Karthik Mahesh: ನಮ್ರತಾ ಗೌಡ ಜೊತೆ ಮದುವೆ ಫಿಕ್ಸ್ ಆಗಿದ್ಯಾ? ಬಿಗ್ಬಾಸ್ ವಿನ್ನರ್ ಕಾರ್ತಿಕ್ ಏನಂದ್ರು?
ಬಿಗ್ಬಾಸ್ ವಿನ್ನರ್ ಹಾಗೂ ಕಿರುತೆರೆ ನಟ ಕಾರ್ತಿಕ್ ಮಹೇಶ್ ಹಾಗೂ ಕರ್ಣ ಸೀರಿಯಕಲ್ ನಟಿ ನಮ್ರತಾ ಗೌಡ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿದೆ. ಕಾರ್ತಿಕ್ ಹಾಗೂ ನಮ್ರತಾ "ನೋಡಯ್ಯಾ ಕೋಟೆ ಲಿಂಗವೇ...." ಹಾಡಿಗೆ ಮಾಡಿದ್ದ ರೀಲ್ ಇನ್ಸ್ಟಾಗ್ರಾಂನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದಾದ ಬಳಿಕ ಇವರಿಬ್ಬರ ಮದುವೆ ಗಾಸಿಪ್ ಸದ್ದು ಮಾಡಿತ್ತು. ಇದೀಗ ನಮ್ರತಾ ಗೌಡ ಜೊತೆಗಿನ ಮದುವೆ ವಿಚಾರದ ಬಗ್ಗೆ ಖುದ್ದು ಕಾರ್ತಿಕ್ ಮಹೇಶ್ ಅವರೇ ಮೌನ ಮುರಿದಿದ್ದಾರೆ.
'ನಮ್ಮಿಬ್ಬರ ನಡುವೆ ಈ ವಿಚಾರದ ಬಗ್ಗೆ ಹಬ್ಬಿರುವ ವದಂತಿ, ಪೋಸ್ಟ್ಗಳು, ಕಾಮೆಂಟ್ ನೋಡಿದ್ರೆ ಖುಷಿಯಾಗುತ್ತೆ. ಒಬ್ಬರ ಜೊತೆ ಮಾತ್ರವಲ್ಲ, ಸುಮಾರು ಮಂದಿಯ ಜೊತೆ ಇದೇ ರೀತಿ ಕಲ್ಪಿಸಿ ಮಾತನಾಡುತ್ತಾರೆ. ಅವರನ್ನು ಖುಷಿಪಡಿಸುವುದಕ್ಕೇ ನಾವಿರೋದು. ಹಾಗಾಗಿ ಅವರೆಲ್ಲರೂ ಖುಷಿಯಾಗಿರಲಿ. ನಾನು ನಮ್ರತಾ ಕೂಡ ಇದರ ಬಗ್ಗೆ ಆಗಾಗ ಮಾತನಾಡುತ್ತಲೇ ಇರ್ತೀವಿ' ಎಂದಿದ್ದಾರೆ ಕಾರ್ತಿಕ್.

'ಖುಷಿಗೆ ಹೀಗೆಲ್ಲ ಮಾಡ್ತಾರೆ'
'ಇನ್ನು ಕಾಮೆಂಟ್ಗಳ ಬಗ್ಗೆ ನಾವೇನೂ ಮಾತನಾಡೋಕೆ ಆಗಲ್ಲ, ನನ್ನ ಕೈಯಲ್ಲಿ ಯಾವುದೇ ಬ್ಯಾಂಡ್ ಇಲ್ಲ. ಇಬ್ಬರೂ ಪ್ರೀತಿಯಲ್ಲಿದ್ದೀವಿ ಅನ್ನೋ ರೀತಿ ಏನಿಲ್ಲ. ಒಂದು ವೇಳೆ ಇದ್ದರೆ ನಾವೇ ಹೇಳ್ತೀವಿ. ಈ ಸುದ್ದಿ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಅಭಿಮಾನಿಗಳು ನಮ್ಮಿಬ್ಬರ ಬಗ್ಗೆ ಈ ರೀತಿ ಎಲ್ಲ ಮಾತನಾಡುತ್ತಿರುತ್ತಾರೆ. ಅವರ ಖುಷಿಗೆ ಇದನ್ನೆಲ್ಲ ಮಾಡುತ್ತಾರೆ. ಅವರ ನಿರೀಕ್ಷೆಯಂತೆ ಇದು ನಿಜ ಆದರೆ ಖುಷಿ ಪಡ್ತಾರೆ. ಆ ರೀತಿ ಏನೇ ಇದ್ದರೂ ನಾವೇ ಹೇಳ್ತೀವಿ' ಎಂದಿದ್ದಾರೆ.
ನಮ್ರತಾ ಗೌಡ ಹಾಗೂ ಕಾರ್ತಿಕ್ ಮಹೇಶ್ ಇಬ್ಬರೂ ಬಿಗ್ಬಾಸ್ ಸ್ಪರ್ಧಿಗಳಾಗಿ ಗಮನ ಸೆಳೆದಿದ್ದರು. ಬಿಗ್ಬಾಸ್ ಮೂಲಕವೇ ಇಬ್ಬರ ಮಧ್ಯೆ ಫ್ರೆಂಡ್ಶಿಪ್ ಬೆಳೆದಿತ್ತು. ಬಿಗ್ಬಾಸ್ನಿಂದ ಹೊರಬಂದ ನಂತರವೂ ಈ ಇಬ್ಬರ ಸ್ನೇಹ ಗಟ್ಟಿಯಾಗಿತ್ತು. ಬಿಗ್ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಆಗಿರುವ ನಟ ಕಾರ್ತಿಕ್ ಮಹೇಶ್ ಹುಟ್ಟುಹಬ್ಬಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿ ನಮ್ರತಾ ಗೌಡ ಶುಭ ಕೋರಿದ್ದರು.
ಸೋಷಿಯಲ್ ಮೀಡಿಯಾದಲ್ಲಿ ನಮ್ರತಾ ಹಂಚಿಕೊಂಡಿದ್ದ ವಿಡಿಯೋ ವೈರಲ್ ಕೂಡ ಆಗಿತ್ತು. ನಮ್ರತಾ ಹಂಚಿಕೊಂಡ ವಿಡಿಯೋದಲ್ಲಿ ಕಾರ್ತಿಕ್ ಮಹೇಶ್ ಜೊತೆಗಿದ್ದರು. 'ಹುಟ್ಟುಹಬ್ಬದ ಶುಭಾಶಯಗಳು ಸ್ಟಾರ್' ಎಂದು ನಮ್ರತಾ ಬರೆದಿದ್ದರು. ಇದಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದು, ಸದ್ಯದಲ್ಲೇ ಮದುವೆ ಆಗ್ತಾರೆ ಎಂಬ ಗುಸುಗುಸು ಶುರುವಾಗಿತ್ತು. ಈಗಾಗಲೇ ಮದುವೆ ಮಾತುಕತೆಯಾಗಿದ್ದು, ಸದ್ಯದಲ್ಲೇ ಸಿಹಿಸುದ್ದಿ ಕೊಡ್ತಾರೆ ಎಂದು ಹೇಳಲಾಗಿತ್ತು. ಈಗ ಕಾರ್ತಿಕ್ ಸ್ಪಷ್ಟನೆ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications