ಗಿಲ್ಲಿ ನಟ ಬಿಗ್ಬಾಸ್ ಗೆಲ್ಲಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಅಭಿಯಾನ ಶುರು! Gilli Nata
ಬಿಗ್ಬಾಸ್ ಕನ್ನಡ ಸೀಸನ್ 12 ಇನ್ನೇನು ಫೈನಲ್ ಹಂತಕ್ಕೆ ಬಂದಿದ್ದು, ಬಿಗ್ಬಾಸ್ ಗೆಲ್ಲುವ ಅದೃಷ್ಟ ಯಾರಿಗಿದೆ? ಎಂಬ ಚರ್ಚೆ ಎಲ್ಲೆಲ್ಲೂ ನಡೆಯುತ್ತಿದೆ. ಅದರಲ್ಲೂ ಈ ಬಾರಿಯ ಬಿಗ್ಬಾಸ್ ಮನೆಯ ತುಂಬಾ ಬರೀ ಗಿಲ್ಲಿ.. ಗಿಲ್ಲಿ.. ಗಿಲ್ಲಿ... ಎಂಬ ಸೌಂಡ್ ಹೆಚ್ಚಾಗಿದೆ. ಹೀಗಿದ್ದಾಗ ಗಿಲ್ಲಿ ನಟ ಗೆದ್ದು, ಬಿಗ್ಬಾಸ್ ಕನ್ನಡ ಸೀಸನ್ 12 ಕಪ್ ಎತ್ತಬೇಕು ಎಂಬುದು ಕೋಟಿ ಕೋಟಿ ಅಭಿಮಾನಿಗಳ ಆಸೆಯೂ ಆಗಿದೆ. ಇಷ್ಟೆಲ್ಲದರ ನಡುವೆ ಗಿಲ್ಲಿ ನಟ ಬಿಗ್ಬಾಸ್ ಗೆಲ್ಲಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಅಭಿಯಾನ ಶುರುವಾಗಿದೆ.
ಮಂಡ್ಯ ಮೂಲದ ಗಿಲ್ಲಿ ನಟ ಆರಂಭದಲ್ಲಿ ಸೋಷಿಯಲ್ ಮೀಡಿಯಾ ಮೂಲಕ ಖ್ಯಾತಿ ಪಡೆದಿದ್ದರು, ಅವರ ಶಾರ್ಟ್ ಫಿಲ್ಮ್ ಕೋಟಿ ಕೋಟಿ ವೀಕ್ಷಣೆ ಪಡೆದು ಗಿಲ್ಲಿ ನಟನ ನಟನೆಗೆ ಕನ್ನಡಿಗರೆಲ್ಲಾ ಫಿದಾ ಆಗಿದ್ದರು. ಗಿಲ್ಲಿ ಪರವಾಗಿ ದೊಡ್ಡ ಮಟ್ಟದಲ್ಲಿ ಹವಾ ಎದ್ದಿದ್ದ ಕಾರಣಕ್ಕೆ ಹಲವು ರಿಯಾಲಿಟಿ ಶೋ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಿತ್ತು. ಹೀಗಿದ್ದಾಗ ಗಿಲ್ಲಿ ನಟ ಹೊಸ ಇತಿಹಾಸ ಬರೆಯಲು ಬಿಗ್ಬಾಸ್ ಕನ್ನಡ ಸೀಸನ್ 12 ಮನೆಗೆ ಎಂಟ್ರಿ ಕೊಟ್ಟಿದ್ದೂ ಆಗಿದೆ. ಈಗಾಗಲೇ ಗಿಲ್ಲಿ ನಟ ಗೆಲ್ಲೋದು ಗ್ಯಾರಂಟಿ ಅಂತಾ ಎಲ್ಲರೂ ಅಂತಿದ್ದಾರೆ. ಇದೇ ಸಮಯದಲ್ಲಿ ಗಿಲ್ಲಿ ಪರವಾಗಿ ವೋಟಿಂಗ್ ಅಭಿಯಾನ ಜೋರಾಗಿದೆ.

ಗಿಲ್ಲಿ ನಟ ಕಪ್ ಗೆಲ್ಲೋದು ಗ್ಯಾರಂಟಿ?
ಹೌದು, ಬಿಗ್ಬಾಸ್ ಕನ್ನಡ ಸೀಸನ್ 12 ನೋಡಿದ್ರೆ ಗಿಲ್ಲಿ ಪರವಾಗಿ ಈಗಿರುವ ಹವಾದಿಂದ ಬಹುತೇಕ ಗಿಲ್ಲಿ ನಟ ಗೆಲ್ಲುತ್ತಾರೆ ಅನ್ನೋದು ಅಭಿಮಾನಿಗಳ ಮಾತಾಗಿದೆ. ಕನ್ನಡ ನಾಡಿನ ಜನರು ಬೆಂಬಲ ಕೊಟ್ಟು, ಗಿಲ್ಲಿ ನಟ ಗೆದ್ದು ಬೀಗುವಂತೆ ಮಾಡುತ್ತಾರೆ ಎಂದು ಕಾಯುತ್ತಿದ್ದಾರೆ ಕೋಟಿ ಕೋಟಿ ಫ್ಯಾನ್ಸ್. ಇದೇ ಸಮಯದಲ್ಲಿ ಸೋಷಿಯಲ್ ಮೀಡಿಯಾ ಮೂಲಕವೂ ದೊಡ್ಡ ಮಟ್ಟದಲ್ಲಿ ಬೆಂಬಲ ಸಿಗುತ್ತಾ ಇದ್ದು, ಕೊನೆಯ ಹಂತದಲ್ಲಿ ಭಾರಿ ವೋಟಿಂಗ್ ಮಾಡಿಸಲು ಮುಂದಾಗಿದ್ದಾರೆ ಫ್ಯಾನ್ಸ್. ಈ ಸಂಬಂಧ ಈಗ ವಿಡಿಯೋಗಳು ಕೂಡ ಫುಲ್ ವೈರಲ್ ಆಗುತ್ತಿವೆ.
ಬಡವರ ಮನೆ ಹುಡುಗ ಗಿಲ್ಲಿ
ಗಿಲ್ಲಿ ನಟ ಬಡವರ ಮನೆಯ ಹುಡುಗ ಅನ್ನೋ ವಿಚಾರವು ಕೂಡ ಈ ಬಾರಿ ದೊಡ್ಡ ಸೌಂಡ್ ಮಾಡಿ, ಗಿಲ್ಲಿ ಗೆಲ್ಲಬೇಕು ಎಂಬ ಕೂಗು ಹೆಚ್ಚಾಗುತ್ತಿದೆ. ಅದರಲ್ಲೂ ಗಿಲ್ಲಿ ಪರವಾಗಿ ಬ್ಯಾನರ್ ಹಾಕುವುದು & ಆ ಮೂಲಕ ಬೆಂಬಲ ವ್ಯಕ್ತಪಡಿಸುವ ಘಟನೆಗಳು, ಹಲವು ಹಳ್ಳಿಗಳಲ್ಲಿ ವರದಿಯಾಗಿ ಈ ರೀತಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಿಗ್ಬಾಸ್ ಮನೆಯ ಸ್ಪರ್ಧಿಗಳು ಕೂಡ ಗಿಲ್ಲಿಯನ್ನೇ ಟಾರ್ಗೆಟ್ ಮಾಡಿ ಆಡುತ್ತಿದ್ದಾರೆ ಎಂಬುದು ಗಿಲ್ಲಿ ಅಭಿಮಾನಿಗಳ ವಾದ. ಈ ಮೂಲಕ, ಬಿಗ್ಬಾಸ್ ಕನ್ನಡ ಸೀಸನ್ 12 ಅಂತಿಮ ಹಂತಕ್ಕೆ ಬರುತ್ತಿರುವ ಸಮಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications