Salman Khan: ಸಲ್ಮಾನ್ ಖಾನ್ಗೆ ಮತ್ತೊಮ್ಮೆ ಕೊಲೆ ಬೆದರಿಕೆ: 'ಒಂದು ತಿಂಗಳಲ್ಲಿ ಖೇಲ್ ಖತಂ'
ಮುಂಬೈ ಏಪ್ರಿಲ್ 15: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಸಂದೇಶಗಳು ಬರುವುದು ನಿಲ್ಲುತ್ತಲೇ ಇಲ್ಲ. ಅವರಿಗೆ ಸೋಮವಾರ (ಏಪ್ರಿಲ್ 14) ಮತ್ತೊಂದು ಕೊಲೆ ಬೆದರಿಕೆ ಬಂದಿದೆ. ಈ ಬಾರಿ ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶ ಕಳುಹಿಸಲಾಗಿದೆ. ಬೆದರಿಕೆ ಸಂದೇಶದಲ್ಲಿ ಆರೋಪಿಯು ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗಳ ಮನೆಗೆ ನುಗ್ಗಿ ಅವರ ಕಾರನ್ನು ಬಾಂಬ್ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ಎಚ್ಚರಿಸಿದ್ದಾನೆ.
ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಕೂಡ ಶುರುವಾಗಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ಗೇ ಯಾಕೆ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತವೆ ಎನ್ನುವುದಕ್ಕೆ ಮುಖ್ಯ ಕಾರಣ ಇದೆ.

1998ರಲ್ಲಿ ಕೃಷ್ಣಮೃಗ ಮೇಲೆ ಗುಂಡಿನ ದಾಳಿ ಮಾಡಿದ ಪ್ರಕರಣದಲ್ಲಿ ಟ ಸಲ್ಮಾನ್ ಖಾನ್ ಶಿಕ್ಷೆಗೊಳಗಾದರು. ಈ ಘಟನೆಯ ಬಳಿಕೆ ನಟನಿಗೆ ಅನೇಕ ಕೊಲೆ ಬೆದರಿಕೆಗಳು ಬಂದಿವೆ. ಬಿಷ್ಣೋಯ್ ಸಮುದಾಯವು ಕೃಷ್ಣಮೃಗಗಳನ್ನು ಪವಿತ್ರವೆಂದು ಪರಿಗಣಿಸುವುದರಿಂದ ಈ ದ್ವೇಷವು ಕೃಷ್ಣಮೃಗ ಗುಂಡಿನ ದಾಳಿ ಪ್ರಕರಣದಿಂದ ಹುಟ್ಟಿಕೊಂಡಿದೆ.
ಕಳೆದ ವರ್ಷ ಏಪ್ರಿಲ್ 14 ರಂದು ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಫೇಸ್ಬುಕ್ ಪೋಸ್ಟ್ನಲ್ಲಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಅಲ್ಲದೆ ಮಹಾರಾಷ್ಟ್ರ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಗೆ ತಾವೇ ಕಾರಣ ಎಂದು ಹೇಳಿಕೊಂಡಿತ್ತು.

ಜೈಲಿನಲ್ಲಿರುವ ಈ ಗ್ಯಾಂಗ್ಸ್ಟರ್ ನಟನೊಂದಿಗೆ ದೀರ್ಘಕಾಲದ ದ್ವೇಷವನ್ನು ಹೊಂದಿದ್ದು, ಈ ಹಿಂದೆ ಸಲ್ಮಾನ್ ಖಾನ್ಗೆ ಆತ ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಬಾಲಿವುಡ್ ತಾರೆಯನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ 18 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕಳೆದ ವರ್ಷ ನವೆಂಬರ್ನಲ್ಲಿ ಸಲ್ಮಾನ್ ಖಾನ್ ಅವರ ಹೆಸರನ್ನು ಬಿಷ್ಣೋಯ್ಗೆ ಜೋಡಿಸುವ ಹಾಡಿನ ಕುರಿತು ಕೊಲೆ ಬೆದರಿಕೆ ಬಂದಿತ್ತು. ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಬಂದಿತ್ತು. ಹೀಗಾಗಿ ನಟನ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಗೀತರಚನೆಕಾರ ಒಂದು ತಿಂಗಳೊಳಗೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಸಲ್ಮಾನ್ ಖಾನ್ ಧೈರ್ಯವಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ ಎಂದು ಹಾಡಲಾಗಿದೆ.
ಹೀಗಾಗಿ ಸಲ್ಮಾನ್ ಖಾನ್ ಸುತ್ತ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವರ ಮನೆ ಮೇಲೆ ಗುಂಡಿನ ದಾಳಿಯ ನಂತರ ಸಲ್ಮಾನ್ ಅವರಿಗೆ Y+ ಭದ್ರತೆ ನೀಡಲಾಗಿದೆ. ಅಲ್ಲದೆ ನಟನ ಮನೆಯ ಸುತ್ತ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಮೂಲಗಳ ಪ್ರಕಾರ, ನಟನ ಮನೆಯ ಕಿಟಕಿಗಳು ಈಗ ಗುಂಡು ನಿರೋಧಕವಾಗಿವೆ. ಸುತ್ತಮುತ್ತಲಿನ ಯಾವುದೇ ನಿಗೂಢ ಚಟುವಟಿಕೆಗಳನ್ನು ಪತ್ತೆಹಚ್ಚಲು ಅವರ ಮನೆಯಲ್ಲಿ ಹೈಟೆಕ್ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಹೈ-ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾವನ್ನು ಸಹ ಅಳವಡಿಸಲಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications