ಬಾಲಿವುಡ್ ನಟಿ ಶ್ರೀದೇವಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸ್ಪೋಟಕ ಸೀಕ್ರೆಟ್ ರಿವೀಲ್ ಮಾಡಿದ ಪತಿ ಬೋನಿ ಕಪೂರ್
ಬಾಲಿವುಡ್ ಹಿರಿಯ ನಟಿ ಶ್ರೀದೇವಿಯ ಸಾವು ಸಹಜವಾದ ಸಾವಲ್ಲ ಎಂದು ಪತಿ ಬೋನಿ ಕಪೂರ್ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ನಿಧನರಾದ ನಟಿ ಶ್ರೀದೇವಿ ಬಗ್ಗೆ ಪತಿ ಬೋನಿ ಕಪೂರ್ ಹಲವಾರು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.
ನಟಿ ಶ್ರೀದೇವಿ ಇಂದು ನಮ್ಮ ನಡುವೆ ಇಲ್ಲದಿರಬಹುದು, ಆದರೆ ಅವರ ಅತ್ಯುತ್ತಮ ಅಭಿನಯ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇವತ್ತಿಗೂ ಇಂಡಸ್ಟ್ರಿಯ 'ಚಾಂದಿನಿ' ಹಾಡಿಗೆ ಎಲ್ಲರೂ ಹುಚ್ಚೆದ್ದು ಕುಣಿಯುತ್ತಾರೆ. ಹೀಗಾಗಿ ನಟಿ ತಮ್ಮ ಅಭಿಮಾನಿಗಳ ಹೃದಯದಲ್ಲಿ ಇನ್ನೂ ಜೀವಂತವಾಗಿದ್ದಾರೆ.

ಅವರು ಅಗಲಿ ಈಗ ಹಲವು ವರ್ಷಗಳು ಕಳೆದಿವೆ. ಇತ್ತೀಚೆಗೆ ನಿಧನರಾದ ನಟಿ ಶ್ರೀದೇವಿಯ ಪತಿ ಬೋನಿ ಕಪೂರ್ ಅವರ ಸಾವಿಗೆ ಸಂಬಂಧಿಸಿದಂತೆ ಹಲವು ಬಹಿರಂಗಪಡಿಸಿದ್ದಾರೆ. ನಟಿಯ ಸಾವಿಗೂ ಮುನ್ನ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರ ಬಗ್ಗೆ ಅವರು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ದಿವಂಗತ ನಟಿ ಸಾವಿನ ಬಗ್ಗೆ ಬೋನಿ ಹೇಳಿದ್ದು ಹೀಗೆ- 'ಇದು ಸಹಜ ಸಾವಲ್ಲ. ಅದೊಂದು ಆಕಸ್ಮಿಕ ಸಾವು. ನನ್ನ ವಿಚಾರಣೆ ನಡೆಸಿದಾಗ ಸುಮಾರು 24 ಅಥವಾ 48 ಗಂಟೆಗಳ ಕಾಲ ನಾನು ಅದರ ಬಗ್ಗೆ ಮಾತನಾಡದೇ ಇರಲು ನಿರ್ಧರಿಸಿದೆ. ವಾಸ್ತವವಾಗಿ, ಭಾರತೀಯ ಮಾಧ್ಯಮಗಳಿಂದ ಹೆಚ್ಚಿನ ಒತ್ತಡವಿದ್ದ ಕಾರಣ ನಾವು ಇದನ್ನು ಮಾತಾಬೇಕಾಯಿತು' ಎಂದಿದ್ದಾರೆ.
ಶ್ರೀದೇವಿ ಸಾವಿನ ಬಗ್ಗೆ ಬೋನಿ ಕಪೂರ್ ಹೇಳಿಕೆ
ಬೋನಿ ಕಪೂರ್ ಅವರು, 'ಈ ಪ್ರಕರಣದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಲಾಯಿತು. ಹಾಗಾಗಿ ನಾನು ಸುಳ್ಳು ಪತ್ತೆ ಪರೀಕ್ಷೆ ಮತ್ತು ಉಳಿದಂತೆ ಎಲ್ಲಾ ಪರೀಕ್ಷೆಗಳ ಮೂಲಕ ಸತ್ಯದ ಜಾಡು ಹಿಡಿದು ಹೋದೆ. ಇದೆಲ್ಲದರ ನಂತರ ಬಂದ ವರದಿಯಲ್ಲಿ ಇದು ಆಕಸ್ಮಿಕ ಎಂದು ಸ್ಪಷ್ಟವಾಗಿ ತಿಳಿಯಿತು. ಅವರು ಅಗಲಿರುವುದು ನೋಡಿ ನನಗೆ ತುಂಬಾ ಬೇಸರವಾಗಿದೆ, ಆದರೆ ಅವರ ಮರಣದ ನಂತರ ನಡೆದ ಸಂಗತಿಗಳು ಸರಿಯಾಗಿಲ್ಲ ಮತ್ತು ಅದು ನನ್ನನ್ನು ಹೆಚ್ಚು ಬೇಸರಗೊಳಿಸಿವೆ' ಎಂದು ಹೇಳಿದ್ದಾರೆ.

ಶ್ರೀದೇವಿ ಚೆನ್ನಾಗಿ ಕಾಣಬೇಕೆಂದು ಬಯಸಿದ್ದರು
ಶ್ರೀದೇವಿ ಸಾಯುವ ಸಮಯಕ್ಕೂ ಮುನ್ನ ಆಹಾರ ಕ್ರಮದಲ್ಲಿದ್ದರು ಎಂದು ಬೋನಿ ಹೇಳಿದರು. 'ಆಕೆಗೆ ಆಗಾಗ ಹಸಿವಾಗುತ್ತಿತ್ತು. ಅವಳು ಚೆನ್ನಾಗಿ ಕಾಣಬೇಕೆಂದು ಬಯಸಿದ್ದರಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ತೆರೆಯ ಮೇಲೆ ಚೆನ್ನಾಗಿ ಕಾಣಲು ಆಕೆ ಸುಸ್ಥಿತಿಯಲ್ಲಿರಬೇಕೆಂದು ಬಯಸಿದ್ದಳು. ಅವಳು ನನ್ನನ್ನು ಮದುವೆಯಾದಾಗಿನಿಂದ, ಅವಳಿಗೆ ಕೆಲವು ಸಂದರ್ಭಗಳಲ್ಲಿ ಕ್ರ್ಯಾಶ್ ಡಯಟ್ ಇತ್ತು ಮತ್ತು ಅವಳಿಗೆ ಕಡಿಮೆ ರಕ್ತದೊತ್ತಡದ ಸಮಸ್ಯೆ ಇದೆ ಎಂದು ವೈದ್ಯರು ಹೇಳುತ್ತಿದ್ದರು. ಇಂಗ್ಲಿಷ್ ವಿಂಗ್ಲಿಷ್ನಂತಹ ಚಿತ್ರಗಳಲ್ಲಿ ಶ್ರೀದೇವಿ ತೂಕವನ್ನು 46-47 ಕೆಜಿಗೆ ಇಳಿದಿದ್ದರು ಎಂದು ಅವರು ಹೇಳಿದರು' ಎಂದು ಹೇಳಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications