Varthur Santhosh: 2ನೇ ಮದುವೆಗೆ ರೆಡಿಯಾದ ವರ್ತೂರು ಸಂತೋಷ್: ಹುಡುಗಿ ಯಾರು?
ಬಿಗ್ ಬಾಸ್ ಕನ್ನಡ ಸೀಜನ್ 11ರ ಅಂತಿಮ ದಿನಗಳು ಹತ್ತಿರ ಬಂದರೂ ಬಿಗ್ ಬಾಸ್ ಕನ್ನಡ ಸೀಜನ್ 10ರ ಹವಾ ಮಾತ್ರ ಕಮ್ಮಿ ಆಗಿಲ್ಲ. ಬಿಗ್ ಬಾಸ್ ಸೀಜನ್ 10ರ ಸ್ಪರ್ಧಿಗಳು ಸದಾ ಸುದ್ದಿಯಲ್ಲಿ ಇರುತ್ತಾರೆ. ಈ ಪೈಕಿ ಹಳ್ಳಿಕಾರ್ ಖ್ಯಾತಿಯ ವರ್ತೂರು ಸಂತೋಷ್ ಕೂಡ ಒಬ್ಬರು. ಇದೀಗ ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ವರ್ತೂರು ಸಂತೋಷ್ ಮಾತನಾಡಿದ ವಿಡಿಯೋ ವೈರಲ್ ಆಗಿದೆ.
ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, 'ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ ಒನ್ ಸೈಡ್ ಪ್ರೀತಿ ಇತ್ತು. ಆಮೇಲೆ ಪಿಯುಸಿಯಲ್ಲಿಯೂ ಅದೇ ಇತ್ತು. ಆದರೆ ಈಗ ಜೀವನದಲ್ಲಿ ಪ್ರೀತಿ ಇದೆ. ಇಬ್ಬರೂ ಒಪ್ಪಿಕೊಂಡು ಪರಸ್ಪರ ಪ್ರೀತಿ ಇದೆ' ಎಂದರು.

'ಯಾಕೆಂದರೆ ಒಂದು ಮನುಷ್ಯ ಖಿನ್ನತೆಗೆ ಹೋದಾಗ ಅಥವಾ ಕೆಳಗೆ ಬಿದ್ದಾಗ ಒಬ್ಬರು ಜೊತೆಯಲ್ಲಿ ಬೇಕೇ ಬೇಕು. ವಯಸ್ಸಿಗೆ ಬಂದಿರುವ ಹುಡುಗ ಆಗಲಿ, ಹುಡುಗಿಯಾಗಲಿ ಖಿನ್ನತೆಗೆ ಹೋದಾಗ, ಹುಡುಗನಿಗೆ ಹುಡುಗಿ ಇದ್ದಾಗಲೇ, ಹುಡುಗಿಗೆ ಹುಡುಗ ಇದ್ದಾಗಲೇ ವಾಪಸ್ ಬರಲು ಸಾಧ್ಯ. ನಾನು ವಾಪಸ್ ಆಗಲು ಅವರೇ ಕಾರಣ. ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ನನ್ನ ತಾಯಿ ಬಿಟ್ಟರೆ ಅವರೇ ನನಗೆ ಎಲ್ಲಾ. ಆದರೆ ನಾನು ಇದನೆಲ್ಲಾ ಯಾವತ್ತೂ ಅವರಿಗೆ ಹೇಳಿಲ್ಲ. ಯಾವಾಗಲೂ ನನ್ನ ಬಗ್ಗೆನೇ ಯೋಚಿಸುತ್ತಿರುತ್ತಾರೆ. ನನ್ನ ಎರಡನೇ ಹೃದಯ ಅವರು. ಅವರ ಹತ್ತಿರ ನಾನು ಎಲ್ಲವನ್ನೂ ಹೇಳಿಕೊಳ್ಳುತ್ತೇನೆ' ಎಂದರು.
'ನೀನು ಇರಬೇಕಾಗಿರುವುದು ಇಲ್ಲಲ್ಲ ಎಂದು ನನ್ನ ಕಂಬ್ಯಾಕ್ ಮಾಡಿಸಿದವರು ಅವರು. ಆ ಕ್ಷಣದಲ್ಲಿ ಜೊತೆಗಿದ್ದವರನ್ನು ಯಾವತ್ತೂ ಮರೆಯಬಾರದು. ಆದರೆ ಈವರೆಗೂ ಇದನೆಲ್ಲಾ ನಾನು ಹೇಳಿಕೊಂಡಿಲ್ಲ. ಹೇಳಿಕೊಂಡರೆ ನಾವೇ ಎಲ್ಲೋ ಸಣ್ಣರಾಗುತ್ತೇವೆ ಎನ್ನುವ ಅಳುಕು. ಆದರೆ ನನ್ನ ಮನಸ್ಸಿನಲ್ಲಿ ಆಕೆ ಯಾವತ್ತೂ ಇರುತ್ತಾಳೆ. ನಾನು ವರ್ತೂರು ಸಂತೋಷ್ ಅಂತಾ ಆಗೋದಕ್ಕೂ ಮುನ್ನ ನನ್ನ ಬೆಂಬಲಕ್ಕೆ ಇದ್ದವರು ಅವರು' ಎಂದು ಬಹಳ ಖುಷಿಯಿಂದ ಹೇಳಿಕೊಂಡಿದ್ದಾರೆ.

'ನನ್ನ ಜೀವನದಲ್ಲಿ ಸುಮಾರು ಏರುಪೇರಾಗಿದೆ. ಅದು ಎಲ್ಲರಿಗೂ ಗೊತ್ತು. ಅದೇನು ದೊಡ್ಡ ವಿಚಾರ ಅಲ್ಲ. ಅದರ ಕಥೆ ಅಲ್ಲಿಗೆ ಮುಗಿಯಿತು. ಇವಾಗ ನನ್ನ ಜೀವನದಲ್ಲಿ ಒಬ್ಬಳು ಹುಡುಗಿ ಇರುವುದು ನೂರಕ್ಕೆ ನೂರು ಸತ್ಯ. ಇಬ್ಬರೂ ತುಂಬಾ ಚೆನ್ನಾಗಿದ್ದೇವೆ. ಪ್ರತಿ ದಿನಾ ಮಾತನಾಡುತ್ತೇನೆ. ದಿನಾ ಭೇಟಿಯಾಗುತ್ತೇನೆ. ಖುಷಿಯಾಗಿದ್ದೇವೆ 'ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಇದೇ ವೇಳೆ ನಟಿ ತನಿಷಾ ಕುಪ್ಪಂಡ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ಕೊಟ್ಟ ವರ್ತೂರು ಸಂತೋಷ್, 'ಪಾಪ ಹುಡುಗಿ ತನಿಷಾನೋ, ಇನ್ಯಾರೋ ಅಲ್ಲ. ಅಲ್ಲಿರುವುದು ಪರಿಶುದ್ಧವಾದ ಸ್ನೇಹ ಅಷ್ಟೇ. ತನಿಷಾ ಅಂತೂ ನನ್ನ ಹುಡುಗಿ ಅಲ್ಲ' ಎಂದು ಬಹಳ ನೇರವಾಗಿ ಸ್ಪಷ್ಟನೆ ಕೊಟ್ಟಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications