಾನು ನೊಂದಿರೋ ಸಹನಾ ಪರ. ದಯವಿಟ್ಟು ಜನ ಅವ್ರಿಗೆ ಸಹಾಯ ಮಾಡಿ" ಎಂದು ಮನವಿ ಮಾಡಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications