Bigg Boss Kannada: ಬಿಗ್ ಬಾಸ್ ಮನೆಯಿಂದ ಹೊರ ಬಂದ ಜಗದೀಶ್, ರಂಜಿತ್ ಎಲ್ಲಿದ್ದಾರೆ ಗೊತ್ತೇ?
ಕಳೆದ ಎರಡು ದಿನಗಳಿಂದ ಲಾಯರ್ ಜಗದೀಶ್ ಹಾಗೂ ನಟ ರಂಜಿತ್ ಬಿಗ್ ಬಾಸ್ ಮನೆಯಿಂದ ಹೊರ ಹೋಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ ಎಪಿಸೋಡ್ಗಳಲ್ಲಿ ಪ್ರಸಾರವಾಗಿರಲಿಲ್ಲ. ಇದೀಗ ಬಿಗ್ ಬಾಸ್ ಶಾಕ್ ಕೊಟ್ಟಿದ್ದು, ರಂಜಿತ್ ಹಾಗೂ ಜಗದೀಶ್ ಅವರನ್ನು ಹೊರಕ್ಕೆ ಕಳಿಸಲು ಬಿಗ್ ಬಾಸ್ ಆದೇಶ ಕೊಟ್ಟ ಪ್ರೋಮೋ ವಿಡಿಯೋ ವೈರಲ್ ಆಗುತ್ತಿದೆ.
ಜಗದೀಶ್, ಮನೆಯಲ್ಲಿ ಮಹಿಳೆಯರಿಗೆ ಆದ ಅಪಮಾನವನ್ನು ಹಾಗೂ ನಿಂದನೆಯನ್ನು ಬಿಗ್ ಬಾಸ್ ಸಹಿಸುವುದಿಲ್ಲ. ರಂಜಿತ್ ದೈಹಿಕವಾಗಿ ಹಲ್ಲೆ ಮಾಡುವುದು ಅಕ್ಷಮ್ಯ, ಹಾಗಾಗಿ ಈ ಕೂಡಲೇ ಇಬ್ಬರು ಮುಖ್ಯ ದ್ವಾರದ ಮೂಲಕ ಹೊರಗೆ ಬನ್ನಿ ಎಂದು ಬಿಗ್ ಬಾಸ್ ನೇರವಾಗಿ ಆದೇಶಿಸಿದ್ದಾರೆ. ಅಲ್ಲದೇ ನ್ಯಾಯ ಎತ್ತಿ ಹಿಡಿಯಲು ನಡೆದಿದೆ ಡಬಲ್ ಎಲಿಮಿನೇಷನ್ ಎಂದು ಪ್ರೋಮೋದಲ್ಲಿ ತಿಳಿಸಲಾಗಿದೆ.

ಬಿಗ್ ಬಾಸ್ ಇಬ್ಬರನ್ನು ಹೊರ ಹಾಕುವ ಆದೇಶ ಮಾಡುತ್ತಿದ್ದಂತೆ ಇತರ ಸ್ಪರ್ಧಿಗಳು ಶಾಕ್ ಆಗಿದ್ದು, ಇಬ್ಬರನ್ನು ಕ್ಷಮಿಸುವಂತೆ ಬಿಗ್ ಬಾಸ್ ಬಳಿ ಮನವಿ ಮಾಡಿದ್ದಾರೆ. 'ಬೇಕಂತಲೇ ಈ ತಪ್ಪು ಆಗಿಲ್ಲ. ತಿಳಿಯದೇ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ, ಇದೊಂದು ಚಾನ್ಸ್ ಕೊಡಿ, ಪ್ಲೀಸ್ ಬಿಗ್ ಬಾಸ್' ಎಂದು ಬಿಗ್ ಬಾಸ್ ಬಳಿ ಎಲ್ಲರೂ ಮನವಿ ಮಾಡಿದ್ದಾರೆ.
ಅಲ್ಲದೇ ಮನೆಯಿಂದ ಹೊರ ಹೋಗುತ್ತಿರುವ ಲಾಯರ್ ಜಗದೀಶ್ ಹಾಗೂ ನಟ ರಂಜಿತ್ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿರುವುದನ್ನು ಪ್ರೋಮೋದಲ್ಲಿ ನೋಡಬಹುದಾಗಿದೆ.
ಇನ್ನು ಮಂಗಳವಾರ ಈ ಘಟನೆ ನಡೆದಿದ್ದು, ಅಂದೇ ಲಾಯರ್ ಜಗದೀಶ್ ಹಾಗೂ ನಟ ರಂಜಿತ್ ಬಿಗ್ ಬಾಸ್ ಮನೆಯಿಂದ ಔಟ್ ಎನ್ನುವ ಸುದ್ದಿ ಹೊರಬಿದ್ದಿತ್ತು. ಆದರೆ ಇಂದಿನ ಎಪಿಸೋಡ್ನಲ್ಲಿ ಇದನ್ನು ತೋರಿಸಲಾಗುತ್ತಿದೆ. ಇನ್ನು ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ಈ ಇಬ್ಬರು ಸ್ಪರ್ಧಿಗಳು ಈವರೆಗೆ ಮನೆಗೆ ಬಂದಿಲ್ಲ ಎನ್ನಲಾಗಿದೆ.
ಹೀಗಾಗಿ ಬಿಗ್ ಬಾಸ್ನಿಂದ ಬಂದವರು ಎಲ್ಲಿ ಹೋಗಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದ್ದು, ಕೆಲವು ಮಾಹಿತಿಗಳ ಪ್ರಕಾರ ಅವರನ್ನು ಸೀಕ್ರೆಟ್ ರೂಂನಲ್ಲಿ ಇರಿಸಿ ಆಟದ ಬಗ್ಗೆ ಮತ್ತೊಮ್ಮೆ ವಿವರಿಸುವ ಪ್ರಯತ್ನವಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಮತ್ತೆ ಈ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ಗೆ ರೀ-ಎಂಟ್ರಿ ಕೊಡುವ ಸಾಧ್ಯತೆ ಕೂಡ ಹೆಚ್ಚಾಗಿದೆ. ಇನ್ನು ಲಾಯರ್ ಜಗದೀಶ್ ಈ ಶೋ ಮೂಲಕ ಈಗಾಗಲೇ ತಮ್ಮ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಮತ್ತೆ ಬಿಗ್ ಬಾಸ್ ಮನೆಯೊಳಗೆ ಕಳುಹಿಸುವಂತೆ ಆಗ್ರಹ ಜೋರಾಗಿದೆ.
-
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
ಬೆಂಗಳೂರಿನಲ್ಲಿ ಒಂದು ದಿನದ ಖರ್ಚಿಗೆ ಕೇವಲ 300 ರೂಪಾಯಿ ಇದ್ರೆ ಸಾಕು: ಉಳಿತಾಯದ ಪಾಠ ಹೇಳಿಕೊಟ್ಟ ಯುವತಿ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications