Priyanka Chopra: ಗಂಡ, ಮಗಳೊಂದಿಗೆ ರಾಮನ ದರ್ಶನ ಪಡೆದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ
ಅಯೋಧ್ಯೆ, ಮಾರ್ಚ್ 20: ಇತ್ತೀಚೆಗೆ ದುಬೈನಲ್ಲಿ ರಜೆಯ ದಿನಗಳನ್ನು ಆನಂದಿಸುತ್ತಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ತಮ್ಮ ಪತಿ ನಿಕ್ ಜೋನಾಸ್ ಮತ್ತು ಮಗಳು ಮಾಲ್ತಿ ಮೇರಿ ಅವರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಬಾಲ ರಾಮನ ದರ್ಶನಕ್ಕೆ ಬಂದ
ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದ ನಟಿ ಪ್ರಿಯಾಂಕಾ ಚೋಪ್ರಾ ಅವರ ಕುಟುಂಬದ ವೀಡಿಯೊವನ್ನು ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಸ್ಟಾರ್ ದಂಪತಿ ಭಾರತೀಯ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದು. ಹಳದಿ ಸೀರೆಯಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಪಕ್ಕಾ ದೇಸಿ ಗರ್ಲ್ ರೀತಿ ಕಾಣಿಸಿಕೊಂಡಿದ್ದಾರೆ. ಮೂವರನ್ನು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಭದ್ರತೆಯಿಂದ ಕಾರಿಗೆ ಕರೆದೊಯ್ಯಲಾಯಿತು.

ಜನವರಿ 22, 2024 ರಂದು ರಾಮಮಂದಿರ ಉದ್ಘಾಟನೆಯಾದಾಗ ನಟಿ ಪ್ರಿಯಾಂಕಾ ಚೋಪ್ರಾ ಭಾರತದಲ್ಲಿರಲಿಲ್ಲ. ಸದ್ಯ ಭಾರತಕ್ಕೆ ವಾಪಸ್ ಆಗಿದ್ದು, ತನ್ನ ಗಂಡ ನಿಕ್ ಜೋನಾಸ್ ಮತ್ತು ಮಗಳು ಮಾಲ್ತಿ ಮೇರಿ ಜೋನಸ್ ಜೊತೆಗೆ ಅಯೋಧ್ಯೆಗೆ ಭೇಟಿ ನೀಡಿ ಬಾಲ ರಾಮನ ದರ್ಶನ ಪಡೆದಿದ್ದಾರೆ.
ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಹಳದಿ ಸೀರೆಯಲ್ಲಿ ಮುದ್ದಾಗಿ ಕಾಣುತ್ತಿದ್ದರು. ಮಾಲ್ತಿ ಸ್ಲೀವ್ಲೇಸ್ ಗುಲಾಬಿ ಬಣ್ಣದ ಬಟ್ಟೆಯಲ್ಲಿ ಮುದ್ದಾಗಿ ಕಾಣುತ್ತಿದ್ದರು. ನಿಕ್ ಜೋನಾಸ್ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಪ್ರಿಂಟೆಡ್ ಕುರ್ತಾ ಧರಿಸಿದ್ದರು. ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಮತ್ತು ಮಾಲ್ತಿ ರಾಮ್ ಲಲ್ಲಾ ಅವರ ಆಶೀರ್ವಾದ ಪಡೆಯುತ್ತಿರುವ ಹಲವಾರು ಫೋಟೋಗಳನ್ನು ದೇವಾಲಯದ ಅರ್ಚಕ ಪ್ರದೀಪ್ ದಾಸ್ ಅವರು ಪೋಸ್ಟ್ ಮಾಡಿದ್ದಾರೆ.
ರಾಮಮಂದಿರ ಉದ್ಘಾಟನೆ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಾಲಿವುಡ್ ತಾರೆಯರಾದ ಅಮಿತಾಭ್ ಬಚ್ಚನ್, ಆಯುಷ್ಮಾನ್ ಖುರಾನಾ, ಕಂಗನಾ ರನೌತ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಣಬೀರ್ ಕಪೂರ್, ಆಲಿಯಾ ಭಟ್, ಮಾಧುರಿ ದೀಕ್ಷಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇನ್ನು, ನಟಿ ಪ್ರಿಯಾಂಕಾ ಚೋಪ್ರಾ ಮಾರ್ಚ್ 15 ರಂದು ಮಗಳೂ ಮಾಲ್ತಿಯೊಂದಿಗೆ ಮುಂಬೈಗೆ ಬಂದಿದ್ದರು. ಅವರು ಮೊದಲು ಬಲ್ಗರಿ ಈವೆಂಟ್ಗೆ ಹಾಜರಾಗಿದ್ದರು, ನಂತರ ಪ್ರೈಮ್ ವಿಡಿಯೋ ಬಿಡುಗಡೆಗಳಲ್ಲಿ ಭಾಗವಾಗಿದ್ದರು. ವರದಿಯ ಪ್ರಕಾರ, ನಟಿ ಹೋಳಿ ತಹಬ್ಬ ಮುಗಿಯುವವರೆಗೂ ಭಾರತದಲ್ಲಿರುತ್ತಾರೆ. ಜನವರಿಯಲ್ಲಿ, ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ತಮ್ಮ ಮಗಳ ಎರಡನೇ ಹುಟ್ಟುಹಬ್ಬವನ್ನು ಲಾಸ್ ಏಂಜಲೀಸ್ನ ದೇವಸ್ಥಾನದಲ್ಲಿ ಆಚರಿಸಿದ್ದರು.
ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ ಕೊನೆಯದಾಗಿ ಸ್ಯಾಮ್ ಹ್ಯೂಘನ್ ಜೊತೆಗೆ ಲವ್ ಎಗೇನ್ ಎಂಬ ರೋಮ್ಯಾಂಟಿಕ್ ಕಾಮಿಡಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವು 2016 ರ ಜರ್ಮನ್ ಚಲನಚಿತ್ರ SMS ಫರ್ ಡಿಚ್ನ ಇಂಗ್ಲಿಷ್ ರಿಮೇಕ್ ಆಗಿದೆ. ಮುಂದೆ ಪ್ರಿಯಾಂಕಾ ಆಕ್ಷನ್ ಕಾಮಿಡಿ ಚಿತ್ರವಾದ ಹೆಡ್ಸ್ ಆಫ್ ಸ್ಟೇಟ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications