Bigg Boss Kannada: ಬಿಗ್ ಬಾಸ್ಗೆ ಲತ್ತೆ ಮೇಲೆ ಲತ್ತೆ- ಟಿಆರ್ಪಿ ಅಸ್ತ್ರವಾಗಿದ್ದ ಹನುಮಂತನ ಸ್ಥಿತಿ ಗಂಭೀರ
ಈ ಬಾರಿ ಬಿಗ್ ಬಾಸ್ ಕನ್ನಡ ಒಳ್ಳೆಯ ಘಳಿಗೆಯಲ್ಲಿ ಆರಂಭವಾದಂತೆ ಕಾಣುತ್ತಿಲ್ಲ. ಯಾಕೆಂದರೆ ಈ ಬಾರಿಯ ಬಿಗ್ ಬಾಸ್ ಆರಂಭವಾದ ದಿನದಿಂದ ಒಂದಲ್ಲ ಒಂದು ಅವಘಡ ಸಂಭವಿಸುತ್ತಲೇ ಇದೆ. ಕಳೆದ ಎಲ್ಲಾ ಸೀಜನ್ಗಳಲ್ಲಿಯೂ ಸ್ಪರ್ಧಿಗಳು ಜಗಳ ಆಡಲು ಸಮಯ ತೆಗೆದುಕೊಂಡರೆ ಈ ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಮಿತಿ ಮೀರಿದ ವರ್ತನೆ ತೋರುತ್ತಿದ್ದಾರೆ.
ಈ ಮಿತಿ ಮೀರಿದ ವರ್ತನೆಯಿಂದಲೇ ಈ ಬಾರಿ ಬಿಗ್ ಬಾಸ್ ಕನ್ನಡ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದ ಲಾಯರ್ ಜಗದೀಶ್ ಮನೆಯಿಂದ ಹೊರ ಬಂದರು. ಇದರಿಂದ ಬಿಗ್ ಬಾಸ್ ಅಭಿಮಾನಿಗಳಿಗೆ ಅಸಮಾಧಾನವಾಗಿದ್ದು, ಶೋ ನೋಡುವವರ ಸಂಖ್ಯೆ ಕುಸಿಯುವ ಸಾಧ್ಯತೆ ಇತ್ತು. ಆದರೆ ಚಾಣಾಕ್ಷ್ಯತನ ಮೆರೆದ ಬಿಗ್ ಬಾಸ್ ತಂಡ ಹಾಡುಗಾರ ಹಳ್ಳಿ ಹುಡುಗ ಹನುಮಂತನನ್ನು ಸ್ಪರ್ಧಿಯಾಗಿ ಕರೆತಂದಿತು.

ಮುಗ್ಧತೆಗೆ ಇನ್ನೊಂದು ಹೆಸರಾಗಿರುವ ಹನುಮಂತ ಟಿಆರ್ಪಿ ಅಸ್ತ್ರ ಎನ್ನುವುದರಲ್ಲಿ ಎರಡು ಮಾತಿಲ್ಲ. ಆತನ ಮುಗ್ಧ ಮಾತು, ನಡವಳಿಕೆ ನೋಡುಗರಿಗೆ ಇಷ್ಟವಾಗುತ್ತಿತ್ತು. ಕಳೆದ ಮೂರು ದಿನಗಳಿಂದ ಪ್ರೇಕ್ಷಕರು ಹನುಮಂತನಿಗಾಗಿ ಶೋ ನೋಡುತ್ತಿದ್ದರು ಜೊತೆಗೆ ಎಂಜಾಯ್ ಮಾಡುತ್ತಿದ್ದರು. ಆದರೆ ಈಗ ಅದಕ್ಕೂ ಕಲ್ಲು ಬಿದ್ದಂತಾಗಿದೆ.
ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಜಗಳ ಕಿತ್ತಾಟ ಸಾಮಾನ್ಯವಾಗಿದೆ. ಅಂತೆ ಇಂದು ಪ್ರಸಾರಗೊಳ್ಳುತ್ತಿರುವ ಸಂಚಿಕೆಯಲ್ಲಿ ಕೂಡ ಟಾಸ್ಕ್ ವೇಳೆ ಕಿತ್ತಾಟಗಳು ಜೋರಾಗಿ ನಡೆದಿದೆ. ಆದರೆ ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದ್ದು ಎಳೆದಾಟ ಕಿತ್ತಾಟದಲ್ಲಿ ಹನುಮಂತ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾನೆ.
ಕೂಡಲೇ ಆತತನನ್ನು ಇತರ ಸ್ಪರ್ಧಿಗಳು ಉಪಚರಿಸಿ, ಚಿಕಿತ್ಸೆಗೆ ಕಳುಹಿಸಿರುವ ಪ್ರೋಮೋ ವೈರಲ್ ಆಗುತ್ತಿದೆ. ಹನುಮಂತನ ಆರೋಗ್ಯ ಸ್ಥಿತಿಯ ಸದ್ಯದ ಪರಿಸ್ಥಿತಿ ಬಗ್ಗೆ ಬಿಗ್ ಬಾಸ್ ತಂಡದಿಂದ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.












Click it and Unblock the Notifications