Get Updates
Get notified of breaking news, exclusive insights, and must-see stories!

ಚೈತ್ರಾ ಕುಂದಾಪುರ ದೊಡ್ಡ ಕಳ್ಳಿ: ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಆಕ್ರೋಶ

ಹಿಂದೂಪರ ಸಂಘಟನೆಯ ನಾಯಕಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರು, ದೇಶಪ್ರೇಮದ ಭಾಷಣಗಳನ್ನು ಮಾಡಿ ಜನಪ್ರಿಯತೆ ಗಳಿಸಿದ್ದರು. ಬಳಿಕ ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸಹ ಸೇರಿದರು. ಬಳಿಕ ಬಿಗ್ಬಾಸ್ ಮತ್ತು ಇತರೆ ರಿಯಾಲಿಟಿ ಶೋಗಳಿಂದಾಗಿ ಮತ್ತೆ ಜನಪ್ರಿಯತೆ ಗಳಿಸಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೆ ಚೈತ್ರಾ ಕುಂದಾಪುರ ಅವರು ಪ್ರೀತಿಸಿದ ಹುಡುಗನ ಜೊತೆಗೆ ಮದುವೆ ಆಗಿದ್ದಾರೆ. ಇದೀಗ ಚೈತ್ರಾ ಕುಂದಾಪುರ ಅವರ ತಂದೆ, ಮಗಳ ವಿರುದ್ಧ ಹಲವು ಆರೋಪಗಳನ್ನ ಬಿಚ್ಚಿಟ್ಟು, ಅಪ್ಪನಿಗೆ ಒಂದು ತುತ್ತು ಊಟ ಹಾಕದ ಆಕೆಯದ್ದು ಎಂಥಹಾ ದೇಶಪ್ರೇಮ ಎಂದು ಪ್ರಶ್ನೆ ಮಾಡಿದ್ದಾರೆ.

ಹಿಂದೂಪರ ಸಂಘಟನೆಯ ನಾಯಕಿ ಹಾಗೂ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರʼ ಫೈರ್‌ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್‌ ಕಶ್ಯಪ್‌ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಸಾಲು ಸಾಲು ಆರೋಪಗಳನ್ನ ಮಾಡಿದ್ದಾರೆ. ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್‌ ಅವರು ನನ್ನ ಮಗಳು ದೊಡ್ಡ ಕಳ್ಳಿ. ನನ್ನನ್ನು ಮದುವೆಗೆ ಆಹ್ವಾನಿಸಿಲ್ಲ. ಕಳ್ಳರ ಮದುವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Chaitra Kundapura father allegations against her daughter

ಚೈತ್ರ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್‌ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಕಳ್ಳರು ಕಳ್ಳರು ಮದುವೆಯಾಗಿದ್ದಾರೆ. ಆಕೆ ನನ್ನನ್ನು ಕರೆದಿಲ್ಲ ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ.

ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ ಎಂದು ಬಾಲಕೃಷ್ಣ ನಾಯ್ಕ್‌, ಮಗಳು ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.

Chaitra Kundapura father allegations against her daughter

ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯ. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ, ನನಗೆ ಸರಿಯಾಗಿ ಆಮಂತ್ರಣ ಕೂಡ ನೀಡಿಲ್ಲ. ಚೈತ್ರಾ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು, ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ ಎಂದು ಬಾಲಕೃಷ್ಣ ನಾಯ್ಕ್‌ ಹೇಳಿದ್ದಾರೆ.

ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಶಾಲೆ ಕೆಲಸ ಮಾಡಿಕೊಂಡು ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲೆಯೂ ಚೈತ್ರಾ ಸುಳ್ಳು ಅಪವಾದ ಹಾಕಿದ್ದಳು. ಅವರಿಗೆ ಮಾನ ಮರ್ಯಾದೆ ಇಲ್ಲ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದರು ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ ಎಂದು ಬಾಲಕೃಷ್ಣ ನಾಯ್ಕ್ ಅವರು ಮಗಳ ಮೇಲೆ ಆರೋಪಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+