Salman Khan: ಸಲ್ಮಾನ್ ಖಾನ್ಗೆ ಮತ್ತೊಮ್ಮೆ ಕೊಲೆ ಬೆದರಿಕೆ: 'ಒಂದು ತಿಂಗಳಲ್ಲಿ ಖೇಲ್ ಖತಂ'
ಮುಂಬೈ ಏಪ್ರಿಲ್ 15: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಸಂದೇಶಗಳು ಬರುವುದು ನಿಲ್ಲುತ್ತಲೇ ಇಲ್ಲ. ಅವರಿಗೆ ಸೋಮವಾರ (ಏಪ್ರಿಲ್ 14) ಮತ್ತೊಂದು ಕೊಲೆ ಬೆದರಿಕೆ ಬಂದಿದೆ. ಈ ಬಾರಿ ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶ ಕಳುಹಿಸಲಾಗಿದೆ. ಬೆದರಿಕೆ ಸಂದೇಶದಲ್ಲಿ ಆರೋಪಿಯು ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗಳ ಮನೆಗೆ ನುಗ್ಗಿ ಅವರ ಕಾರನ್ನು ಬಾಂಬ್ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ಎಚ್ಚರಿಸಿದ್ದಾನೆ.
ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಕೂಡ ಶುರುವಾಗಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ಗೇ ಯಾಕೆ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತವೆ ಎನ್ನುವುದಕ್ಕೆ ಮುಖ್ಯ ಕಾರಣ ಇದೆ.

1998ರಲ್ಲಿ ಕೃಷ್ಣಮೃಗ ಮೇಲೆ ಗುಂಡಿನ ದಾಳಿ ಮಾಡಿದ ಪ್ರಕರಣದಲ್ಲಿ ಟ ಸಲ್ಮಾನ್ ಖಾನ್ ಶಿಕ್ಷೆಗೊಳಗಾದರು. ಈ ಘಟನೆಯ ಬಳಿಕೆ ನಟನಿಗೆ ಅನೇಕ ಕೊಲೆ ಬೆದರಿಕೆಗಳು ಬಂದಿವೆ. ಬಿಷ್ಣೋಯ್ ಸಮುದಾಯವು ಕೃಷ್ಣಮೃಗಗಳನ್ನು ಪವಿತ್ರವೆಂದು ಪರಿಗಣಿಸುವುದರಿಂದ ಈ ದ್ವೇಷವು ಕೃಷ್ಣಮೃಗ ಗುಂಡಿನ ದಾಳಿ ಪ್ರಕರಣದಿಂದ ಹುಟ್ಟಿಕೊಂಡಿದೆ.
ಕಳೆದ ವರ್ಷ ಏಪ್ರಿಲ್ 14 ರಂದು ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಫೇಸ್ಬುಕ್ ಪೋಸ್ಟ್ನಲ್ಲಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಅಲ್ಲದೆ ಮಹಾರಾಷ್ಟ್ರ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಗೆ ತಾವೇ ಕಾರಣ ಎಂದು ಹೇಳಿಕೊಂಡಿತ್ತು.

ಜೈಲಿನಲ್ಲಿರುವ ಈ ಗ್ಯಾಂಗ್ಸ್ಟರ್ ನಟನೊಂದಿಗೆ ದೀರ್ಘಕಾಲದ ದ್ವೇಷವನ್ನು ಹೊಂದಿದ್ದು, ಈ ಹಿಂದೆ ಸಲ್ಮಾನ್ ಖಾನ್ಗೆ ಆತ ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಬಾಲಿವುಡ್ ತಾರೆಯನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ 18 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕಳೆದ ವರ್ಷ ನವೆಂಬರ್ನಲ್ಲಿ ಸಲ್ಮಾನ್ ಖಾನ್ ಅವರ ಹೆಸರನ್ನು ಬಿಷ್ಣೋಯ್ಗೆ ಜೋಡಿಸುವ ಹಾಡಿನ ಕುರಿತು ಕೊಲೆ ಬೆದರಿಕೆ ಬಂದಿತ್ತು. ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಬಂದಿತ್ತು. ಹೀಗಾಗಿ ನಟನ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಗೀತರಚನೆಕಾರ ಒಂದು ತಿಂಗಳೊಳಗೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಸಲ್ಮಾನ್ ಖಾನ್ ಧೈರ್ಯವಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ ಎಂದು ಹಾಡಲಾಗಿದೆ.
ಹೀಗಾಗಿ ಸಲ್ಮಾನ್ ಖಾನ್ ಸುತ್ತ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವರ ಮನೆ ಮೇಲೆ ಗುಂಡಿನ ದಾಳಿಯ ನಂತರ ಸಲ್ಮಾನ್ ಅವರಿಗೆ Y+ ಭದ್ರತೆ ನೀಡಲಾಗಿದೆ. ಅಲ್ಲದೆ ನಟನ ಮನೆಯ ಸುತ್ತ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಮೂಲಗಳ ಪ್ರಕಾರ, ನಟನ ಮನೆಯ ಕಿಟಕಿಗಳು ಈಗ ಗುಂಡು ನಿರೋಧಕವಾಗಿವೆ. ಸುತ್ತಮುತ್ತಲಿನ ಯಾವುದೇ ನಿಗೂಢ ಚಟುವಟಿಕೆಗಳನ್ನು ಪತ್ತೆಹಚ್ಚಲು ಅವರ ಮನೆಯಲ್ಲಿ ಹೈಟೆಕ್ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಹೈ-ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾವನ್ನು ಸಹ ಅಳವಡಿಸಲಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications