Rajath: ಮಾಜಿ ಪ್ರೇಯಸಿ ಜೊತೆಗಿನ ಬಿಗ್ ಬಾಸ್ ರಜತ್ ಫೋಟೋ ವೈರಲ್: ದೂರು ದಾಖಲು
ಬಿಗ್ ಬಾಸ್ ಕನ್ನಡ ಸೀಜನ್ 11 ಕೊನೆಯ ವಾರಕ್ಕೆ ಕಾಲಿಟ್ಟಿದೆ. ಮೂರು ತಿಂಗಳ ಪಯಣವನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್ ಬಾಸ್ ಸ್ಪರ್ಧಿಗಳು ಈಗ ಫಿನಾಲೆ ವಾರಕ್ಕೆ ಕಾಲಿಟ್ಟಿರುವ ಖುಷಿಯಲ್ಲಿದ್ದಾರೆ. ರಜತ್, ತ್ರಿವಿಕ್ರಮ್, ಉಗ್ರಂ ಮಂಜು, ಹನುಮಂತ, ಮೋಕ್ಷಿತಾ ಪೈ ಹಾಗೂ ಭವ್ಯ ಗೌಡ ಬಿಗ್ ಬಾಸ್ ಕನ್ನಡ ಸೀಜನ್ 11ರ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ.
ಈ ಎಲ್ಲಾ ಫಿನಾಲೆ ಸ್ಪರ್ಧಿಗಳ ಪೈಕಿ ರಜತ್ ಬಿಗ್ ಬಾಸ್ ಪಯಣವನ್ನು ಮೆಚ್ಚಲೇ ಬೇಕು. ಯಾಕೆಂದರೆ ಅರ್ಥ ಸೀಜನ್ ಅಂದರೆ ಐವತ್ತು ದಿನಗಳು ಕಳೆದ ಬಳಿಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ರಜತ್ ಉಳಿದ ಎಲ್ಲಾ ಸ್ಪರ್ಧಿಗಳಿಗೂ ಟಕ್ಕರ್ ಕೊಟ್ಟು ಫಿನಾಲೆ ವಾರ ತಲುಪಿದರು. ಬಿಗ್ ಬಾಸ್ ಮನೆಗೆ ಬಂದ ದಿನದಿಂದಲೂ ಅಗ್ರೇಸಿವ್ ಆಗಿ ಆಟ ಆಡುತ್ತಿದ್ದ ರಜತ್ ಆಟಗಳ ಮಧ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಪ್ರತಿಯೊಂದು ವಿಚಾರಕ್ಕೂ ಮನೆಯ ಇತರ ಸ್ಪರ್ಧಿಗಳ ಜೊತೆ ಕಿರಿಕ್ ತೆಗೆಯುತ್ತಿದ್ದರು.

ಮೊದಲಿನಿಂದಲೂ ಪ್ರತಿಯೊಬ್ಬರ ಜೊತೆಗೂ ಧ್ವನಿ ಏರಿಸೇ ಮಾತನಾಡುತ್ತಿದ್ದ ರಜತ್ ವೀಕೆಂಡ್ ಸಂಚಿಕೆಯಲ್ಲಿಯೂ ಇತರ ಸ್ಪರ್ಧಿಗಳಿಗೆ ತಮ್ಮ ಡೈಲಾಗ್ ಮೂಲಕ ಎಚ್ಚರಿಕೆ ನೀಡುತ್ತಿದ್ದರು. ಮೊದಮೊದಲು ಪ್ರೇಕ್ಷಕರ ಕೋಪಕ್ಕೆ ಕಾರಣರಾಗುತ್ತಿದ್ದ ರಜತ್ ಈಗ ಬಹುತೇಕರ ಮೆಚ್ಚಿನ ಸ್ಪರ್ಧಿಯಾಗಿದ್ದಾರೆ. ತಮಾಷೆ ಹಾಗೂ ಕೆಲವು ಸ್ಪರ್ಧಿಗಳ ಬಗ್ಗೆ ರಜತ್ ತೋರಿಸುವ ಕಾಳಜಿ, ಸರಿಯಾದ ಸಮಯದಲ್ಲಿ ವಾದ, ಟಾಸ್ಕ್ಗಳಲ್ಲಿಯೂ ಉತ್ತಮವಾಗಿ ಆಡುತ್ತಾ ರಜತ್ ಫಿನಾಲೆ ತಲುಪಿದ್ದಾರೆ.
ಅತ್ತ ಬಿಗ್ ಬಾಸ್ ಮನೆಯೊಳಗೆ ರಜತ್ ಗೆಲುವಿನ ಹೋರಾಟದಲ್ಲಿದ್ದರೆ ಇತ್ತ ಹೊರಗಡೆ ರಜತ್ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಹೀಗಾಗಿ ಅವರ ಪತ್ನಿ ಕಿರುತೆರೆಯ ರಿಯಾಲಿಟಿ ಶೋ ಸ್ಪರ್ಧಿ ಅಕ್ಷಿತಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಕಿಡಿಗೇಡಿಯೊಬ್ಬ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ಅವರ ಮಾಜಿ ಗೆಳತಿ ಜೊತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ.

ಇದೀಗ ಆ ಫೋಟೋಗಳು ಟ್ರೋಲ್ ಪೇಜ್ಗಳ ಬಾಯಿಗೆ ಆಹಾರವಾಗಿದ್ದು, ಇಬ್ಬರು ಜೊತೆಗೆ ಇರುವ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ. ಫೋಟೋ ಡಿಲೀಟ್ ಮಾಡುವಂತೆ ಮೆಸೇಜ್ ಮೂಲಕ ಮನವಿ ಮಾಡಿದ ರಜತ್ ಪತ್ನಿ ಅಕ್ಷಿತಾಗೆ ಕೆಲವು ಟ್ರೋಲ್ ಪೇಜ್ಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಫೋಟೋ ಡಿಲೀಟ್ ಮಾಡುವ ಉದ್ದೇಶದಿಂದ ಅಕ್ಷಿತಾ ಅಪರಿಚಿತ ವ್ಯಕ್ತಿ ನೀಡಿದ ಯುಪಿಐ ಐಡಿಗೆ ಸುಮಾರು 6,500 ರೂಪಾಯಿ ಹಣವನ್ನು ಹಾಕಿದ್ದಾರೆ. ಹಣ ಹಾಕಿದ ನಂತರ ಬೇರೆ ಬೇರೆ ಟ್ರೋಲ್ ಪೇಜ್ನಲ್ಲಿ ಮತ್ತೆ ಫೋಟೋ ಅಪ್ಲೋಡ್ ಮಾಡಲಾಗಿದೆ. ಮತ್ತೆ ಫೋಟೋ ಡಿಲೀಟ್ ಮಾಡಲು ಕೇಳಿದಾಗ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಟ್ರೋಲ್ ಪೇಜ್ ವಿರುದ್ಧ ಬೇಸತ್ತು ಸೈಬರ್ ಠಾಣೆ ಮೆಟ್ಟಿಲೇರಿದ ರಜತ್ ಪತ್ನಿ ಅಕ್ಷಿತಾ, ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಟ್ರೋಲ್ ಪೇಜ್ ವಿರುದ್ಧ ದೂರು ನೀಡಿದ್ದಾರೆ. ಎಫ್.ಐ.ಆರ್ ದಾಖಲಾಗುತ್ತಿದ್ದಂತೆ ಫೋಟೋ ಡಿಲೀಟ್ ಮಾಡಿರುವ ಟ್ರೋಲ್ ಪೇಜ್ಗಳು ಖಾತೆಗಳನ್ನು ಕೂಡ ಡಿಲೀಟ್ ಮಾಡಿದ್ದಾರೆ. ಸದ್ಯ ಬ್ಲ್ಯಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications