Dharmendra Passes Away: ಹಿರಿಯ ನಟ ಧರ್ಮೇಂದ್ರ ನಿಧನ, ಭಾರತ ಚಿತ್ರರಂಗದ ಒಂದು ಯುಗಾಂತ್ಯ
ಬಾಲಿವುಡ್ನ ಹೀ-ಮ್ಯಾನ್ ಎಂದೇ ಪ್ರೀತಿಯಿಂದ ಕರೆಯಲ್ಪಡುವ ಲೆಜೆಂಡ್ ನಟ ಧರ್ಮೇಂದ್ರ ಅವರು ನಿಧರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಉಸಿರಾಟದ ತೊಂದರೆಯಿಂದಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು. ಇವರು ಬಾಲಿವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟ ಎಂದು ಕರೆಸಿಕೊಂಡಿದ್ದರು. ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ತಮ್ಮ ಸುದೀರ್ಘ ಸಿನಿಮೀಯ ವೃತ್ತಿಜೀವನದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಐಎಎನ್ಎಸ್ ಪ್ರಕಾರ, ಬಾಲಿವುಡ್ ಐಕಾನ್ ಧರ್ಮೇಂದ್ರ ಇಂದು ನಿಧನರಾದರು. ಹೇಮಾ ಮಾಲಿನಿ ಅವರು ತಮ್ಮ ಪತಿ ಧರ್ಮೇಂದ್ರ ಅವರಿಗೆ ಅಂತಿಮ ವಿದಾಯ ಹೇಳಲು ವಿಲೇ ಪಾರ್ಲೆ ವೆಸ್ಟ್ನಲ್ಲಿರುವ ಪವನ್ ಹನ್ಸ್ ಸ್ಮಶಾನಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ. ಧರ್ಮೇಂದ್ರ ಅವರ ಅಂತಿಮ ವಿಧಿವಿಧಾನಗಳಿಗೆ ಕುಟುಂಬ ಸಿದ್ಧತೆ ನಡೆಸುತ್ತಿದ್ದು, ಅವರ ಮಗಳು ಇಶಾ ಡಿಯೋಲ್ ಕೂಡ ಸ್ಮಶಾನ ತಲುಪುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಅಂತ್ಯಕ್ರಿಯೆ ಪವನ್ ಹನ್ಸ್ ಸ್ಮಶಾನದಲ್ಲಿ ನಡೆಯಲಿದೆ.

ಶೋಲೆ, ಚುಪ್ಕೆ ಚುಪ್ಕೆ ಮತ್ತು ಫೂಲ್ ಔರ್ ಪತ್ತರ್ ನಂತಹ ಚಿತ್ರಗಳಲ್ಲಿ ನಟಿಸಿದ್ದ ಧರ್ಮೇಂದ್ರ ಅವರು ಮೋಡಿ ಮಾಡಿದ್ದರು. ಅವರ ಮೋಡಿ, ಅಭಿನಯದಿಂದ ಚಲನಚಿತ್ರ ಪ್ರೇಮಿಗಳ ಪೀಳಿಗೆಯನ್ನು ರೂಪಿಸಿದ್ದರು. ಇವರನ್ನು ಬಾಲಿವುಡ್ನ ದಂತಕಥೆ ಎಂದು ಕರೆಯಲಾಗುತ್ತಿತ್ತು. ಧರ್ಮೇಂದ್ರ ಅವರ ನಿಧನಕ್ಕೆ ಬಾಲಿವುಡ್ ತಾರೆಯರು ಕಂಬನಿ ಮಿಡಿದಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ಆಸ್ಪತ್ರೆಗೆ ಧರ್ಮೇಂದ್ರ ದಾಖಲಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನವೆಂಬರ್ 10ರಂದು ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು. ನಂತರ ವೆಂಟಿಲೇಟರ್ನಲ್ಲಿ ಇರಿಸಲಾಯಿತು. ಆಗಲೇ ಅವರು ನಿಧನರಾಗಿದ್ದಾರೆ ಎಂಬ ವದಂತಿಗಳು ಸಹ ಹಬ್ಬಿದ್ದವು. ಆದರೆ ಅವರ ಕುಟುಂಬವು ಅವುಗಳನ್ನು ನಿರಾಕರಿಸಿತ್ತು. ಧರ್ಮೇಂದ್ರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿಯೇ ಚೇತರಿಸಿಕೊಳ್ಳಲಿದ್ದಾರೆ ಎಂದು ಅವರ ಕುಟುಂಬಸ್ಥರು ಹೇಳಿದ್ದರು.

ಧರ್ಮೇಂದ್ರ ಅವರ ಪತ್ನಿ ನಟಿ ಹೇಮಾ ಮಾಲಿನಿ, ಪ್ರಕಾಶ್ ಕೌರ್, ಮಕ್ಕಳಾದ ನಟರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ. ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎನ್ನಲಾಗಿದೆ.
ಕರಣ್ ಜೋಹರ್ ಸಂತಾಪ
ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಕೂಡ ಇನ್ಸ್ಟಾಗ್ರಾಂ ಪೋಸ್ಟ್ ಹಂಚಿಕೊಂಡು ಧರ್ಮೇಂದ್ರ ಅವರ ನಿಧನದ ಸುದ್ದಿ ಖಚಿತಪಡಿಸಿದ್ದಾರೆ. "ಇದು ಒಂದು ಯುಗದ ಅಂತ್ಯ, ಒಬ್ಬ ದೊಡ್ಡ ಮೆಗಾ ಸ್ಟಾರ್, ಮುಖ್ಯವಾಹಿನಿಯ ಸಿನಿಮಾದಲ್ಲಿ ಒಬ್ಬ ನಾಯಕನ ಸಾಕಾರ. ನಂಬಲಾಗದಷ್ಟು ಸುಂದರ ಮತ್ತು ಅತ್ಯಂತ ನಿಗೂಢ ಪರದೆಯ ಉಪಸ್ಥಿತಿ. ಅವರು ಭಾರತೀಯ ಸಿನಿಮಾದ ನಿಜವಾದ ದಂತಕಥೆಯಾಗಿದ್ದಾರೆ ಮತ್ತು ಯಾವಾಗಲೂ ಇರುತ್ತಾರೆ ಎಂದು ಸಂತಾಪ ಸೂಚಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications