ಸೈಫ್ ಅಲಿ ಖಾನ್ ಕೇಸ್ಗೆ ಬಿಗ್ ಟ್ವಿಸ್ಟ್: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಎಸ್ಕೇಪ್
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕುವಿನಿಂದ ದಾಳಿ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಆರೋಪಿ ಬಂಧನವಾಗದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹಾಗಾದರೆ ಈ ಹಿಂದೆ ಸೆರೆ ಸಿಕ್ಕ ಆರೋಪಿ ಯಾರು? ಪೊಲೀಸರು ಬಂಧಿಸಿದ್ದು ಯಾರನ್ನು? ಈ ಪ್ರಕರಣದ ಆರೋಪಿ ತಪ್ಪಿಸಿಕೊಂಡಿದ್ದೇಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ಓದಿ.
ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಮೇಲೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ಮಾಡಿರುವ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು. ಶ್ರೀಮಂತ ನಟ ಸೈಫ್ ಅಲಿ ಖಾನ್ ಮನೆಗೆ ಕನ್ನ ಹಾಕಲು ಸಂಚು ರೂಪಿಸಿದ್ದ ಕಿಡಿಗೇಡಿ ಜನವರಿ 16 ಗುರುವಾರ ಮುಂಜಾನೆ ನಟನ ಮನೆಗೆ ನುಗ್ಗಿದ್ದಾನೆ. ಈ ವೇಳೆ ನಡೆದ ಅವಘಡದಲ್ಲಿ ನಟ ಸೈಫ್ ಅಲಿ ಖಾನ್ ಗಾಯಗೊಂಡಿದ್ದು, ಆರೋಪಿ ಚಾಕುವಿನಿಂದ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಅತ್ತ ಗಾಯಗೊಂಡ ನಟ ಸೈಫ್ ಅಲಿ ಖಾನ್ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದರೆ. ಇತ್ತ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಘಟನೆ ನಡೆದ 30 ಗಂಟೆಗಳ ಬಳಿಕ ಮುಂಬೈನ ಬಾಂದ್ರಾ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಈತನೇ ಸೈಫ್ ಅಲಿ ಖಾನ್ಗೆ ಚಾಕು ಇರಿದ ಆರೋಪಿ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ವಿಚಾರಣೆ ನಂತರ ಅಸಲಿ ವಿಚಾರ ಬೆಳಕಿಗೆ ಬಂದಿದ್ದು, ಪೊಲೀಸರು ಬಂಧಿಸಿದ ಶಂಕಿತ ಆರೋಪಿಗೂ ಪ್ರಕರಣಕ್ಕೂ ಸಂಬಂಧವಿಲ್ಲ ಎನ್ನುವುದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ಬಾಂದ್ರಾ ಪೊಲೀಸರೇ ಸ್ಪಷ್ಟನೆ ನೀಡಿದ್ದು, 'ನಟ ಸೈಫ್ ಅಲಿ ಖಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಈ ಹಿಂದೆ ಬಂಧಿಸಿದ ಆರೋಪಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ' ಎಂದು ಹೇಳಿದ್ದಾರೆ. ಅಲ್ಲದೇ ಇಪ್ಪತ್ತು ಜನರ ವಿಶೇಷ ತಂಡ ರಚಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಅಸಲಿ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದಾನೆ.

ಇದೀಗ ನಟ ಸೈಫ್ ಅಲಿ ಖಾನ್ ಪ್ರಕರಣದ ಆರೋಪಿ ನಗರದ ಮತ್ತೊಂದು ಸಿಟಿ ಟಿವಿಯಲ್ಲಿ ಸೆರೆ ಸಿಕ್ಕಿದ್ದಾನೆ. ಬಾಂದ್ರಾ ಪೊಲೀಸರು ನಗರದ ಎಲ್ಲಾ ಸಿಸಿ ಟಿವಿಗಳನ್ನು ಪರಿಶೀಲಿಸುವಾಗ ಲಕ್ಕಿ ಜಂಕ್ಷನ್ ಬಳಿಯ ಸಿಸಿ ಟಿವಿಯಲ್ಲಿ ಈತ ಸೆರೆಯಾಗಿದ್ದಾನೆ. ನಟನ ಮನೆಯಲ್ಲಿ ದಾಳಿ ನಡೆಸಿದ ಬಳಿಕ ಆರೋಪಿ ಬಟ್ಟೆ ಬದಲಾಯಿಸಿದ್ದು, ನೀಲಿ ಬಣ್ಣದ ಅರ್ಧ ತೋಳಿನ ಶರ್ಟ್ ಧರಿಸಿ ತೆರೆಳುತ್ತಿರುವ ದೃಶ್ಯ ಸೆರೆಯಾಗಿದೆ. ಕೂಡಲೇ ಪೊಲೀಸರು ಆರೋಪಿ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದು, ಸಮೀಪದ ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲಾ ಸಿಸಿ ಟಿವಿಗಳ ದೃಶ್ಯವನ್ನು ಪರಿಶೀಲಿಸುತ್ತಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications