ಚಂದನ್-ನಿವೇದಿತಾ ಬಳಿಕ ರಾಜಾ ರಾಣಿ ಶೋಗೆ ಬಂದ ಮತ್ತೊಂದು ಜೋಡಿಗೆ ಬ್ರೇಕಪ್
ಕನ್ನಡ ಸಂಗೀತ ನಿರ್ದೇಶಕ, ನಟ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ನಂತರ ರಾಜಾ-ರಾಣಿ ಖ್ಯಾತಿಯ ಮತ್ತೊಂದು ಜೋಡಿ ದೂರ ಆಗಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ಜೋಡಿ ರಾಜಾ-ರಾಣಿ ರೀಲೋಡೆಡ್ಗೆ ಬಂದಾಗಲೇ ಇವರು ಯಾಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದರು. ಯಾಕೆಂದರೆ ಮದುವೆಯಾಗದೇ ರಾಜಾ-ರಾಣಿ ಶೋಗೆ ಬಂದ ಮೊದಲ ಜೋಡಿ ಇವರಾಗಿದ್ದರು.
ಹೌದು ಈ ಜೋಡಿ ಮತ್ಯಾರು ಅಲ್ಲ ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್. ಉದ್ಯಮಿಯಾಗಿದ್ದ ಜಯಶ್ರೀ ಆರಾಧ್ಯ ಬಿಗ್ ಬಾಸ್ ಮೂಲಕ ಮುಖ್ಯ ಭೂಮಿಕೆಗೆ ಬಂದಿದ್ದರು. ಬಳಿಕ ಕಿರುತೆರೆಯಲ್ಲಿ ಮಿಂಚುತ್ತಿದ್ದ ಜಯಶ್ರೀ ತಮ್ಮ ಬಾಯ್ಫ್ರೆಂಡ್ ಸ್ಟೀವನ್ ಅವರನ್ನು ಎಲ್ಲರಿಗೂ ಪರಿಚಯ ಮಾಡಿಕೊಟ್ಟಿದ್ದರು. ಬಳಿಕ ಇಬ್ಬರು ಒಟ್ಟಾಗಿ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

ಬಳಿಕ ಈ ಜೋಡಿ ರಾಜಾ-ರಾಣಿ ರೀಲೋಡೆಡ್ ಶೋಗೆ ಬಂದಿದ್ದು, ತಾಳಿ ಕಟ್ಟದೇ, ಮದುವೆಯಾಗದೇ ಇಬ್ಬರು ಜೊತೆಯಲ್ಲಿದ್ದೇವೆ. ನಾವಿಬ್ಬರೂ ಗಂಡ ಹೆಂಡತಿ ತರ ಬದುಕುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು. ರಾಜಾ ರಾಣಿ ಶೋನ ಫ್ಯಾಮಿಲಿ ರೌಂಡ್ನಲ್ಲಿ ಎಲ್ಲರ ಸಮ್ಮುಖದಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಶೋ ಬಳಿಕ ಶೀಘ್ರದಲ್ಲೇ ಮದುವೆಯಾಗುತ್ತೇವೆ ಎಂದು ಸಹ ಈ ಜೋಡಿ ತಿಳಿಸಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದ ಈ ಜೋಡಿ, ಜೊತೆಯಲ್ಲಿ ರೀಲ್ಸ್ ಮಾಡುತ್ತಾ ಫೋಟೋ ಶೇರ್ ಮಾಡುತ್ತಾ ಕ್ಯೂಟ್ ಕಪಲ್ ಅಂತಾ ಎನಿಸಿಕೊಂಡಿದ್ದರು. ಆದರೆ ಈ ಜೋಡಿ ಮೇಲೆ ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್ ನಡುವೆ ಬ್ರೇಕಪ್ ಆಗಿದ್ದು, ಇಬ್ಬರು ದೂರ ಆಗಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ಈ ಊಹಾಪೋಹಾಗಳಿಗೆ ಜಯಶ್ರೀ ಸೋಶಿಯಲ್ ಮೀಡಿಯಾದ ಮೂಲಕ ಕೆಲವು ಸಾಕ್ಷಿಗಳನ್ನು ನೀಡುತ್ತಿದ್ದಾರೆ. ಈ ಇಬ್ಬರು ಸದ್ಯ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದಾರೆ. ಅಲ್ಲದೇ, ಜೊತೆಗಿರುವ ಫೋಟೋಗಳನ್ನು, ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಹಾಗೂ ಇತ್ತೀಚಿಗೆ ಎಲ್ಲಿಯೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳು ಪ್ರಶ್ನಿಸುತ್ತಿದ್ದು, ಜಯಶ್ರೀ ಅಥವಾ ಸ್ಟೀವನ್ ಈ ಬಗ್ಗೆ ಅಧೀಕೃತವಾಗಿ ತಿಳಿಸಿಲ್ಲ. ಸದ್ಯ ಈ ಬಗ್ಗೆ ಈ ಜೋಡಿಯೇ ಸ್ಪಷ್ಟನೆ ನೀಡಬೇಕಿದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications