Darshan : ಏಳಿಗೆ ಸಹಿಸದ ಆತ್ಮೀಯರಿಗೆ ಹೇಳುವುದು ಒಂದೇ ಮಾತು...! ವಿರೋಧಿಗಳಿಗೆ ದರ್ಶನ್ ಹೇಳಿದ್ದೇನು?
ಕಾಟೇರ ಸಿನಿಮಾ ಯಶಸ್ಸಿನ ಅಲೆಯಲ್ಲಿರುವ ನಟ ದರ್ಶನ್ ತೂಗುದೀಪ ಅಭಿಮಾನಿಗಳಿಗೆ ಧನ್ಯವಾದ ಹೇಳುವ ಜೊತೆಗೆ ವಿರೋಧಿಗಳಿಗೆ ಮಾತಿನ ಏಟು ನೀಡಿದ್ದಾರೆ. ಕರ್ನಾಟಕದಲ್ಲಿ ಭರ್ಜರಿ ಗೆಲುವು ಕಂಡಿರುವ ಕಾಟೇರ ಈಗ ವಿದೇಶಗಳಲ್ಲಿ ಕೂಡ ಸದ್ದು ಮಾಡುತ್ತಿದೆ. ದುಬೈನಲ್ಲಿ ನಡೆದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಕೂಡ ಭಾಗವಹಿಸಿ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ್ದಾರೆ.
ಅಮೆರಿಕ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ದುಬೈ, ಒಮನ್ ಸೇರಿದಂತೆ ಹಲವು ದೇಶಗಳಲ್ಲಿ ಕಾಟೇರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲೂ ಕೂಡ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಸಖತ್ ಖುಷಿ ಕೊಟ್ಟಿದೆ. ಸಿನಿಮಾಗೆ ಸಿಕ್ಕ ಭರ್ಜರಿ ಗೆಲುವಿನ ಬಗ್ಗೆ ಈ ಮೊದಲು ಟ್ವೀಟ್ ಮಾಡಿ ದರ್ಶನ್ ಅಭಿಮಾನಿಗಳಿಗೆ ವಂದನೆ ಸಲ್ಲಿಸಿದ್ದರು. ವಿದೇಶದಲ್ಲಿ ಸಿಕ್ಕ ಪ್ರೀತಿ ನೋಡಿ ಮತ್ತೆ ಸೆಲೆಬ್ರಿಟಿಸ್ಗೆ ಅಭಿನಂದನೆ ಸಲ್ಲಿಸಿದ್ದು, ವಿರೋಧಿಗಳನ್ನು ಕೂಡ ನೆನಪಿಸಿಕೊಂಡಿದ್ದಾರೆ.

ದರ್ಶನ್ ಟ್ವೀಟ್ನಲ್ಲಿ ಏನಿದೆ?
"ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ" ಎಂದು ಟ್ವೀಟ್ ಮಾಡಿದ್ದು ಕುತೂಹಲ ಕೆರಳಿಸಿದೆ.
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ… pic.twitter.com/23PvJxxea0
— Darshan Thoogudeepa (@dasadarshan) January 9, 2024
ದರ್ಶನ್ ಹಿಂಗೆ ಹೇಳಲು ಕಾರಣವೇನು?
ಕಾಟೇರ ಸಿನಿಮಾ ದರ್ಶನ್ ಸಿನಿಜೀವನದ ದೊಡ್ಡ ಗೆಲುವು ಎಂದೇ ಪರಿಗಣಿಸಲಾಗಿದೆ. ಆದರೂ ಕೆಲವರು ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಲು ಪ್ರಯತ್ನಿಸಿದ್ದರು. ಕೆಲವರು ಪೈರಸಿ ಕೂಡ ಮಾಡಿದ್ದರು. ಪೈರಸಿ ಮಾಡುವವರಿಗೆ ಬಹಿರಂಗವಾಗಿಯೇ ದರ್ಶನ್ ಎಚ್ಚರಿಕೆ ಕೊಟ್ಟಿದ್ದರು. ಈಗ ಅಂತಹವರಿಗೆ ಈ ಟ್ವೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೆಲ್ಲದರ ನಡುವೆಯೂ ಸಿನಿಮಾ ಜನಮನ ಗೆದ್ದಿದೆ, ಹಳ್ಳಿಗಾಡಿನ ಜನ ಕೂಡ ಟ್ರಾಕ್ಟರ್ ಗಳಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ವಿಮರ್ಶಕರು, ಪ್ರೇಕ್ಷಕರು ಸಿನಿಮಾ ಮೆಚ್ಚಿದ್ದಾಗಿದೆ. ಎರಡನೇ ವಾರ ಕೂಡ ಕಾಟೇರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಗಳಿಕೆಯಲ್ಲೂ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ.
ಕಾಟೇರ ಸಿನಿಮಾ ಬಳಿಕ ದರ್ಶನ್ ಡೆವಿಲ್ ಎನ್ನುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಪ್ರೇಮ್ ಜೊತೆಗಿನ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕರಿಯ ಬಳಿಕ ಈ ಜೋಡಿ ಒಂದಾಗುತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications