ಗಿಲ್ಲಿ ನಟ ಬಿಗ್ಬಾಸ್ ಗೆಲ್ಲಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಅಭಿಯಾನ ಶುರು! Gilli Nata
ಬಿಗ್ಬಾಸ್ ಕನ್ನಡ ಸೀಸನ್ 12 ಇನ್ನೇನು ಫೈನಲ್ ಹಂತಕ್ಕೆ ಬಂದಿದ್ದು, ಬಿಗ್ಬಾಸ್ ಗೆಲ್ಲುವ ಅದೃಷ್ಟ ಯಾರಿಗಿದೆ? ಎಂಬ ಚರ್ಚೆ ಎಲ್ಲೆಲ್ಲೂ ನಡೆಯುತ್ತಿದೆ. ಅದರಲ್ಲೂ ಈ ಬಾರಿಯ ಬಿಗ್ಬಾಸ್ ಮನೆಯ ತುಂಬಾ ಬರೀ ಗಿಲ್ಲಿ.. ಗಿಲ್ಲಿ.. ಗಿಲ್ಲಿ... ಎಂಬ ಸೌಂಡ್ ಹೆಚ್ಚಾಗಿದೆ. ಹೀಗಿದ್ದಾಗ ಗಿಲ್ಲಿ ನಟ ಗೆದ್ದು, ಬಿಗ್ಬಾಸ್ ಕನ್ನಡ ಸೀಸನ್ 12 ಕಪ್ ಎತ್ತಬೇಕು ಎಂಬುದು ಕೋಟಿ ಕೋಟಿ ಅಭಿಮಾನಿಗಳ ಆಸೆಯೂ ಆಗಿದೆ. ಇಷ್ಟೆಲ್ಲದರ ನಡುವೆ ಗಿಲ್ಲಿ ನಟ ಬಿಗ್ಬಾಸ್ ಗೆಲ್ಲಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಅಭಿಯಾನ ಶುರುವಾಗಿದೆ.
ಮಂಡ್ಯ ಮೂಲದ ಗಿಲ್ಲಿ ನಟ ಆರಂಭದಲ್ಲಿ ಸೋಷಿಯಲ್ ಮೀಡಿಯಾ ಮೂಲಕ ಖ್ಯಾತಿ ಪಡೆದಿದ್ದರು, ಅವರ ಶಾರ್ಟ್ ಫಿಲ್ಮ್ ಕೋಟಿ ಕೋಟಿ ವೀಕ್ಷಣೆ ಪಡೆದು ಗಿಲ್ಲಿ ನಟನ ನಟನೆಗೆ ಕನ್ನಡಿಗರೆಲ್ಲಾ ಫಿದಾ ಆಗಿದ್ದರು. ಗಿಲ್ಲಿ ಪರವಾಗಿ ದೊಡ್ಡ ಮಟ್ಟದಲ್ಲಿ ಹವಾ ಎದ್ದಿದ್ದ ಕಾರಣಕ್ಕೆ ಹಲವು ರಿಯಾಲಿಟಿ ಶೋ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಿತ್ತು. ಹೀಗಿದ್ದಾಗ ಗಿಲ್ಲಿ ನಟ ಹೊಸ ಇತಿಹಾಸ ಬರೆಯಲು ಬಿಗ್ಬಾಸ್ ಕನ್ನಡ ಸೀಸನ್ 12 ಮನೆಗೆ ಎಂಟ್ರಿ ಕೊಟ್ಟಿದ್ದೂ ಆಗಿದೆ. ಈಗಾಗಲೇ ಗಿಲ್ಲಿ ನಟ ಗೆಲ್ಲೋದು ಗ್ಯಾರಂಟಿ ಅಂತಾ ಎಲ್ಲರೂ ಅಂತಿದ್ದಾರೆ. ಇದೇ ಸಮಯದಲ್ಲಿ ಗಿಲ್ಲಿ ಪರವಾಗಿ ವೋಟಿಂಗ್ ಅಭಿಯಾನ ಜೋರಾಗಿದೆ.

ಗಿಲ್ಲಿ ನಟ ಕಪ್ ಗೆಲ್ಲೋದು ಗ್ಯಾರಂಟಿ?
ಹೌದು, ಬಿಗ್ಬಾಸ್ ಕನ್ನಡ ಸೀಸನ್ 12 ನೋಡಿದ್ರೆ ಗಿಲ್ಲಿ ಪರವಾಗಿ ಈಗಿರುವ ಹವಾದಿಂದ ಬಹುತೇಕ ಗಿಲ್ಲಿ ನಟ ಗೆಲ್ಲುತ್ತಾರೆ ಅನ್ನೋದು ಅಭಿಮಾನಿಗಳ ಮಾತಾಗಿದೆ. ಕನ್ನಡ ನಾಡಿನ ಜನರು ಬೆಂಬಲ ಕೊಟ್ಟು, ಗಿಲ್ಲಿ ನಟ ಗೆದ್ದು ಬೀಗುವಂತೆ ಮಾಡುತ್ತಾರೆ ಎಂದು ಕಾಯುತ್ತಿದ್ದಾರೆ ಕೋಟಿ ಕೋಟಿ ಫ್ಯಾನ್ಸ್. ಇದೇ ಸಮಯದಲ್ಲಿ ಸೋಷಿಯಲ್ ಮೀಡಿಯಾ ಮೂಲಕವೂ ದೊಡ್ಡ ಮಟ್ಟದಲ್ಲಿ ಬೆಂಬಲ ಸಿಗುತ್ತಾ ಇದ್ದು, ಕೊನೆಯ ಹಂತದಲ್ಲಿ ಭಾರಿ ವೋಟಿಂಗ್ ಮಾಡಿಸಲು ಮುಂದಾಗಿದ್ದಾರೆ ಫ್ಯಾನ್ಸ್. ಈ ಸಂಬಂಧ ಈಗ ವಿಡಿಯೋಗಳು ಕೂಡ ಫುಲ್ ವೈರಲ್ ಆಗುತ್ತಿವೆ.
ಬಡವರ ಮನೆ ಹುಡುಗ ಗಿಲ್ಲಿ
ಗಿಲ್ಲಿ ನಟ ಬಡವರ ಮನೆಯ ಹುಡುಗ ಅನ್ನೋ ವಿಚಾರವು ಕೂಡ ಈ ಬಾರಿ ದೊಡ್ಡ ಸೌಂಡ್ ಮಾಡಿ, ಗಿಲ್ಲಿ ಗೆಲ್ಲಬೇಕು ಎಂಬ ಕೂಗು ಹೆಚ್ಚಾಗುತ್ತಿದೆ. ಅದರಲ್ಲೂ ಗಿಲ್ಲಿ ಪರವಾಗಿ ಬ್ಯಾನರ್ ಹಾಕುವುದು & ಆ ಮೂಲಕ ಬೆಂಬಲ ವ್ಯಕ್ತಪಡಿಸುವ ಘಟನೆಗಳು, ಹಲವು ಹಳ್ಳಿಗಳಲ್ಲಿ ವರದಿಯಾಗಿ ಈ ರೀತಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಿಗ್ಬಾಸ್ ಮನೆಯ ಸ್ಪರ್ಧಿಗಳು ಕೂಡ ಗಿಲ್ಲಿಯನ್ನೇ ಟಾರ್ಗೆಟ್ ಮಾಡಿ ಆಡುತ್ತಿದ್ದಾರೆ ಎಂಬುದು ಗಿಲ್ಲಿ ಅಭಿಮಾನಿಗಳ ವಾದ. ಈ ಮೂಲಕ, ಬಿಗ್ಬಾಸ್ ಕನ್ನಡ ಸೀಸನ್ 12 ಅಂತಿಮ ಹಂತಕ್ಕೆ ಬರುತ್ತಿರುವ ಸಮಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications