ಕಿಯಾರಾ ಫ್ಯಾನ್ಸ್ಗೆ ಭಾರೀ ನಿರಾಸೆ: ವಾರ್-2 ಸಿನಿಮಾದ ಈ ಪ್ರಮುಖ ದೃಶ್ಯಗಳಿಗೆ ಕತ್ತರಿ!
ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿಗೆ (Kiara Advani) ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ, ಟಾಲಿವುಡ್ನಲ್ಲೂ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಸಿನಿಮಾ ಮೂಲಕ ಕನ್ನಡಕ್ಕೂ ಕಾಲಿಡುತ್ತಿದ್ದಾರೆ. ಇದಕ್ಕೂ ಮುನ್ನ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ಜೊತೆ ಕಿಯಾರ ನಟಿಸಿರುವ ವಾರ್ 2 ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಕಿಯಾರ ಅವರ ಹಾಟ್ ದೃಶ್ಯಗಳಿವೆ ಎಂದು ಹೇಳಲಾಗಿತ್ತು. ಇದರ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾವನ್ನೇ ಶೇಕ್ ಮಾಡಿದ್ದವು. ಆದರೆ ಕಿಯಾರ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರಬಿದ್ದಿದೆ.
ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಅವರ ಕಾಂಬಿನೇಷನ್ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಿಲೀಸ್ ಆಗುತ್ತಿರುವ ಹೊತ್ತಲ್ಲೇ ಈ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ಶಾಕ್ ಕೊಟ್ಟಿದೆ. ಬಿಡುಗಡೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು, ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಈ ಚಿತ್ರತಂಡಕ್ಕೆ ಕೆಲವು ಬದಲಾವಣೆಗಳನ್ನು ಮಾಡುವಂತೆ ಸೂಚಿಸಿದೆ.

ಯಾವುದು ಆ ದೃಶ್ಯಗಳು?
ವಾರ್ 2 ಸಿನಿಮಾದಲ್ಲಿ ನಟಿ ಕಿಯಾರಾ ಅಡ್ವಾಣಿ ಅವರು ಪಡ್ಡೆಹುಡುಗರ ನಿದ್ದೆಗೆಡಿಸುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಇದರ ಫೋಟೋ ಹಾಗೂ ವಿಡಿಯೋಗಳು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ನಟಿ ಕಿಯಾರ ಅವರು ತುಂಡುಡುಗೆ ತೊಟ್ಟು, ಸ್ವಿಮ್ಮಿಂಗ್ ಪೂಲ್ ಬಳಿ ಬೋಲ್ಡ್ ಪೋಸ್ಗಳನ್ನು ನೀಡಿದ್ದರು. ಹಳದಿ ಬಣ್ಣದ ಬಿಕಿನಿ ತೊಟ್ಟು ಕಿಯಾರಾ ತನ್ನ ಅಂದ ಪ್ರದರ್ಶಿಸಿದ್ದರು. ಈ ಸೀನ್ಗಳಿಂದಲೇ ಹಲವರಿಗೆ ವಾರ್ 2 ಸಿನಿಮಾ ಮೇಲೆ ಆಸಕ್ತಿ ಹೆಚ್ಚಾಗಿತ್ತು. ಆದರೆ ಈಗ ಆ ದೃಶ್ಯಗಳನ್ನು ತೆಗೆದು ಹಾಕುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಖಡಕ್ ಆಗಿ ಹೇಳಿದೆ.
ಈ ಸಿನಿಮಾದಲ್ಲಿರುವ ಕೆಲ ದೃಶ್ಯಗಳನ್ನು ಶೇ 50ರಷ್ಟು ಕಡಿಮೆ ಮಾಡಲು ಸಿಬಿಎಫ್ಸಿ ಕೇಳಿಕೊಂಡಿದೆ. ಅವುಗಳಲ್ಲಿ ಒಂದು ಈಜುಡುಗೆಯಲ್ಲಿ ಕಿಯಾರಾ ಅಡ್ವಾಣಿಯವರ ದೃಶ್ಯಗಳಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಇದಲ್ಲದೆ ಇತರ ಕೆಲವು ಅನುಚಿತ ಕಂಟೆಂಟ್ ಹಾಗೂ ಹೇಳಿಕೆಗಳನ್ನು ಮ್ಯೂಟ್ ಮಾಡುವಂತೆ ಕೇಳಲಾಗಿದೆ.
ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಯನ್ ಮುಖರ್ಜಿ ಅವರ ವಾರ್ 2 ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್ಟಿಆರ್ ಜೊತೆ ನಟಿಸಿರುವ ಕಿಯಾರಾ ಅಡ್ವಾಣಿ ಅವರ ಬಿಕಿನಿ ಫೋಟೋಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ. ಆಡಿಯೋ ಮತ್ತು ದೃಶ್ಯ ವಿಭಾಗಗಳಲ್ಲಿ ಆರು ಕಡೆ ಅನುಚಿತ ಉಲ್ಲೇಖಗಳನ್ನು ಮ್ಯೂಟ್ ಮಾಡಲು ನಿರ್ಮಾಪಕರಿಗೆ ಸೂಚಿಸಲಾಗಿದೆ. ಅಶ್ಲೀಲ ಸಂಭಾಷಣೆಯನ್ನು ಕೂಡ ಬದಲಾಯಿಸಲಾಯಿತು. ಸೆನ್ಸಾರ್ ಮಂಡಳಿಯು ಪ್ರಮುಖವಾಗಿ 9 ಸೆಕೆಂಡುಗಳ ದೃಶ್ಯಗಳನ್ನು ತೆಗೆದುಹಾಕುವಂತೆ ನಿರ್ಮಾಪಕರಿಗೆ ನಿರ್ದೇಶನ ನೀಡಿದೆ. ಇದರಿಂದ ಕಿಯಾರಾ ಅವರ ಫ್ಯಾನ್ಸ್ಗೆ ಭಾರೀ ನಿರಾಸೆಯಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications