Varthur Santhosh: 2ನೇ ಮದುವೆಗೆ ರೆಡಿಯಾದ ವರ್ತೂರು ಸಂತೋಷ್: ಹುಡುಗಿ ಯಾರು?
ಬಿಗ್ ಬಾಸ್ ಕನ್ನಡ ಸೀಜನ್ 11ರ ಅಂತಿಮ ದಿನಗಳು ಹತ್ತಿರ ಬಂದರೂ ಬಿಗ್ ಬಾಸ್ ಕನ್ನಡ ಸೀಜನ್ 10ರ ಹವಾ ಮಾತ್ರ ಕಮ್ಮಿ ಆಗಿಲ್ಲ. ಬಿಗ್ ಬಾಸ್ ಸೀಜನ್ 10ರ ಸ್ಪರ್ಧಿಗಳು ಸದಾ ಸುದ್ದಿಯಲ್ಲಿ ಇರುತ್ತಾರೆ. ಈ ಪೈಕಿ ಹಳ್ಳಿಕಾರ್ ಖ್ಯಾತಿಯ ವರ್ತೂರು ಸಂತೋಷ್ ಕೂಡ ಒಬ್ಬರು. ಇದೀಗ ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ವರ್ತೂರು ಸಂತೋಷ್ ಮಾತನಾಡಿದ ವಿಡಿಯೋ ವೈರಲ್ ಆಗಿದೆ.
ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, 'ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ ಒನ್ ಸೈಡ್ ಪ್ರೀತಿ ಇತ್ತು. ಆಮೇಲೆ ಪಿಯುಸಿಯಲ್ಲಿಯೂ ಅದೇ ಇತ್ತು. ಆದರೆ ಈಗ ಜೀವನದಲ್ಲಿ ಪ್ರೀತಿ ಇದೆ. ಇಬ್ಬರೂ ಒಪ್ಪಿಕೊಂಡು ಪರಸ್ಪರ ಪ್ರೀತಿ ಇದೆ' ಎಂದರು.

'ಯಾಕೆಂದರೆ ಒಂದು ಮನುಷ್ಯ ಖಿನ್ನತೆಗೆ ಹೋದಾಗ ಅಥವಾ ಕೆಳಗೆ ಬಿದ್ದಾಗ ಒಬ್ಬರು ಜೊತೆಯಲ್ಲಿ ಬೇಕೇ ಬೇಕು. ವಯಸ್ಸಿಗೆ ಬಂದಿರುವ ಹುಡುಗ ಆಗಲಿ, ಹುಡುಗಿಯಾಗಲಿ ಖಿನ್ನತೆಗೆ ಹೋದಾಗ, ಹುಡುಗನಿಗೆ ಹುಡುಗಿ ಇದ್ದಾಗಲೇ, ಹುಡುಗಿಗೆ ಹುಡುಗ ಇದ್ದಾಗಲೇ ವಾಪಸ್ ಬರಲು ಸಾಧ್ಯ. ನಾನು ವಾಪಸ್ ಆಗಲು ಅವರೇ ಕಾರಣ. ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ನನ್ನ ತಾಯಿ ಬಿಟ್ಟರೆ ಅವರೇ ನನಗೆ ಎಲ್ಲಾ. ಆದರೆ ನಾನು ಇದನೆಲ್ಲಾ ಯಾವತ್ತೂ ಅವರಿಗೆ ಹೇಳಿಲ್ಲ. ಯಾವಾಗಲೂ ನನ್ನ ಬಗ್ಗೆನೇ ಯೋಚಿಸುತ್ತಿರುತ್ತಾರೆ. ನನ್ನ ಎರಡನೇ ಹೃದಯ ಅವರು. ಅವರ ಹತ್ತಿರ ನಾನು ಎಲ್ಲವನ್ನೂ ಹೇಳಿಕೊಳ್ಳುತ್ತೇನೆ' ಎಂದರು.
'ನೀನು ಇರಬೇಕಾಗಿರುವುದು ಇಲ್ಲಲ್ಲ ಎಂದು ನನ್ನ ಕಂಬ್ಯಾಕ್ ಮಾಡಿಸಿದವರು ಅವರು. ಆ ಕ್ಷಣದಲ್ಲಿ ಜೊತೆಗಿದ್ದವರನ್ನು ಯಾವತ್ತೂ ಮರೆಯಬಾರದು. ಆದರೆ ಈವರೆಗೂ ಇದನೆಲ್ಲಾ ನಾನು ಹೇಳಿಕೊಂಡಿಲ್ಲ. ಹೇಳಿಕೊಂಡರೆ ನಾವೇ ಎಲ್ಲೋ ಸಣ್ಣರಾಗುತ್ತೇವೆ ಎನ್ನುವ ಅಳುಕು. ಆದರೆ ನನ್ನ ಮನಸ್ಸಿನಲ್ಲಿ ಆಕೆ ಯಾವತ್ತೂ ಇರುತ್ತಾಳೆ. ನಾನು ವರ್ತೂರು ಸಂತೋಷ್ ಅಂತಾ ಆಗೋದಕ್ಕೂ ಮುನ್ನ ನನ್ನ ಬೆಂಬಲಕ್ಕೆ ಇದ್ದವರು ಅವರು' ಎಂದು ಬಹಳ ಖುಷಿಯಿಂದ ಹೇಳಿಕೊಂಡಿದ್ದಾರೆ.

'ನನ್ನ ಜೀವನದಲ್ಲಿ ಸುಮಾರು ಏರುಪೇರಾಗಿದೆ. ಅದು ಎಲ್ಲರಿಗೂ ಗೊತ್ತು. ಅದೇನು ದೊಡ್ಡ ವಿಚಾರ ಅಲ್ಲ. ಅದರ ಕಥೆ ಅಲ್ಲಿಗೆ ಮುಗಿಯಿತು. ಇವಾಗ ನನ್ನ ಜೀವನದಲ್ಲಿ ಒಬ್ಬಳು ಹುಡುಗಿ ಇರುವುದು ನೂರಕ್ಕೆ ನೂರು ಸತ್ಯ. ಇಬ್ಬರೂ ತುಂಬಾ ಚೆನ್ನಾಗಿದ್ದೇವೆ. ಪ್ರತಿ ದಿನಾ ಮಾತನಾಡುತ್ತೇನೆ. ದಿನಾ ಭೇಟಿಯಾಗುತ್ತೇನೆ. ಖುಷಿಯಾಗಿದ್ದೇವೆ 'ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಇದೇ ವೇಳೆ ನಟಿ ತನಿಷಾ ಕುಪ್ಪಂಡ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ಕೊಟ್ಟ ವರ್ತೂರು ಸಂತೋಷ್, 'ಪಾಪ ಹುಡುಗಿ ತನಿಷಾನೋ, ಇನ್ಯಾರೋ ಅಲ್ಲ. ಅಲ್ಲಿರುವುದು ಪರಿಶುದ್ಧವಾದ ಸ್ನೇಹ ಅಷ್ಟೇ. ತನಿಷಾ ಅಂತೂ ನನ್ನ ಹುಡುಗಿ ಅಲ್ಲ' ಎಂದು ಬಹಳ ನೇರವಾಗಿ ಸ್ಪಷ್ಟನೆ ಕೊಟ್ಟಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications