Akshay Kumar: ಡೆಂಗ್ಯೂ ಹೆಚ್ಚಾಗುತ್ತಿರುವ ಸಮಯದಲ್ಲಿ ಕೊರೊನಾ ಸೋಂಕಿಗೆ ಒಳಗಾದ ನಟ ಅಕ್ಷಯ್ ಕುಮಾರ್
ಮುಂಬೈ, ಜುಲೈ. 12: ದೇಶದಲ್ಲಿ ಡೆಂಗ್ಯೂ ಫೀವರ್ ಹೆಚ್ಚಾಗುತ್ತಲೆ ಇದೆ. ಮಳೆ ಹೆಚ್ಚಾಗುತ್ತಿರುವಂತೆಯೇ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಮುಖೇಶ್ ಅಂಬಾನಿ ಮಗನ ಅದ್ಧೂರಿ ಮದುವೆಗೆ ಗೈರು ಹಾಜರಾಗಲಿದ್ದಾರೆ.
ನಟ ಅಕ್ಷಯ್ ಕುಮಾರ್ ಅವರ ಚಿತ್ರ 'ಸರ್ಫಿರಾ' ಜುಲೈ 12 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ನಟ ಅಕ್ಷಯ್ ಕುಮಾರ್ ಅವರು ತಮ್ಮ ಪ್ರಾಜೆಕ್ಟ್ಗಳನ್ನು ಬ್ಯಾಕ್-ಟು-ಬ್ಯಾಕ್ ಶೂಟಿಂಗ್ ಮಾಡುತ್ತಿದ್ದು, ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭವನ್ನು ತಪ್ಪಿಸಿಕೊಳ್ಳಲಿದ್ದಾರೆ.

ಕಳೆದ ಎರಡು ದಿನಗಳಿಂದ ಅಕ್ಷಯ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ತಮ್ಮ ಇತ್ತೀಚಿನ ಬಿಡುಗಡೆಯಾದ 'ಸರ್ಫಿರಾ' ಪ್ರಚಾರಕ್ಕಾಗಿ ದೂರ ದೂರಕ್ಕೆ ಪ್ರಯಾಣಿಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
ಕೋವಿಡ್ -19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಅವರು ಕ್ವಾರಂಟೈನ್ನಲ್ಲಿದ್ದು, ವೈದ್ಯರು ಶಿಫಾರಸು ಮಾಡಿದ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ, ಜುಲೈ 12 ರಂದು ಶುಕ್ರವಾರ ಬೆಳಗ್ಗೆ ನಟ ಕೊರೊನಾ ಪಾಸಿಟಿವ್ ಆಗಿದ್ದಾರೆ. ಚಿಕಿತ್ಸೆ ಒಡೆಯುತ್ತಿದ್ದಾರೆ.

ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಮದುವೆ
ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಮೂರು ದಿನಗಳವರೆಗೆ ನಡೆಯುತ್ತದೆ. ಜುಲೈ 12 ರಂದು 'ಶುಭ ವಿವಾಹ', ಜುಲೈ 13 ರಂದು 'ಶುಭ್ ಆಶೀರ್ವಾದ್' ಮತ್ತು ಜುಲೈ 14 ರಂದು ಭವ್ಯವಾದ ಆರತಕ್ಷತೆ, ನಂತರ ಜುಲೈ 15 ರಂದು ಮತ್ತೊಂದು ಆರತಕ್ಷತೆ ಕಾರ್ಯಕ್ರಮಗಳು ನಡೆಯಲಿವೆ.
ಅಂಬಾನಿ ಕುಟುಂಬಕ್ಕೆ ಜಾನ್ ಸೆನಾ, ಮೈಕ್ ಟೈಸನ್, ಜೀನ್-ಕ್ಲಾಡ್ ವ್ಯಾನ್ ಡ್ಯಾಮ್ ಮತ್ತು ಜೇ ಶೆಟ್ಟಿ, ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಜಾನ್ ಕೆರ್ರಿ ಮತ್ತು ಸ್ಟೀಫನ್ ಹಾರ್ಪರ್ ಅವರಂತಹ ಗಣ್ಯರು ಸೇರಿದಂತೆ ಇತರ ಜಾಗತಿಕ ಸೆಲೆಬ್ರಿಟಿಗಳು ಹಾಜರಾಗಲಿದ್ದಾರೆ. ಇಡೀ ಬಾಲಿವುಡ್ ಚಿತ್ರರಂಗ ಮದುವೆಗೆ ಹಾಜರಾಗಲಿದೆ.
ಇನ್ನು, ನಟ ಅಕ್ಷಯ್ ಕುಮಾರ್ ಅವರ ಇತ್ತೀಚಿನ ಚಿತ್ರ 'ಸರ್ಫಿರಾ' ಇಂದು ಜುಲೈ 12 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದೆ. ಈ ಚಲನಚಿತ್ರವು 2020 ರ ತಮಿಳು ಚಲನಚಿತ್ರ 'ಸೂರರೈ ಪೊಟ್ರು' ನ ಅಧಿಕೃತ ರಿಮೇಕ್ ಆಗಿದೆ. ಸುಧಾ ಕೊಂಗರ ನಿರ್ದೇಶಿಸಿದ ಈ ಚಿತ್ರದಲ್ಲಿ ಪರೇಶ್ ರಾವಲ್, ರಾಧಿಕಾ ಮದನ್ ಮತ್ತು ಸೂರ್ಯ ಅವರ ಅತಿಥಿ ಪಾತ್ರವಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications