Rajath: ಬಿಗ್ಬಾಸ್ ರಜತ್ ವಿರುದ್ಧ ಮತ್ತೆರಡು ದೂರು ದಾಖಲು: ಪೊಲೀಸರಿಂದ ವಿಚಾರಣೆಗೆ ಸಿದ್ಧತೆ
ಬೆಂಗಳೂರು: ಬಿಗ್ಬಾಸ್ ಖ್ಯಾತಿಯ ರಜತ್ ಕಿಶನ್ (ಬುಜ್ಜಿ) ವಿರುದ್ಧ ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಹಾಗೂ ಡಾಗ್ ಸತೀಶ್ ಅವರಿಗೆ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ಕೆ.ಆರ್.ಪುರ ಪೊಲೀಸರಿಗೆ ದೂರು ನೀಡಿದ್ದಾರೆ. ರಜತ್ ವಿರುದ್ಧ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ರಜತ್ ಅವರಿಗೆ ನೋಟಿಸ್ ನೀಡಲು ಕೆ.ಆರ್.ಪುರಂ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಏನಿದು ಆರೋಪ?
ಬಿಗ್ಬಾಸ್ ಮಾಜಿ ಸ್ಪರ್ಧಿ 'ಡಾಗ್ ಸತೀಶ್' (ಸತೀಶ್ ಕ್ಯಾಡಬಮ್ಸ್) ಜೊತೆಗಿನ ಸ್ನೇಹವನ್ನು ಬಿಡುವಂತೆ ರಜತ್ ಅವರು ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಫೋನ್ ಮೂಲಕ ಗಿರೀಶ್ ಅವರಿಗೆ ಸಂಪರ್ಕಿಸಿದ ರಜತ್, ತೊಂದರೆ ಕೊಡುವುದಾಗಿ ಧಮ್ಕಿ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಿರೀಶ್ ಅವರ ಕಾರಿನ ಫೋಟೋವನ್ನು ಅವರಿಗೆ ಕಳುಹಿಸಿ, ಅವರ ಚಲನವಲನದ ಮೇಲೆ ಕಣ್ಣಿಟ್ಟಿರುವುದಾಗಿ ಹೇಳುವ ಮೂಲಕ ಮಾನಸಿಕವಾಗಿ ಆತಂಕ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ದೂರುದಾರ ಗಿರೀಶ್ ಕುಮಾರ್ ಅವರ ಕಾರಿನ ಫೋಟೋವನ್ನು ಅವರದ್ದೇ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ರಜತ್ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. "ಸರ್, ಇದು ರಜತ್ ಬುಜ್ಜಿ, ಕಾಲ್ ಮಾಡ್ತಿದ್ದೀನಿ ಕಾಲ್ ಬ್ಯಾಕ್ ಮಾಡ್ತೀರಾ.. ಇಲ್ಲ ನಾವೇ ಒಳಗೆ ಕಳಿಸಬೇಕಾ?" ಎಂದು ಸಂದೇಶ ಕಳುಹಿಸುವ ಮೂಲಕ ನೇರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಜತ್ ವಿರುದ್ಧ ಕೇಳಿಬಂದಿರುವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ದೂರುದಾರರು ಸಲ್ಲಿಸಿರುವ ಪ್ರಮುಖ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಪೊಲೀಸರು ಈಗಾಗಲೇ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಪ್ರಕರಣದ ಆಳ-ಅಗಲಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ದೂರುದಾರ ಗಿರೀಶ್ ಕುಮಾರ್ ಅವರು ಪೊಲೀಸರಿಗೆ ನೀಡಿರುವ ಆಡಿಯೋ ರೆಕಾರ್ಡಿಂಗ್ಗಳು, ವಾಟ್ಸಾಪ್ ಸಂದೇಶಗಳು ಮತ್ತು ಫೋಟೋಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಈ ದಾಖಲೆಗಳಲ್ಲಿರುವ ಧ್ವನಿ ಮತ್ತು ಸಂದೇಶಗಳು ರಜತ್ ಅವರದ್ದೇ ಎಂಬ ಬಗ್ಗೆ ತಾಂತ್ರಿಕ ತನಿಖೆ ನಡೆಯುತ್ತಿದೆ. ಈ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ದೂರಿನಲ್ಲಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಕೆ.ಆರ್.ಪುರ ಪೊಲೀಸರು ಶೀಘ್ರದಲ್ಲೇ ರಜತ್ ಅವರಿಗೆ ಅಧಿಕೃತ ನೋಟಿಸ್ ನೀಡಲು ನಿರ್ಧರಿಸಿದ್ದಾರೆ. ಠಾಣೆಗೆ ಹಾಜರಾಗುವಂತೆ ಸೂಚನೆ ನೀಡಿ, ಈ ಬೆದರಿಕೆಯ ಹಿಂದಿನ ಉದ್ದೇಶಗಳ ಬಗ್ಗೆ ರಜತ್ ಅವರನ್ನು ನೇರವಾಗಿ ವಿಚಾರಣೆಗೆ ಒಳಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರೆಯಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದು ನಿಜವಾಗಿಯೂ ರಜತ್ ಅವರೇನಾ ಅಥವಾ ಬೇರೆ ಯಾರಾದರೂ ಅವರ ಹೆಸರನ್ನು ಬಳಸುತ್ತಿದ್ದಾರಾ ಎಂಬ ಬಗ್ಗೆಯೂ ಪೊಲೀಸರು ವೈಜ್ಞಾನಿಕವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಡಾಗ್ ಸತೀಶ್ಗೂ ಕೊಲೆ ಬೆದರಿಕೆ
ರಜತ್ ಅವರಿಗೆ ಈ ಹಿಂದೆಯೂ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ ಸೇರಿದಂತೆ ಕೆಲವು ಕಾನೂನು ಸಂಕಷ್ಟಗಳು ಎದುರಾಗಿದ್ದವು. ಈಗ ಈ ಹೊಸ ಪ್ರಕರಣವು ಅವರಿಗೆ ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ. ಕೆ.ಆರ್. ಪುರ ಪೊಲೀಸ್ ಠಾಣೆಯಲ್ಲಿ ರಜತ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿ ಡಾಗ್ ಸತೀಶ್ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ರಜತ್ ವಿರುದ್ಧ ಮತ್ತೊಂದು ಪ್ರಕರಣ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications