ಚಂದನ್-ನಿವೇದಿತಾ ಬಳಿಕ ರಾಜಾ ರಾಣಿ ಶೋಗೆ ಬಂದ ಮತ್ತೊಂದು ಜೋಡಿಗೆ ಬ್ರೇಕಪ್
ಕನ್ನಡ ಸಂಗೀತ ನಿರ್ದೇಶಕ, ನಟ ಚಂದನ್ ಶೆಟ್ಟಿ ಹಾಗೂ ನಟಿ ನಿವೇದಿತಾ ಗೌಡ ವಿಚ್ಛೇದನ ನಂತರ ರಾಜಾ-ರಾಣಿ ಖ್ಯಾತಿಯ ಮತ್ತೊಂದು ಜೋಡಿ ದೂರ ಆಗಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ಜೋಡಿ ರಾಜಾ-ರಾಣಿ ರೀಲೋಡೆಡ್ಗೆ ಬಂದಾಗಲೇ ಇವರು ಯಾಕೆ ಎನ್ನುವ ಪ್ರಶ್ನೆಯನ್ನು ಅನೇಕರು ಕೇಳಿದ್ದರು. ಯಾಕೆಂದರೆ ಮದುವೆಯಾಗದೇ ರಾಜಾ-ರಾಣಿ ಶೋಗೆ ಬಂದ ಮೊದಲ ಜೋಡಿ ಇವರಾಗಿದ್ದರು.
ಹೌದು ಈ ಜೋಡಿ ಮತ್ಯಾರು ಅಲ್ಲ ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್. ಉದ್ಯಮಿಯಾಗಿದ್ದ ಜಯಶ್ರೀ ಆರಾಧ್ಯ ಬಿಗ್ ಬಾಸ್ ಮೂಲಕ ಮುಖ್ಯ ಭೂಮಿಕೆಗೆ ಬಂದಿದ್ದರು. ಬಳಿಕ ಕಿರುತೆರೆಯಲ್ಲಿ ಮಿಂಚುತ್ತಿದ್ದ ಜಯಶ್ರೀ ತಮ್ಮ ಬಾಯ್ಫ್ರೆಂಡ್ ಸ್ಟೀವನ್ ಅವರನ್ನು ಎಲ್ಲರಿಗೂ ಪರಿಚಯ ಮಾಡಿಕೊಟ್ಟಿದ್ದರು. ಬಳಿಕ ಇಬ್ಬರು ಒಟ್ಟಾಗಿ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

ಬಳಿಕ ಈ ಜೋಡಿ ರಾಜಾ-ರಾಣಿ ರೀಲೋಡೆಡ್ ಶೋಗೆ ಬಂದಿದ್ದು, ತಾಳಿ ಕಟ್ಟದೇ, ಮದುವೆಯಾಗದೇ ಇಬ್ಬರು ಜೊತೆಯಲ್ಲಿದ್ದೇವೆ. ನಾವಿಬ್ಬರೂ ಗಂಡ ಹೆಂಡತಿ ತರ ಬದುಕುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು. ರಾಜಾ ರಾಣಿ ಶೋನ ಫ್ಯಾಮಿಲಿ ರೌಂಡ್ನಲ್ಲಿ ಎಲ್ಲರ ಸಮ್ಮುಖದಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಶೋ ಬಳಿಕ ಶೀಘ್ರದಲ್ಲೇ ಮದುವೆಯಾಗುತ್ತೇವೆ ಎಂದು ಸಹ ಈ ಜೋಡಿ ತಿಳಿಸಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದ ಈ ಜೋಡಿ, ಜೊತೆಯಲ್ಲಿ ರೀಲ್ಸ್ ಮಾಡುತ್ತಾ ಫೋಟೋ ಶೇರ್ ಮಾಡುತ್ತಾ ಕ್ಯೂಟ್ ಕಪಲ್ ಅಂತಾ ಎನಿಸಿಕೊಂಡಿದ್ದರು. ಆದರೆ ಈ ಜೋಡಿ ಮೇಲೆ ಅದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ಜಯಶ್ರೀ ಆರಾಧ್ಯ ಹಾಗೂ ಸ್ಟೀವನ್ ನಡುವೆ ಬ್ರೇಕಪ್ ಆಗಿದ್ದು, ಇಬ್ಬರು ದೂರ ಆಗಿರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ಈ ಊಹಾಪೋಹಾಗಳಿಗೆ ಜಯಶ್ರೀ ಸೋಶಿಯಲ್ ಮೀಡಿಯಾದ ಮೂಲಕ ಕೆಲವು ಸಾಕ್ಷಿಗಳನ್ನು ನೀಡುತ್ತಿದ್ದಾರೆ. ಈ ಇಬ್ಬರು ಸದ್ಯ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದಾರೆ. ಅಲ್ಲದೇ, ಜೊತೆಗಿರುವ ಫೋಟೋಗಳನ್ನು, ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ಹಾಗೂ ಇತ್ತೀಚಿಗೆ ಎಲ್ಲಿಯೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳು ಪ್ರಶ್ನಿಸುತ್ತಿದ್ದು, ಜಯಶ್ರೀ ಅಥವಾ ಸ್ಟೀವನ್ ಈ ಬಗ್ಗೆ ಅಧೀಕೃತವಾಗಿ ತಿಳಿಸಿಲ್ಲ. ಸದ್ಯ ಈ ಬಗ್ಗೆ ಈ ಜೋಡಿಯೇ ಸ್ಪಷ್ಟನೆ ನೀಡಬೇಕಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications