ಚೈತ್ರಾ ಕುಂದಾಪುರ ದೊಡ್ಡ ಕಳ್ಳಿ: ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಆಕ್ರೋಶ
ಹಿಂದೂಪರ ಸಂಘಟನೆಯ ನಾಯಕಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು, ದೇಶಪ್ರೇಮದ ಭಾಷಣಗಳನ್ನು ಮಾಡಿ ಜನಪ್ರಿಯತೆ ಗಳಿಸಿದ್ದರು. ಬಳಿಕ ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸಹ ಸೇರಿದರು. ಬಳಿಕ ಬಿಗ್ಬಾಸ್ ಮತ್ತು ಇತರೆ ರಿಯಾಲಿಟಿ ಶೋಗಳಿಂದಾಗಿ ಮತ್ತೆ ಜನಪ್ರಿಯತೆ ಗಳಿಸಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೆ ಚೈತ್ರಾ ಕುಂದಾಪುರ ಅವರು ಪ್ರೀತಿಸಿದ ಹುಡುಗನ ಜೊತೆಗೆ ಮದುವೆ ಆಗಿದ್ದಾರೆ. ಇದೀಗ ಚೈತ್ರಾ ಕುಂದಾಪುರ ಅವರ ತಂದೆ, ಮಗಳ ವಿರುದ್ಧ ಹಲವು ಆರೋಪಗಳನ್ನ ಬಿಚ್ಚಿಟ್ಟು, ಅಪ್ಪನಿಗೆ ಒಂದು ತುತ್ತು ಊಟ ಹಾಕದ ಆಕೆಯದ್ದು ಎಂಥಹಾ ದೇಶಪ್ರೇಮ ಎಂದು ಪ್ರಶ್ನೆ ಮಾಡಿದ್ದಾರೆ.
ಹಿಂದೂಪರ ಸಂಘಟನೆಯ ನಾಯಕಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11ರʼ ಫೈರ್ಬ್ರ್ಯಾಂಡ್ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್ ಕಶ್ಯಪ್ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಸಾಲು ಸಾಲು ಆರೋಪಗಳನ್ನ ಮಾಡಿದ್ದಾರೆ. ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ನನ್ನ ಮಗಳು ದೊಡ್ಡ ಕಳ್ಳಿ. ನನ್ನನ್ನು ಮದುವೆಗೆ ಆಹ್ವಾನಿಸಿಲ್ಲ. ಕಳ್ಳರ ಮದುವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಚೈತ್ರ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಕಳ್ಳರು ಕಳ್ಳರು ಮದುವೆಯಾಗಿದ್ದಾರೆ. ಆಕೆ ನನ್ನನ್ನು ಕರೆದಿಲ್ಲ ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ.
ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ ಎಂದು ಬಾಲಕೃಷ್ಣ ನಾಯ್ಕ್, ಮಗಳು ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.

ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯ. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ, ನನಗೆ ಸರಿಯಾಗಿ ಆಮಂತ್ರಣ ಕೂಡ ನೀಡಿಲ್ಲ. ಚೈತ್ರಾ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು, ನಾನು ಹೋಟೆಲ್ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ ಎಂದು ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ.
ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಶಾಲೆ ಕೆಲಸ ಮಾಡಿಕೊಂಡು ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲೆಯೂ ಚೈತ್ರಾ ಸುಳ್ಳು ಅಪವಾದ ಹಾಕಿದ್ದಳು. ಅವರಿಗೆ ಮಾನ ಮರ್ಯಾದೆ ಇಲ್ಲ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದರು ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ ಎಂದು ಬಾಲಕೃಷ್ಣ ನಾಯ್ಕ್ ಅವರು ಮಗಳ ಮೇಲೆ ಆರೋಪಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications